ಉದ್ಯೋಗ ನಷ್ಟ, ಸಾಲಬಾಧೆಗೆ 25 ಸಾವಿರ ಮಂದಿ ಸಾವು!
ರಾಜ್ಯಸಭೆಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ರಾಯ್ ಮಾಹಿತಿ
Team Udayavani, Feb 10, 2022, 7:45 AM IST
ನವದೆಹಲಿ: ದೇಶದಲ್ಲಿ 2018 ಮತ್ತು 2020ರಲ್ಲಿ ಸಾಲದ ಹೊರೆ ಅಥವಾ ಉದ್ಯೋಗ ನಷ್ಟ ಹೊಂದಿದ ಕಾರಣಕ್ಕೆ 25 ಸಾವಿರ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೀಗೆಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಯಲ್ಲಿ ಗೃಹ ಖಾತೆ ಸಹಾಯ ಸಚಿವ ನಿತ್ಯಾನಂದ ರಾಯ್ ಲಿಖಿತ ಉತ್ತರ ನೀಡಿದ್ದಾರೆ.
9,140 ಮಂದಿ ಮತ್ತು 16,091 ಮಂದಿ ಎರಡು ವರ್ಷಗಳ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ (ಎನ್ಸಿಆರ್ಬಿ) ನೀಡಿದ ಮಾಹಿತಿ ಆಧಾರದಲ್ಲಿ ಈ ಮಾಹಿತಿ ನೀಡಲಾಗಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.
ಎನ್ಸಿಆರ್ಬಿ ಪ್ರಕಾರ 2020ರಲ್ಲಿ 3,548 ಮಂದಿ ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ 2,741, 2019ರಲ್ಲಿ 1,851 ಮಂದಿ ಕೆಲಸವಿಲ್ಲ ಎಂಬ ಕಾರಣಕ್ಕಾಗಿ ಸಾವಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:ನಾಳೆ ಯುಪಿ ಮೊದಲ ಹಂತದ ವೋಟಿಂಗ್ : 9 ಸಚಿವರ ಭವಿಷ್ಯ ನಿರ್ಧಾರ
ಸಾಲದ ಬಾಧೆಯಿಂದಾಗಿ ಸಾವಿಗೆ ಶರಣಾದವರ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವರು 2018ರಲ್ಲಿ 4,970, 2019ರಲ್ಲಿ 5,908, 2020ರಲ್ಲಿ 600ರಷ್ಟು ಕಡಿಮೆಯಾಗಿ, 5,213 ಆಗಿತ್ತು ಎಂದು ಹೇಳಿದ್ದಾರೆ ನಿತ್ಯಾನಂದ ರಾಯ್.
ನೊಂದಿರುವವರಿಗೆ ಸಾಂತ್ವನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಯೋಜನೆಯ ಅನ್ವಯ ಜಿಲ್ಲಾ ಮಾನಸಿಕ ಆರೋಗ್ಯ ಯೋಜನೆ ಜಾರಿ ಮಾಡಲಾಗುತ್ತಿದೆ. 692 ಜಿಲ್ಲೆಗಳಲ್ಲಿ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.