Over Speed: ರಾಜ್ಯದ ರಸ್ತೆಗಳಲ್ಲಿ130ಕಿ.ಮೀ.ಕ್ಕಿಂತ ವೇಗಮಿತಿ ಮೀರಿದರೆ ಕೇಸ್‌!

ಸ್ಪಾಟ್‌, ಸೆಕ್ಷನಲ್‌ ಪತ್ತೆ ವ್ಯವಸ್ಥೆ , ಆ. 1ರಿಂದ ರಾಜ್ಯಾದ್ಯಂತ ಜಾರಿ

Team Udayavani, Jul 28, 2024, 7:40 AM IST

Alok-kumar

ರಾಮನಗರ: ರಾಜ್ಯದ ಯಾವುದೇ ರಸ್ತೆಯಲ್ಲಿ 130 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ವಾಹನ ಚಾಲನೆ ಮಾಡಿದರೆ ಆ. 1ರಿಂದ ಪ್ರಕರಣ ದಾಖಲಾಗಲಿದೆ. ಈ ಅಪರಾಧಕ್ಕೆ 2 ಸಾವಿರ ರೂ.ವರೆಗೆ ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ಆಗಬಹುದು.

ಸಂಚಾರ ಪೊಲೀಸರು ಅಥವಾ ಟ್ರಾಫಿಕ್‌ ಇಂಟರ್‌ ಸೆಪ್ಟರ್‌ ಮೂಲಕ ಅತೀ ವೇಗದ ವಾಹನ ಚಾಲನೆ ಗುರುತಿಸುವುದಲ್ಲ. ಬದಲಾಗಿ ಸ್ಪಾಟ್‌ ಮತ್ತು ಸೆಕ್ಷನಲ್‌ ಸ್ವರೂಪ- ಹೀಗೆ ಎರಡು ರೀತಿಯಲ್ಲಿ ಅತೀ ವೇಗದ ವಾಹನ ಚಾಲನೆಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗುತ್ತದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಮಿತಿಮೀರಿದ ವೇಗದ ಚಾಲನೆ ಪೊಲೀಸರಿಗೆ ದೊಡ್ಡ ತಲೆನೋವು ಉಂಟು ಮಾಡಿತ್ತು. ಇದರಿಂದ ಅಪಘಾತಗಳು ಹೆಚ್ಚಿದ್ದವು. ಇದಕ್ಕೆ ದಂಡ ವಿಧಿಸುವ ಕ್ರಮ ಅನುಸರಿಸಲಾಗಿತ್ತಾದರೂ ಕೆಲವು ವಾಹನ ಚಾಲಕರು ಕೆಮರಾ ಇರುವಲ್ಲಿ ಮಾತ್ರ ನಿಧಾನವಾಗಿ ಚಲಿಸಿ, ಆ ಸ್ಥಳ ದಾಟಿದ ಮೇಲೆ ವೇಗ ಹೆಚ್ಚಿಸುವುದು ಸೇರಿದಂತೆ ಹಲವು ಕಣ್ತಪ್ಪಿಸುವ ತಂತ್ರಗಳನ್ನು ಅನುಸರಿಸುತ್ತಿದ್ದರು. ಹೀಗಾಗಿ ವಾಹನ ಸವಾರರು ಚಾಪೆ ಕೆಳೆಗೆ ತೂರಿದರೆ ಪೊಲೀಸರು ರಂಗೋಲಿ ಕೆಳಗೆ ತೂರಲು ಹೊರಟಿದ್ದಾರೆ.

ಆ. 1ರಿಂದ ಎಫ್‌ಐಆರ್‌
ಮಿತಿಮೀರಿದ ವೇಗಕ್ಕೆ ಕಡಿವಾಣ ಹಾಕುವುದಕ್ಕಾಗಿ 130 ಕಿ.ಮೀ.ಗಿಂತ ವೇಗವಾಗಿ ವಾಹನ ಚಾಲನೆ ಮಾಡಿದಲ್ಲಿ ಅದನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆ ಎಂದು ಪರಿಗಣಿಸಿ ಅಂತಹ ವಾಹನಗಳ ಮಾಲಕರ ವಿರುದ್ಧ ಆ. 1ರಿಂದ ಎಫ್‌ಐಆರ್‌ ದಾಖಲಿಸಲಾಗುತ್ತದೆ.

ಏನಿದು ಸ್ಪಾಟ್‌ ಮತ್ತು ಸೆಕ್ಷನಲ್‌ ಮಾಪನ?
ಸ್ಪಾಟ್‌ ಅಂದರೆ, ಆ ಕ್ಷಣದಲ್ಲಿ ಎಷ್ಟು ವೇಗದಲ್ಲಿ ವಾಹನ ಸಾಗುತ್ತಿದೆ ಎಂಬುದನ್ನು ಕೆಮರಾ ನೆರವಿನಿಂದ ಮಾಪನ ಮಾಡುವುದು. ಸೆಕ್ಷನಲ್‌ ಅಂದರೆ, ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ವಾಹನ ಎಷ್ಟು ಸಮಯದಲ್ಲಿ ಬಂತು ಎಂಬುದನ್ನು ಅಳೆದು ವೇಗವನ್ನು ಲೆಕ್ಕ ಹಾಕುವುದು. ಕೆಮರಾ ಕಂಡಾಗ ವಾಹನವನ್ನು ನಿಧಾನ ಮಾಡಿ, ಕೆಮರಾ ಮರೆಯಾಗುತ್ತಲೇ ವೇಗ ಹೆಚ್ಚಿಸುವ ವಾಹನ ಚಾಲಕರಿಗೆ ಕಡಿವಾಣ ಹಾಕಲು ಈ ವಿನೂತನ ಉಪಾಯವನ್ನು ಪೊಲೀಸರು ಹೂಡಿದ್ದಾರೆ.

“ಶೇ. 99ರಷ್ಟು ಅಪಘಾತಗಳು ಮಿತಿಮೀರಿದ ವೇಗದ ಸಂಚಾರದಿಂದಲೇ ಸಂಭವಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಆ. 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಸ್ಪಾಟ್‌ ಸ್ಪೀಡ್‌ ಮತ್ತು ಸೆಕ್ಷನಲ್‌ ಸ್ಪೀಡ್‌ ಎಂದು ಎರಡು ರೀತಿಯಲ್ಲಿ ವಾಹನಗಳ ವೇಗವನ್ನು ಅಳೆಯಲಾಗುವುದು.” – ಅಲೋಕ್‌ ಕುಮಾರ್‌, ಎಡಿಜಿಪಿ, ಸಂಚಾರ ಮತ್ತು ರಸ್ತೆ ಸುರಕ್ಷೆ ವಿಭಾಗ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.