Padubidri Mahaganapathi ; “ಕಟ್ಟದಪ್ಪ ಪ್ರಿಯ’ ಪಡುಬಿದ್ರಿ ಗಣಪತಿ-ತಯಾರಿ ಹೇಗೆ?

ರೈತಾಪಿ ವರ್ಗವು ಸಮರ್ಪಿಸುವ ಅಪ್ಪಸೇವೆಗೆ "ಕಟ್ಟದಪ್ಪ'ವೆಂಬ ಹೆಸರು ಬಂತೆನ್ನುವುದು ಪ್ರಚಲಿತವಿದೆ.

Team Udayavani, Aug 8, 2023, 11:46 AM IST

Padubidri Mahaganapathi ; “ಕಟ್ಟದಪ್ಪ ಪ್ರಿಯ’ ಪಡುಬಿದ್ರಿ ಗಣಪತಿ-ತಯಾರಿ ಹೇಗೆ?

ಪಡುಬಿದ್ರಿ: ಪಡುಬಿದ್ರಿ ಗಣಪತಿಯು “ಕಟ್ಟದಪ್ಪ’ (ಕಟಾಹಾ ಪೂಪ) ಪ್ರಿಯನಾಗಿದ್ದು ಆ. 11ಹಾಗೂ 12ರಂದು ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ಸನ್ನಿಧಾನದಲ್ಲಿ ಈ ಬಾರಿಯ ಸಾರ್ವಜನಿಕ ಅಪ್ಪ ಸೇವೆಯು ನಡೆಯಲಿದೆ.

ಮಳೆಗಾಲದಲ್ಲಿ ನೀರ ತೋಡುಗಳಿಗೆ “ಕಟ್ಟ'(ಒಡ್ಡು)ಗಳನ್ನು ಕಟ್ಟಿಕೊಂಡು ಗದ್ದೆಗಳಿಗೆ ನೀರೊಡ್ಡುತ್ತಿದ್ದರು. ಈ ಒಡ್ಡುಗಳ ರಕ್ಷಣೆ ಮತ್ತು ಹೇರಳ ನೀರಾಶ್ರಯವು ನಿರ್ವಿಘ್ನವಾಗಿ ದೊರೆಯಲೆಂದು ಗ್ರಾಮ ದೇವರಿಗೆ ಹರಕೆ ರೂಪದಲ್ಲಿ ರೈತಾಪಿ ವರ್ಗವು ಸಮರ್ಪಿಸುವ ಅಪ್ಪಸೇವೆಗೆ “ಕಟ್ಟದಪ್ಪ’ವೆಂಬ ಹೆಸರು ಬಂತೆನ್ನುವುದು ಪ್ರಚಲಿತವಿದೆ.

ಈ ಅಪ್ಪಕ್ಕೆ ಕಟಾಹಾಪೂಪವೆಂತಲೂ ಹೆಸರಿದ್ದು ದೊಡ್ಡ, ದೊಡ್ಡ ಕಟಾಹಗಳಲ್ಲಿ ಈ ಅಪ್ಪಗಳನ್ನು ಮಹಾಗಣಪತಿಗೆ
ಅರ್ಪಿಸುವುದರಿಂದಲೂ ಈ ಹೆಸರೂ ಚಾಲ್ತಿಯಲ್ಲಿದೆ. ಕಟ್ಟದಪ್ಪ ಸೇವೆಯ ದಿನ ರಾತ್ರಿ ಪೂಜೆಯ ಸಂದರ್ಭ ಊರ ಪ್ರಮುಖರ ಸಹಿತ ಕೃಷಿಕರೆಲ್ಲರೂ ದೇಗುಲದಲ್ಲಿ ಸೇರುತ್ತಾರೆ.

ಸಾಮೂಹಿಕವಾಗಿ ಶ್ರೀ ಮಹಾಲಿಂಗೇಶ್ವರ ಹಾಗೂ ಪ್ರಧಾನವಾಗಿ ಶ್ರೀ ಮಹಾಗಣಪತಿ ದೇವರಲ್ಲಿ ತಮ್ಮ ಧನ ಧಾನ್ಯ ಸಮೃದ್ಧಿಗಾಗಿ
ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ. ರಾತ್ರಿ ಪೂಜೆಯ ಸಂದರ್ಭದಲ್ಲಿನ ಈ ಸೇವೆಗಾಗಿ ಬೆಳಗ್ಗಿನಿಂದಲೇ ಬಾಣಸಿಗರು ದೊಡ್ಡ ದೊಡ್ಡ ಬಾಣಲೆಯಲ್ಲಿ ಅಪ್ಪ ತಯಾರಿಸುತ್ತಾರೆ. ಇವುಗಳನ್ನು ಮುಂದೆ ದೊಡ್ಡ ದೊಡ್ಡ ಕಟಾಹಗಳಲ್ಲಿ ತುಂಬಿ ಸಮರ್ಪಣೆ
ಗಾಗಿ ಅಣಿಗೊಳಿಸಲಾಗುತ್ತದೆ. ಪೂಜೆ, ಪ್ರಾರ್ಥನೆಗಳ ಬಳಿಕ ಸಾಮೂಹಿಕ ಪ್ರಸಾದ ವಿತರಣೆಯೂ ಆರಂಭಗೊಳ್ಳುತ್ತದೆ.

ಇತಿಹಾಸ:

ಅಪರಿಮಿತ ಖ್ಯಾತಿಯ “ಪೊಟ್ಟಪ್ಪ’ ಸೇವೆ ಬ್ರಿಟಿಷ್‌ ಅಧಿಕಾರಿಯೊಬ್ಬ ಗ್ರಾಮದಲ್ಲಿ ಸಂಚಾರಕ್ಕೆ ಕುದುರೆಯನ್ನೇರಿ ಬಂದಿದ್ದಾಗ
ಹೆದ್ದಾರಿಯಲ್ಲಿ ಸಾಗುತ್ತಿರಬೇಕಾದರೆ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದ ಮುಂಭಾಗದಲ್ಲೇ ಕುದುರೆ ಆಯತಪ್ಪಿ ಬಿದ್ದಾಗ ಅಧಿಕಾರಿಯೂ ಕೆಳಕ್ಕೆ ಬೀಳುವಂತಾಯಿತು.

ಆಗ ಯಾಕೆ ಹೀಗಾಯಿತ್ತೆನ್ನುವ ಬಗೆಗೆ ವಿಚಾರಿಸಿಕೊಂಡ ಅಧಿಕಾರಿಗೆ ಪಡುಬಿದ್ರಿ ಗಣಪತಿಯ ದರ್ಶನವನ್ನು ತಾನು ಮಾಡಿಲ್ಲವೆಂಬ ತಪ್ಪಿನ ಅರಿವಾಗಿತ್ತಂತೆ. ಅಂದಿನಿಂದಲೇ ಆತನ ಫರ್ಮಾನಿನಂತೆಯೇ ಪಡುಬಿದ್ರಿ ಗಣಪತಿಗೆ ಬರೀ ಅಕ್ಕಿ, ತೆಂಗಿನಕಾಯಿ ಹಾಗೂ ಉಪ್ಪುಗಳ ಮಿಶ್ರಣಗಳುಳ್ಳ “ಪೊಟ್ಟಪ್ಪ’ ಸೇವೆಯೂ ನಿತ್ಯ ನಡೆಯುತ್ತಲೇ ಬಂದಿದೆ.

ತಯಾರಿ ಹೇಗೆ?
ಈ ಬಾರಿ 80 ಮುಡಿ ಅಕ್ಕಿಯ ಕಟ್ಟದಪ್ಪವು ಶ್ರೀ ಮಹಾಗಣಪತಿಗೆ ಸಮರ್ಪಿತವಾಗಲಿದೆ. ಈ ಅಕ್ಕಿಗೆ
180 ಕೆಜಿ ಅರಳು, ಸುಮಾರು 700 ಕೆಜಿ ಬಾಳೆಹಣ್ಣು, ಸುಮಾರು 2,000 ತೆಂಗಿನಕಾಯಿ, 10 ಕೆಜಿ ಏಲಕ್ಕಿ, 2.5 ಟನ್‌ ಬೆಲ್ಲಗಳ ಸೇರಿಸಿ ಮಿಶ್ರಣವನ್ನು ತಯಾರಿಸಿಕೊಳ್ಳುತ್ತಾರೆ.

ಮುಂಜಾನೆ‌ ವೇಳೆಗೇ ಈ ಎಲ್ಲ ತಯಾರಿಗಳೂ ನಡೆದು ಬೆಳಗ್ಗಿನಿಂದ ಸಾಯಂಕಾಲದವರೆಗೂ ಇದನ್ನು ಸುಮಾರು 60 ಡಬ್ಬಿ ಎಣ್ಣೆಯನ್ನು ಪೇರಿಸಿ ದೊಡ್ಡ ಬಾಣಲೆಗಳಲ್ಲಿ ಕಾಯಿಸಿಕೊಳ್ಳುತ್ತಾ ಸುಮಾರು 1.5 ಲಕ್ಷದಷ್ಟು ಕಟ್ಟದಪ್ಪಗಳನ್ನು ಬಾಣಸಿಗರು ತಯಾರಿಸುತ್ತಾರೆ. ಮುಖ್ಯ ಬಾಣಸಿಗರಾಗಿ ಪಡುಬಿದ್ರಿಯ ಯೋಗೀಶ್‌ ರಾವ್‌ ಅವರಿದ್ದು ವಿವಿಧೆಡೆಯ ಬಾಣಸಿಗರು ಸಹಕರಿಸುತ್ತಾರೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.