Padubidri: ಸ್ಥಳೀಯರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ರಾಜಿ ಇಲ್ಲ: ಡಿಸಿ

ಕೈಗಾರಿಕಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಶಾಸಕ, ಅಧಿಕಾರಿಗಳೊಂದಿಗೆ ಭೇಟಿ

Team Udayavani, Jul 30, 2024, 6:21 AM IST

Udupi-Dc

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಜಿಲ್ಲಾ ಕೈಗಾರಿಕೆ ಇಲಾಖೆ, ಪರಿಸರ ಇಲಾಖೆ ಅಧಿಕಾರಿಗಳು, ಕುಂದಾಪುರದ ಸಹಾಯಕ ಕಮಿಶನರ್‌ ಮಹೇಶ್‌ಚಂದ್ರ, ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ, ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಮತ್ತಿತರೊಂದಿಗೆ ನಂದಿಕೂರಿನ ಎಂ. 11 ಜೈವಿಕ ಡೀಸೆಲ್‌ ಉತ್ಪಾದನ ಘಟಕಕ್ಕೆ ಸ್ಥಳೀಯರ ದೂರಿನನ್ವಯ ಸೋಮವಾರ ಭೇಟಿ ನೀಡಿದರು.

ಸ್ಥಳೀಯರು, ಅಧಿಕಾರಿಗಳ, ಎಂ 11 ಆಡಳಿತ ನಿರ್ದೇಶಕ ಸುಬಾನ್‌ ಖಾನ್‌ ಜತೆಗೆ ಸಭೆ ನಡೆಸಿದ ಅವರು, ಸರಕಾರದ ಅನುಮತಿಯೊಂದಿಗೆ ಕೈಗಾರಿಕೆಯನ್ನು ಆರಂಭಿಸಿದ್ದೀರಿ. ಪರಿಸರ ಸಮಸ್ಯೆಗಳು ಉಳಿದುಕೊಂಡಿವೆ. ಜಲಮಾಲಿನ್ಯ ಆಗುವಂತಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡುವ ವಿಷಯದಲ್ಲಿ ರಾಜಿ ಇಲ್ಲ ಎಂದರು.

ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ನಾಗರಾಜ್‌ ಅವರು ಎಂ. 11 ಘಟಕವು ಉದ್ಯೋಗಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಸರಿಯಾಗಿ ನೀಡಿಲ್ಲ. 74 ಉದ್ಯೋಗಿಗಳಲ್ಲಿ 31 ಮಂದಿ ಉಡುಪಿಯವರಿದ್ದರೂ, 21 ಮಂದಿಯನ್ನು ತತ್‌ಕ್ಷಣದಿಂದಲೇ ಉದ್ಯೋಗದಿಂದ ತೆಗೆಯಲಾಗಿದೆ. ಇದು ಸರಿಯಲ್ಲ ಎಂದರು.

ಜಿಲ್ಲಾ ಪರಿಸರ ಇಲಾಖಾ ಅಧಿಕಾರಿ ಕೀರ್ತಿಕುಮಾರ್‌ಗೆ ಡಿಸಿ ನಿರ್ದೇಶನ ನೀಡಿ, ಪರಿಸರದಲ್ಲಿ ನೀರು ಮಾಲಿನ್ಯವಾಗಿರುವುದನ್ನು ಹಾಗೂ ಘಟಕದಿಂದ ಕೆಟ್ಟ ವಾಸನೆ ಹೊರ ಬರುವುದನ್ನು ಎನ್‌ಐಟಿಕೆ ಅಥವಾ ಐಐಟಿಯ ಹಿರಿಯ ತಜ್ಞರ ಸಮಕ್ಷಮದಲ್ಲಿ ಪರಿಶೀಲಿಸಿ ವರದಿ ತರಿಸಿಕೊಳ್ಳಬೇಕು ಎಂದರು.

ಶಾಸಕ ಸುರೇಶ್‌ ಶೆಟ್ಟಿ ಅವರೂ ಎಲ್ಲ ಉಪಕ್ರಮಗಳನ್ನು ಕೈಗೊಂಡು ಕೈಗಾರಿಕೆಯನ್ನು ಮುನ್ನಡೆಸಿ ಎಂದರು.
ಕಾಪು ತಾ. ಪಂ. ಮುಖ್ಯ ಇಒ ಜೇಮ್ಸ್‌ ಡಿ’ ಸಿಲ್ವ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಪಿಎಸ್‌ಐ ಪ್ರಸನ್ನ, ಕಂದಾಯ ಪರಿವೀಕ್ಷಕ ಸಾಹಿಲ್‌, ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.