ಫ್ರಾನ್ಸ್, ಥಾಯ್ಲೆಂಡ್ ಸೇರಿ ಹಲವು ದೇಶಗಳಲ್ಲಿ ಐಎಸ್ಐ ಜಾಲ
ಈ ಬಾರ್ಖ ಶಾ ಬ್ಯಾಂಕಾಕ್ನಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕ ಹೊಂದಿದ್ದ.
Team Udayavani, Aug 24, 2020, 9:16 AM IST
ಬ್ಯಾಂಕಾಕ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಗುಪ್ತಚರ ಸಂಸ್ಥೆ ಕರಾಳ ಹಸ್ತ ವಿಸ್ತರಿಸುತ್ತಿರುವುದು ಮತ್ತೆ ಸಾಬೀತಾಗಿದೆ. ಫ್ರಾನ್ಸ್, ಥಾಯ್ಲೆಂಡ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇರುವ ಅಪರಾಧ ಸಂಘಟನೆಗಳ ಮೂಲಕ ತನ್ನ ವಿಷ ಜಾಲ, ಅಜೆಂಡಾ ಹಬ್ಬಿಸಲು ಪ್ರಯತ್ನ ನಡೆಸಿದೆ. ಈ ಬಗ್ಗೆ “ಗ್ಲೋಬಲ್ ವಾಚ್ ಅನಾಲಿಸಿಸ್’ ಎಂಬ ಉಗ್ರರು ಮತ್ತು ಭಯೋತ್ಪಾದಕ ಚಟುವಟಿಕೆ ಗಳ ಮೇಲೆ ನಿಗಾ ಇರಿಸುವ ಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಥಾಯ್ಲೆಂಡ್ ಪೊಲೀಸರು ಇತ್ತೀಚೆಗೆ ಹಲವು ಅಪರಾಧ ಕೃತ್ಯ ಹಾಗೂ ಐಎಸ್ಐ ಪರ ಅಕ್ರಮ ಹಣ ವರ್ಗಾವಣೆ ಪೂರೈಕೆ ಸಂಬಂಧ ಪಾಕಿಸ್ತಾನದ ಪ್ರಜೆ ಬಾರ್ಖ ಶಾ ಎಂಬಾತನನ್ನು ಬಂಧಿಸಿದ್ದರು. 2012ರಲ್ಲಿ ಚಿಯಾಂಗ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಎದುರು ನಡೆದಿದ್ದ ಪ್ರತಿಭಟನೆಯಲ್ಲಿ ಈತ ಪಾಲ್ಗೊಂಡಿದ್ದನ್ನು ಥಾಯ್ಲೆಂಡ್ ಪೊಲೀಸರು ಗಮನಿಸಿದ್ದರು.
ಈ ಬಾರ್ಖ ಶಾ ಬ್ಯಾಂಕಾಕ್ನಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕ ಹೊಂದಿದ್ದ. ಈತನ ರೆಸ್ಟಾರೆಂಟ್ ಗಳು ಪಾಕ್ ಅಧಿಕಾರಿಗಳ ಸಭೆ ಸೇರುವ ತಾಣವಾಗಿತ್ತು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
2016ರಲ್ಲಿ ನಕಲಿ ಪಾಸ್ಪೋರ್ಟ್ ಜಾಲದಲ್ಲೂ ಈತ ಭಾಗಿಯಾಗಿದ್ದ. ಈ ಸಂಬಂಧ ಇರಾನಿ ಪ್ರಜೆ ಹಮೀಜ್ ಜಫಾರಿ ಹಾಗೂ ಪಾಕಿಸ್ತಾನದ ಐವರನ್ನು ಬಂಧಿಸಲಾಗಿತ್ತು. ಈ ತಂಡವು, ಪ್ರಯಾಣ ಕುರಿತು ನಕಲಿ ದಾಖಲೆ ವಿತರಣೆ ಹಾಗೂ ಮಾನವ ಕಳ್ಳಸಾಗಣೆಯಲ್ಲಿ ಪಾಲ್ಗೊಂಡಿರುವುದು ದೃಢಪಟ್ಟಿತ್ತು. ಬ್ರಿಟನ್, ಆಸ್ಟ್ರೇಲಿಯಾ, ಫ್ರಾನ್ಸ್ , ನ್ಯೂಜಿಲೆಂಡ್ ಮತ್ತಿತರ ದೇಶಗಳ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಹಮೀಜ್ ಇರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.