ಪರೀಕ್ಷೆಗೆ ಬಾಕಿಯಿದೆ 500ಕ್ಕೂ ಹೆಚ್ಚು ಗಂಟಲ ದ್ರವ ಮಾದರಿ

ಪ್ರಯೋಗಾಲಯಕ್ಕೆ ಹೆಚ್ಚಿದ ಒತ್ತಡ

Team Udayavani, Apr 28, 2020, 5:30 AM IST

ಪರೀಕ್ಷೆಗೆ ಬಾಕಿಯಿದೆ 500ಕ್ಕೂ ಹೆಚ್ಚು ಗಂಟಲ ದ್ರವ ಮಾದರಿ

ಸಾಂದರ್ಭಿಕ ಚಿತ್ರ..

ಮಂಗಳೂರು: ಪಡೀಲಿನಲ್ಲಿರುವ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿನ ಕೋವಿಡ್ 19 ಸೋಂಕು ಪ್ರಕರಣವು ಜಿಲ್ಲಾಡಳಿತಕ್ಕೂ ಬಹುದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಇದರಿಂದಾಗಿ ಸೋಂಕು ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವ ವೆನ್ಲಾಕ್ ನ ಪ್ರಯೋಗಾಲಯದಲ್ಲಿರುವ ವೈದ್ಯರ ಕೆಲಸದ ಒತ್ತಡವೂ ಜಾಸ್ತಿಯಾಗಿದ್ದು, ಶಂಕಿತರ ಗಂಟಲು ಮಾದರಿಗಳನ್ನು ಮತ್ತೆ ಬೆಂಗಳೂರಿಗೆ ಕಳುಹಿಸಿ ಕೊಡಬೇಕಾದ ಅನಿವಾರ್ಯತೆಯೂ ಎದುರಾಗಿದೆ.

ದಕ್ಷಿಣ ಕನ್ನಡದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಅವರೊಂದಿಗಿನ ಪ್ರಥಮ-ದ್ವಿತೀಯ ಹಂತದ ಸಂಪರ್ಕದ ವ್ಯಕ್ತಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಒಳಪಡಿಸುವುದು ಅನಿವಾರ್ಯವಾಗಿರುವುದರಿಂದ ದಿನೇ ದಿನೇ ವೆನ್ಲಾಕ್ ‌ನ ಪ್ರಯೋಗಾಲಯಕ್ಕೆ ತಪಾಸಣೆಗೆ ಬರುತ್ತಿರುವ ಗಂಟಲು ದ್ರವ ಮಾದರಿಗಳ ಸಂಖ್ಯೆಯೂ ಏರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಫಸ್ಟ್‌ ನ್ಯೂರೋ ಆಸ್ಪತ್ರೆ ಪ್ರಕರಣದಿಂದಾಗಿ ಒಂದೆಡೆಯಿಂದಲೇ ಏಕಾಏಕಿ 300ಕ್ಕೂ ಹೆಚ್ಚು ಸ್ಯಾಂಪಲ್‌ಗ‌ಳು ಬಂದಿರುವುದರಿಂದ ವೈದ್ಯರು, ಸಿಬಂದಿ ಹಗಲಿರುಳು ಕೆಲಸ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಇನ್ನೊಂದೆಡೆ ಉಡುಪಿ, ಕಾರವಾರ, ದ.ಕ. ಜಿಲ್ಲೆಯ ಇತರೆಡೆಗಳಿಂದ ಬಂದು ವೆನ್ಲಾಕ್ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾದ ಕೊರೊನಾ ಶಂಕಿತ ರೋಗಿಗಳ ಗಂಟಲ ದ್ರವ ಮಾದರಿ ಸಹಿತ ಒಟ್ಟು 500ಕ್ಕೂ ಹೆಚ್ಚು ಜನರ ಮಾದರಿಗಳು ಇನ್ನೂ ಪರೀಕ್ಷೆಗೆ ಬಾಕಿ ಇವೆ. ಇವೆಲ್ಲದರ ಪರೀಕ್ಷೆಗೆ ಹೆಚ್ಚಿನ ಕಾಲಾವಕಾಶವೂ ಅನಿವಾರ್ಯ.

ವರದಿ ತಡವಾದರೂ ಅಪಾಯ
ವೆನ್ಲಾಕ್ ‌ನಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿರುವ 50ಕ್ಕೂ ಹೆಚ್ಚು ಮಂದಿ ದಾಖಲಾಗಿದ್ದಾರೆ. ಈಗಾಗಲೇ 500ಕ್ಕೂ ಹೆಚ್ಚು ಸ್ಯಾಂಪಲ್‌ಗ‌ಳ ಪರೀಕ್ಷೆಗೆ ಬಾಕಿ ಇರುವುದರಿಂದ ಅವರಿಗೆ ಕೋವಿಡ್ 19 ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲಾಗುವುದಿಲ್ಲ. ಅತೀ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವವರು ಅಥವಾ ದೀರ್ಘ‌ಕಾಲಿಕ ಸಮಸ್ಯೆಗಳಿಂದ ಬಳಲುತ್ತಿರುವ ಯಾರಾದರೂ ಈ 500 ಮಂದಿಯಲ್ಲಿ
ಇದ್ದರೆ, ಅವರ ವರದಿ ತಡವಾದರೆ ಅಪಾಯ ವಾಗುತ್ತದೆ. ಆದರೆ ಒಬ್ಬರ ವರದಿ ಬರಲು ಕನಿಷ್ಠ ಒಂದು ಗಂಟೆ ಸಮಯ ಅಗತ್ಯವಿರುವುದರಿಂದ ಈ ಎಲ್ಲರ ವರದಿಯನ್ನು ವೈದ್ಯರಿಗೆ ತತ್‌ಕ್ಷಣಕ್ಕೇ ನೀಡುವುದೂ ಸಾಧ್ಯವಾಗುವುದಿಲ್ಲ. ಒಟ್ಟು ಪ್ರಕರಣಗಳ ಸಂಖ್ಯೆ ದಿನೇದಿನೆ ಏರುತ್ತಿರುವುದರಿಂದ ಜಿಲ್ಲಾಡಳಿತಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ.

ಕೋವಿಡ್ 19 ಸೋಂಕಿನ ಸರಣಿ
ಗುರುವಾರ ಮೃತಪಟ್ಟ 75 ವರ್ಷದ ವೃದ್ಧೆ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು. ಎ. 19ರಂದು ಮೃತಪಟ್ಟ ಆಕೆಯ ಸೊಸೆಯೂ ಅದೇ ಆಸ್ಪತ್ರೆಗೆ ಬಂದು ಹೋಗಿದ್ದವರು. ಕೋವಿಡ್ 19 ದೃಢಪಟ್ಟು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 67 ವರ್ಷದ ವೃದ್ಧೆ ಈ ಇಬ್ಬರು ಮೃತರ ನೆರೆ ಮನೆಯವರು. 67 ವರ್ಷದ ವೃದ್ಧೆಯ ಪುತ್ರಿಗೆ ತಾಯಿಯಿಂದಲೇ ಸೋಂಕು ತಗಲಿದೆ. ಸೋಮವಾರ ಪತ್ತೆಯಾದ ಪ್ರಕರಣದಲ್ಲಿ 80 ವರ್ಷದ ವೃದ್ಧೆಯೂ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು. ಕೋವಿಡ್ 19 ದೃಢಪಟ್ಟ ಆಕೆಯ ಪುತ್ರ ತಾಯಿಯನ್ನು ನೋಡಿಕೊಳ್ಳಲೆಂದು ಅದೇ ಆಸ್ಪತ್ರೆಯಲ್ಲಿದ್ದವರು. ಆ ಮೂಲಕ ಒಂದೇ ಆಸ್ಪತ್ರೆಯ ಮುಖಾಂತರ ಮೂರು ಕುಟುಂಬಗಳ ತಲಾ ಇಬ್ಬರಿಗೆ ಸೋಂಕು ತಗಲಿದಂತಾಗಿದೆ.

ಬೆಂಗಳೂರಿಗೆ ಕಳುಹಿಸಲು ಚಿಂತನೆ
ಕೋವಿಡ್ 19 ಪರೀಕ್ಷೆ ಪ್ರಯೋಗಾಲಯದಲ್ಲಿ ಒತ್ತಡ ತೀರಾ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಪರೀಕ್ಷೆಗೆ ಬರುವ ಗಂಟಲ ದ್ರವ ಮಾದರಿಯ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿಗೂ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಕೊಡಲು ಚಿಂತಿಸಲಾಗುತ್ತಿದೆ.
– ಡಾ| ರಾಮಚಂದ್ರ ಬಾಯರಿ,
ಜಿಲ್ಲಾ ಆರೋಗ್ಯಾಧಿಕಾರಿ, ದ.ಕ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.