ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ : ಶೇ. 51ರಷ್ಟು ಜನರಿಂದ ಇತರ ವೆಚ್ಚಕ್ಕೆ ಕಡಿತ!


Team Udayavani, Feb 26, 2021, 6:45 AM IST

ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ : ಶೇ. 51ರಷ್ಟು ಜನರಿಂದ ಇತರ ವೆಚ್ಚಕ್ಕೆ ಕಡಿತ!

ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ದಾಖಲೆಯ ಮಟ್ಟವನ್ನು ತಲುಪಿವೆ. ಹಲವು ನಗರಗಳಲ್ಲಿ ಪೆಟ್ರೋಲ್‌ ಪ್ರತೀ ಲೀಟರ್‌ಗೆ 100 ರೂ. ಆಗಿದೆ. ಇದರಿಂದಾಗಿ ಜನಸಾಮಾನ್ಯರು ತಮ್ಮ ದೈನಂದಿನ ವೆಚ್ಚವನ್ನು ಸರಿದೂಗಿಸಲು ಹರಸಾಹಸ ಪಡುತ್ತಿದ್ದಾರೆ. ತೈಲ ಬೆಲೆಯಲ್ಲಾಗಿರುವ ಹೆಚ್ಚಳದಿಂದಾಗಿ ಶೇ. 51ರಷ್ಟು ಜನರು ತಮ್ಮ ಇತರ ವೆಚ್ಚಗಳಲ್ಲಿ ಕಡಿತಗೊಳಿಸುತ್ತಿದ್ದಾರೆ ಎಂಬುದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ವ್ಯಾಟ್‌ ಕಡಿಮೆ ಮಾಡಬೇಕು
ಶೇ. 32ರಷ್ಟು ಜನರು, ರಾಜ್ಯ ಸರಕಾರಗಳು ಮೂಲ ಬೆಲೆಯಲ್ಲಿ ಶೇಕಡಾವಾರು ಬದಲು ಸಂಪೂರ್ಣ ಮೌಲ್ಯದ ಆಧಾರದ ಮೇಲೆ ಮೌಲ್ಯವರ್ಧಿತ ತೆರಿಗೆ(ವ್ಯಾಟ್‌)ಯನ್ನು ವಿಧಿಸಬೇಕು ಎಂದು ಹೇಳಿದ್ದಾರೆ. ಶೇ.47 ಜನರು ರಾಜ್ಯ ಸರಕಾರಗಳು ವ್ಯಾಟ್‌ ಕಡಿತಗೊಳಿಸಬೇಕು ಎಂದಿದ್ದಾರೆ. ಆದರೆ ಪ್ರಸ್ತುತ ವ್ಯಾಟ್‌ ಮಾದರಿಯು ಉತ್ತಮವಾಗಿದೆ ಎಂದು ಶೇ. 8ರಷ್ಟು ಗ್ರಾಹಕರು ಹೇಳಿದ್ದಾರೆ. ಹೆಚ್ಚುತ್ತಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಇಳಿಸಲು ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಶೇ. 79ರಷ್ಟು ಮಂದಿ ಆಗ್ರಹಿಸಿದ್ದಾರೆ

291 ಜಿಲ್ಲೆಗಳಲ್ಲಿ ಸಮೀಕ್ಷೆ
ಕಳೆದೊಂದು ವರ್ಷದಲ್ಲಿ ಪೆಟ್ರೋಲ್-ಡೀಸೆಲ್‌ ಬೆಲೆ ತೀವ್ರವಾಗಿ ಹೆಚ್ಚಿದೆ. ಜನರು ಬೆಲೆ ಏರಿಕೆಯನ್ನು ಹೇಗೆ ನಿಭಾಯಿಸುತ್ತಿದ್ದಾರೆ ಎಂದು ತಿಳಿದುಕೊಳ್ಳಲು ಲೋಕಲ್‌ ಸರ್ಕಲ್ಸ್‌ ಈ ಸಮೀಕ್ಷೆಯನ್ನು ಕೈಗೊಂಡಿತ್ತು. ದೇಶದ 291 ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಸಮೀಕ್ಷೆಯಲ್ಲಿ 22 ಸಾವಿರಕ್ಕೂ ಹೆಚ್ಚು ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು.

ಸುಂಕದಲ್ಲಿ ಇಳಿಕೆ ಸಾಧ್ಯತೆ ಇಲ್ಲ
ಕೊರೊನಾದ ಹಿನ್ನೆಲೆಯಲ್ಲಿ ನೆಲಕಚ್ಚಿದ್ದ ದೇಶದ ಆರ್ಥಿಕತೆಯನ್ನು ಹಳಿಗೆ ತರುವ ಪ್ರಯತ್ನದಲ್ಲಿ ಕೇಂದ್ರ ಸರಕಾರ ನಿರತವಾಗಿರುವುದರಿಂದ ಸದ್ಯಕ್ಕಂತೂ ಪೆಟ್ರೋಲ್‌ ಮೇಲೆ ವಿಧಿಸುತ್ತಿರುವ ಸುಂಕದಲ್ಲಿ ಇಳಿಕೆ ಮಾಡುವ ಸಾಧ್ಯತೆ ತೀರಾ ಕಡಿಮೆ. ತೈಲೋತ್ಪನ್ನಗಳಿಂದ ಸರಕಾರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಆದಾಯ ಹರಿದುಬರುತ್ತಿರುವುದರಿಂದ ಅದಕ್ಕೆ ಕತ್ತರಿ ಹಾಕುವಂಥ ಯಾವುದೇ ಕ್ರಮವನ್ನೂ ಕೇಂದ್ರ ಸರಕಾರ ಕೈಗೊಳ್ಳದು ಎನ್ನಲಾಗಿದೆ. ಪಂಚರಾಜ್ಯ ವಿಧಾನಸಭೆ ಚುನಾವಣೆ ವೇಳೆಗೆ ಸರಕಾರ ಇಂಥ ಕ್ರಮಕ್ಕೆ ಮುಂದಾದರೂ ಅಚ್ಚರಿ ಇಲ್ಲ ಎಂಬುದು ರಾಜಕೀಯ ಪಂಡಿತರ ವಿಶ್ಲೇಷಣೆ. ಇನ್ನು ರಾಜ್ಯ ಸರಕಾರಗಳ ಬೊಕ್ಕಸವೂ ಬರಿದಾಗಿರುವುದರಿಂದ ವ್ಯಾಟ್‌ನಲ್ಲಿ ಕಡಿತವಾಗುವ ಸಾಧ್ಯತೆಗಳಿಲ್ಲ. ಕೆಲವೊಂದು ರಾಜ್ಯಗಳ ಸರಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಣ ವ್ಯಾಟ್‌ನಲ್ಲಿ ಕಡಿತ ಮಾಡಿದ್ದು ಆ ಮೂಲಕ ಗ್ರಾಹಕರ ಮೇಲಿನ ಹೊರೆಯನ್ನು ಕಿಂಚಿತ್‌ ಕಡಿಮೆ ಮಾಡಿವೆ.

ಉಳಿತಾಯಕ್ಕೂ ಬಿತ್ತು ಕತ್ತರಿ
ಶೇ. 21ರಷ್ಟು ಜನರು ಪೆಟ್ರೋಲ್‌ ಮತ್ತು ಡೀಸೆಲ್‌ನ ಬೆಲೆಯಲ್ಲಾಗಿರುವ ಹೆಚ್ಚಳವನ್ನು ಸರಿದೂಗಿಸಲು ಅಗತ್ಯ ವಸ್ತುಗಳ ಖರೀದಿಗಾಗಿ ತಾವು ಮಾಡುತ್ತಿದ್ದ ವೆಚ್ಚದಲ್ಲಿ ಅಲ್ಪ ಪ್ರಮಾಣದ ಕಡಿತ ಮಾಡಿದ್ದಾರೆ. ಶೇ. 14ರಷ್ಟು ಜನರು ಮಾಸಿಕವಾಗಿ ಉಳಿತಾಯಕ್ಕಾಗಿ ಮೀಸಲಿಡುತ್ತಿದ್ದ ಮೊತ್ತದಲ್ಲಿ ಕಡಿತ ಮಾಡಿದ್ದಾರೆ. ಇನ್ನು ಶೇ. 43ರಷ್ಟು ಜನರು ಪ್ರಯಾಣ, ಮನೆಯಿಂದಲೇ ಕೆಲಸ ಅಥವಾ ಇತರ ಕಾರಣಗಳಿಂದಾಗಿ ತಮ್ಮ ಮಾಸಿಕ ಪೆಟ್ರೋಲ್‌ ಅಥವಾ ಡೀಸೆಲ್‌ ಬಿಲ್‌ ಈ ಮೊದಲಿಗಿಂತ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಅದೇ ಸಮಯದಲ್ಲಿ ಶೇ. 2ರಷ್ಟು ಜನರು ಪೆಟ್ರೋಲ್‌ ಮತ್ತು ಡೀಸೆಲ್‌ಗಾಗಿ ಯಾವುದೇ ಹಣವನ್ನು ಖರ್ಚು ಮಾಡುವುದಿಲ್ಲ ಎಂದಿದ್ದಾರೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.