ಲತಾ ದೀದಿ ನನ್ನ ದೊಡ್ಡಕ್ಕ : ದೇಶದ ಜನತೆಗೆ ಪ್ರಶಸ್ತಿ ಸಮರ್ಪಿಸಿದ ಮೋದಿ


Team Udayavani, Apr 25, 2022, 7:35 AM IST

thumb 6

ಮುಂಬೈ: ಸಂಗೀತದಲ್ಲಿ ಮಾತೃವಾತ್ಸಲ್ಯ ಮತ್ತು ಪ್ರೀತಿ ಉಣಬಡಿಸುವ ಮಾಂತ್ರಿಕ ಶಕ್ತಿ ಅಡಗಿದೆ. ದೇಶಭಕ್ತಿ ಮತ್ತು ಕರ್ತವ್ಯಪ್ರಜ್ಞೆಯನ್ನು ಪರಾಕಾಷ್ಠೆಗೆ ತಲುಪಿಸುವ ಸಾಮರ್ಥ್ಯವೂ ಅದರಲ್ಲಿದೆ. ಸಂಗೀತದ ಈ ಎಲ್ಲ ಶಕ್ತಿಗಳನ್ನು ನಾವು ಲತಾ ದೀದಿಯೊಳಗೆ ಕಾಣಲು ಸಾಧ್ಯವಾಗಿದ್ದು, ನಮ್ಮೆಲ್ಲರ ಅದೃಷ್ಟ. ಲತಾ ನನ್ನ ಪಾಲಿಗೆ ಹಿರಿಯ ಸೋದರಿ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ಜಮ್ಮು ಮತ್ತು ಕಾಶ್ಮೀರದ ಪ್ರವಾಸ ಮುಗಿಸಿ, ಭಾನುವಾರ ಸಂಜೆ ವೇಳೆಗೆ ಮುಂಬೈಗೆ ಬಂದಿಳಿದ ಪ್ರಧಾನಿ ಅವರು ಲತಾ ದೀನನಾಥ್‌ ಮಂಗೇಶ್ಕರ್‌ ಪ್ರಶಸ್ತಿ ಸ್ವೀಕರಿಸಿ, ಮಾತನಾಡಿದರು. “ತಲೆಮಾರುಗಳವರೆಗೆ ಪ್ರೀತಿ ಮತ್ತು ಭಾವನೆಯನ್ನು ಉಡುಗೊರೆಯಾಗಿ ಹಂಚಿದವರು, ಲತಾ ದೀದಿ. ಇಂಥ ಸಾಧಕಿಯಿಂದ ನನಗೆ ಸೋದರಿಪ್ರೀತಿ ಸಿಕ್ಕಿರುವುದೇ ಒಂದು ಪುಣ್ಯ’ ಎಂದು ಭಾವುಕರಾದರು.

ಜನತೆಗೆ ಸಮರ್ಪಣೆ: “ಲತಾ ದೀದಿ ಆಶಿಸುತ್ತಿದ್ದ ಏಕತೆ ಮತ್ತು ಪ್ರೀತಿಯ ದ್ಯೋತಕವಾಗಿ ಈ ಗೌರವ ನನಗೆ ಒಲಿದಿದೆ. ಇದನ್ನು ಸ್ವೀಕರಿಸದೇ ಇರಲು ನನಗೆ ಸಾಧ್ಯವೇ ಇಲ್ಲ. ಈ ಪ್ರಶಸ್ತಿಯನ್ನು ನನ್ನೆಲ್ಲ ದೇಶವಾಸಿಗಳಿಗೆ ಸಮರ್ಪಿಸಲು ಬಯಸುತ್ತೇನೆ’ ಎಂದು ಭಾವುಕರಾದರು.

“ಹಲವು ದಶಕಗಳವರೆಗೆ ಭಾರತೀಯ ಸಿನಿಮಾ ಜಗತ್ತಿನ ನಾನಾ ಪರಿವರ್ತನೆಗಳಿಗೆ ಲತಾ ಮಂಗೇಶ್ಕರ್‌ ಅತ್ಯಂತ ನಿಕಟವಾಗಿ ಸಾಕ್ಷಿಯಾಗಿದ್ದರು. ಸಿನಿಮಾರಂಗದ ಆಚೆಗೂ ಅವರು ಭಾರತದ ಬೆಳವಣಿಗೆಯ ಬಗ್ಗೆ ಸದಾ ಚಿಂತಿಸುತ್ತಿದ್ದರು. ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡುವುದು ಅವರ ಕನಸಾಗಿತ್ತು’ ಎಂದು ತಿಳಿಸಿದರು.

ಚೊಚ್ಚಲ ಪ್ರಶಸ್ತಿ: ಮಾಸ್ಟರ್‌ ದೀನನಾಥ್‌ ಮಂಗೇಶ್ಕರ್‌ ಸ್ಮತಿ ಪ್ರತಿಷ್ಠಾನ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ವಿತರಿಸಿದ ಚೊಚ್ಚಲ ಪ್ರಶಸ್ತಿ ಇದಾಗಿದೆ. ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದ ಸಾಧಕರನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಶಸ್ತಿ ಸ್ಥಾಪನೆಗೊಂಡಿದ್ದು, ಇದರ ಚೊಚ್ಚಲ ಗೌರವ ಮೋದಿ ಅವರ ಮುಡಿಗೇರಿದೆ.

ಸೋದರಿಗೆ ಭೋಸ್ಲೆ ಹಾಡು ಸಮರ್ಪಣೆ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರು ತಮ್ಮ ಸೋದರಿ ಲತಾ ಮಂಗೇಶ್ಕರ್‌ ಅವರಿಗೆ “ಆಯೇಗಾ ಆನೆವಾಲಾ…’ ಎಂಬ ಗೀತೆಯನ್ನು ಹಾಡಿ, ಸಮರ್ಪಿಸಿದ್ದು ವಿಶೇಷವಾಗಿತ್ತು. ಈ ಹಾಡನ್ನು ಲತಾ ಮಂಗೇಶ್ಕರ್‌, 1949ರಲ್ಲಿ ತೆರೆಕಂಡ “ಮಹಲ್‌’ ಸಿನಿಮಾದಲ್ಲಿ ಹಾಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.