Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

6ನೇ ಪೊಲೀಸ್‌ ಕರ್ತವ್ಯ ಕೂಟ-2024ರ ಸಮಾರೋಪದಲ್ಲಿ ಐಜಿಪಿ ಅಮಿತ್‌ ಸಿಂಗ್‌

Team Udayavani, Sep 22, 2024, 2:28 AM IST

Manipal-Police

ಮಣಿಪಾಲ: ಪೊಲೀಸ್‌ ಕರ್ತವ್ಯ ಕೂಟಗಳಿಂದ ಜ್ಞಾನವರ್ಧನೆಯ ಜತೆಗೆ ವೃತ್ತಿಪರ ತನಿಖೆಗೆ ಬಹಳಷ್ಟು ಸಹಕಾರಿಯಾಗುತ್ತದೆ. ವೈಜ್ಞಾನಿಕ ದಾಖಲೆಗಳಿಂದ ಹಲವು ಮಂದಿಗೆ ಶಿಕ್ಷೆಯಾದ ಉದಾಹರಣೆಗಳೂ ಇವೆ ಎಂದು ಮಂಗಳೂರು ಪಶ್ಚಿಮ ವಲಯ ಪೊಲೀಸ್‌ ಉಪ ಮಹಾನಿರೀಕ್ಷಕ ಅಮಿತ್‌ ಸಿಂಗ್‌ ಹೇಳಿದರು.

ಕೆಎಂಸಿಯ ಡಾ| ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಜರಗಿದ ಪಶ್ಚಿಮ ವಲಯ ಮಟ್ಟದ 6ನೇ ಪೊಲೀಸ್‌ ಕರ್ತವ್ಯ ಕೂಟ-2024ರ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೃತ್ತಿಯಲ್ಲಿ ಹಲವು ಕೌಶಲಗಳನ್ನು ಗಳಿಸಿದರೆ ಮತ್ತಷ್ಟು ಸಾಧನೆ ಮಾಡಲು ಸಾಧ್ಯವಿದೆ. ಮುಂದಿನ ಕರ್ತವ್ಯಕೂಟ ಸಹಿತ ರಾಷ್ಟ್ರ ಮಟ್ಟದಲ್ಲಿಯೂ ಮತ್ತಷ್ಟು ಪದಕ ಸಿಗುವಂತಾಗಲಿ ಎಂದರು. ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ಘೋಷಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ.ಅರುಣ್‌ ಮಾತನಾಡಿ, ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ತನಿಖೆ ನಡೆಸಲೂ ಸಹಕಾರಿ ಯಾಗಲಿದೆ. ಮುಂದಿನ ಸ್ಪರ್ಧೆಗಳಿಗೆ ಹೊಸ ಅಧಿಕಾರಿಗಳು, ಸಿಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಮಾಹೆಯ ಸಿಒಒ ಡಾ| ರವಿರಾಜ್‌ ಎನ್‌.ಎಸ್‌. ಮಾತನಾಡಿ, ಪೊಲೀಸರು ಕಾನೂನು ಪಾಲನೆ ಮಾಡುವ ಜತೆಗೆ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಇದರೊಂದಿಗೆ ಇತರರಿಗೆ ಸಹಕಾರ ನೀಡುವ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು. ಮಣಿಪಾಲದ ಡಾ| ಟಿಎಂಎ ಪೈ ಅವರು ಕೌಶಲಾಭಿವೃದ್ಧಿ ಕೇಂದ್ರ ಆರಂಭಿಸಿದ್ದರು. ಪೊಲೀಸರಿಗೆ ಬೇಕಿರುವ ಕೌಶಲ ತರಬೇತಿಗಳನ್ನು ನೀಡಲು ಮಾಹೆ ಬದ್ಧ ಎಂದರು.

ಮಂಗಳೂರು ವಲಯದ ಅಭಿಯೋಜನ ಇಲಾಖೆಯ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್‌ ಆಳ್ವ ಕೆ., ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪಿ.ಎ.ಹೆಗಡೆ ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಎಸ್‌.ಟಿ.ಸಿದ್ದಲಿಂಗಪ್ಪ ಸ್ವಾಗತಿಸಿದರು. ಪಶ್ಚಿಮ ವಲಯ ಎಫ್ಪಿಬಿ ಡಿವೈಎಸ್‌ಪಿ ಗೌರೀಶ್‌ ವಂದಿಸಿದರು. ಪೊಲೀಸ್‌ ಸಿಬಂದಿ ಶಿವಾನಂದ ನಾಯರಿ ನಿರೂಪಿಸಿದರು.

ಉಡುಪಿ ಜಿಲ್ಲಾ ತಂಡಕ್ಕೆ ಸಮಗ್ರ ಪ್ರಶಸ್ತಿ
ಅಪರಾಧ ಕಾನೂನು, ವಿಧಿ ವಿಜ್ಞಾನ ಪರೀಕ್ಷೆ, ಫಾರೆನ್ಸಿಕ್‌ ಫೋಟೋಗ್ರಫಿ, ಬೆರಳಚ್ಚು ಪರೀಕ್ಷೆ, ಹ್ಯಾಂಡ್ಲಿಂಗ್‌, ಲಿಫ್ಟಿಂಗ್‌, ಪ್ಯಾಕಿಂಗ್‌, ಫೋಟೋಗ್ರಫಿ, ವೀಡಿಯೋಗ್ರಫಿ ಸಹಿತ ಹಲವಾರು ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಶ್ವಾನ ಶೈನಿಗೆ ಅತ್ಯುತ್ತಮ ಶ್ವಾನ ಪ್ರಶಸ್ತಿ ಲಭಿಸಿತು. ಸಂತೋಷ್‌ಗೌಡ ಹಾಗೂ ಗಜಾನನ ಅವರು ಇದರ ತರಬೇತುದಾರರಾಗಿದ್ದಾರೆ. ಇಲಾಖೆಯಲ್ಲಿ ಈ ಶ್ವಾನ 3.6 ವರ್ಷದಿಂದ ಕರ್ತವ್ಯ ನಿರ್ವಹಿಸಿಕೊಂಡಿದೆ.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

9

Uppur: ಮೃತದೇಹ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.