Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ
ದೇಶಕ್ಕಾಗಿ ಎಲ್ಲರೂ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿ, ಉಡುಪಿಯ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಕೆ.ಎಸ್. ಗಂಗಣ್ಣನವರ್
Team Udayavani, Oct 22, 2024, 2:09 AM IST
ಉಡುಪಿ: ಹುತಾತ್ಮರ ತ್ಯಾಗ, ಬಲಿದಾನಗಳು ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ.ಎಸ್. ಗಂಗಣ್ಣನವರ್ ಹೇಳಿದರು.
ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನದ ಅಂಗವಾಗಿ ಹುತಾತ್ಮ ಸ್ಮಾರಕಕ್ಕೆ ಸೋಮವಾರ ಪುಷ್ಪಗುಚ್ಛ ಅರ್ಪಿಸಿ ಮಾತನಾಡಿ ದೇಶವೆಂದರೆ ಕೇವಲ ಭೌಗೋಳಿಕ ವಸ್ತುಗಳಿಂದ ಆಗಿರುವಂಥದ್ದಲ್ಲ. ಬದಲಾಗಿ ಅದು ಎಲ್ಲ ರೀತಿಯ ಮಾನವ, ಪ್ರಾಣಿ ಹಾಗೂ ಸಸ್ಯ ಸಂಕುಲಗಳನ್ನು ಒಳಗೊಂಡ ವ್ಯವಸ್ಥೆ. ಈ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಬಲಿಕೊಟ್ಟ ಹುತಾತ್ಮರ ಬಲಿದಾನಗಳನ್ನು ನಾವು ನೆನೆದುಕೊಂಡು ಅದರ ಮೂಲಕ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯ ಪ್ರತೀಕವಾಗಬೇಕು. ದೇಶಕ್ಕಾಗಿ ಎಲ್ಲ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಮಾತನಾಡಿ, 1959ರ ಅ.21 ರಂದು ಲಡಾಕ್ ಬಳಿಯಲ್ಲಿ ಭಾರತ ಹಾಗೂ ಚೀನದ ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ ಯೋಧರು ಮೃತಪಟ್ಟಿದ್ದರು. ಅಂದಿನಿಂದ ದೇಶಾದ್ಯಂತ ಪೊಲೀಸ್ ಸಿಬಂದಿಯ ಗೌರವಾರ್ಥ ಪೊಲೀಸ್ ಹುತಾತ್ಮ ದಿನ ಆಚರಿಸಲಾಗುತ್ತಿದೆ. ಒಂದು ವರ್ಷದಲ್ಲಿ ದೇಶದಲ್ಲಿ 216 ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ್ದಾರೆ. ಅದರಲ್ಲಿ ಕರ್ನಾಟಕದ ಐದು ಮಂದಿ ಅಧಿಕಾರಿಗಳು ಮತ್ತು ಸಿಬಂದಿ ಸೇರಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾ ಕುಮಾರಿ, ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ. ಸಿದ್ದಲಿಂಗಪ್ಪ, ಪಿ.ಎ. ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ
Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ
Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ
Udupi: ಅ.24-26:ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ವಿಶ್ವವಿದ್ಯಾನಿಲಯ ಕುಲಪತಿಗಳ ಸಮಾಗಮ
Udupi: ದುಬಾೖ ಫಾರ್ಚೂನ್ ಸಂಸ್ಥೆಗೆ ವಂಚನೆ: ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ
Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ
Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ
Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್.ಧರ್ಮ
Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.