Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್ ಪತ್ತೆ
ಬ್ಯಾಗ್ ಪತ್ತೆ ಮಾಡಿ ಕಂಟ್ರೋಲ್ ರೂಮ್ಗೆ ಮಾಹಿತಿ
Team Udayavani, Sep 12, 2024, 1:16 AM IST
ಉಡುಪಿ: ಕೆಎಸ್ಸಾರ್ಟಿಸಿ ಬಸ್ನಲ್ಲಿ ಕಳೆದು ಹೋದ ಅರ್ಚಕರೊಬ್ಬರ ನಗದು ಸಹಿತ ಬ್ಯಾಗ್ ಅನ್ನು ಪತ್ತೆ ಮಾಡುವ ಮೂಲಕ ಉಡುಪಿ ಎಸ್ಪಿ ಕಚೇರಿಯ ಕಂಟ್ರೋಲ್ ರೂಮ್ ಸಿಬಂದಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರ್ಯಾಯ ಅರ್ಚಕ ಶ್ರೀಧರ ತಂತ್ರಿ ಕಳತ್ತೂರು ಅವರು ಸೋಮವಾರ ರಾತ್ರಿ 11 ಗಂಟೆಗೆ ಮಂಗಳೂರಿನಿಂದ ಶಿರಸಿಗೆ ಹೋಗುವ ಸರಕಾರಿ ಬಸ್ ಹತ್ತಿದ್ದರು. 12 ಗಂಟೆ ಸುಮಾರಿಗೆ ಕಾಪುವಿನಲ್ಲಿ ಇಳಿದಿದ್ದಾರೆ. ಬಸ್ ಇಳಿಯುವ ಸಂದರ್ಭ 18 ಸಾವಿರ ರೂ. ನಗದು, ಬಟ್ಟೆ, ಕಾರ್ಡ್ ಹಾಗೂ ಮೊಬೈಲ್ ಇದ್ದ ಬ್ಯಾಗ್ ಅನ್ನು ಬಸ್ನಲ್ಲಿಯೇ ಮರೆತಿದ್ದರು.
ಕಂಟ್ರೋಲ್ ರೂಮ್ನಿಂದ ಮಾಹಿತಿ
ವಿಷಯ ತಿಳಿದ ತತ್ಕ್ಷಣ ಅವರು ಶಿರ್ವ ಠಾಣೆಗೆ ದೂರು ನೀಡಿದರು. ದೂರು ಸ್ವೀಕರಿಸಿದ ಶಿರ್ವ ಠಾಣೆ ಪೊಲೀಸರು ಕೂಡಲೇ ವಯರ್ಲೆಸ್ ಮೂಲಕ ಕಂಟ್ರೋಲ್ ರೂಮ್ಗೆ ಮಾಹಿತಿ ರವಾನಿಸಿದ್ದರು. ಉಡುಪಿ ಎಸ್ಪಿ ಕಚೇರಿಯ ಕಂಟ್ರೋಲ್ ರೂಮ್ನಲ್ಲಿ ಕರ್ತವ್ಯ ನಿರತರಾಗಿದ್ದ ಎಸ್.ಐ. ನಿತ್ಯಾನಂದ ಶೆಟ್ಟಿ ಹಾಗೂ ಕಂಟ್ರೋಲ್ ರೂಂ ಸಿಬಂದಿ ರಾತ್ರಿಯೇ ಜಿಲ್ಲೆಯ ಎಲ್ಲ ಠಾಣೆಗೆ ಮಾಹಿತಿ ನೀಡಿದ್ದರು.
ಮಾಹಿತಿ ಪಡೆದ ತತ್ಕ್ಷಣವೇ ಬೈಂದೂರು ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬಂದಿ ಕಾರ್ಯಪ್ರವೃತ್ತರಾಗಿ ಬೈಂದೂರು ಬಸ್ ನಿಲ್ದಾಣದಲ್ಲಿ ರಾತ್ರಿ ಊಟಕ್ಕೆ ನಿಂತ ಬಸ್ ಅನ್ನು ಪರಿಶೀಲಿಸಿ ಬ್ಯಾಗ್ ಪತ್ತೆ ಮಾಡಿ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಿದ್ದರು. 1.30ರ ಸುಮಾರಿಗೆ ಬ್ಯಾಗ್ ಕಳೆದುಕೊಂಡ ಶ್ರೀಧರ ತಂತ್ರಿ ಕಳತ್ತೂರು ಅವರಿಗೆ ಬ್ಯಾಗ್ ಸಿಕ್ಕಿದ ವಿಷಯ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.