America Election:ಚುನಾವಣೆಯಲ್ಲಿ “ಕಡಿಮೆ ದುಷ್ಟರ”ನ್ನು ಆಯ್ಕೆ ಮಾಡಿ: ಪೋಪ್ ಫ್ರಾನ್ಸಿಸ್
ಅಮೆರಿಕದ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿಗಳು ಜೀವ ವಿರೋಧಿ ನಿಲುವು ತಳೆದಿದ್ದಾರೆ...
Team Udayavani, Sep 14, 2024, 1:13 PM IST
ವ್ಯಾಟಿಕನ್: ಮುಂಬರುವ ಅಮೆರಿಕದ ಅಧ್ಯಕ್ಷೀಯ(U.S. Presidential Election) ಚುನಾವಣೆಯ ಅಭ್ಯರ್ಥಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪೋಪ್ ಫ್ರಾನ್ಸಿಸ್(Pope Francis), ಗರ್ಭಪಾತ ಮತ್ತು ವಲಸೆ ಬಗ್ಗೆ ಜೀವ ವಿರೋಧಿ ನಿಲುವು ತಳೆದಿರುವುದಾಗಿ ಆರೋಪಿಸಿರುವ ಅವರು, ಅಮೆರಿಕದ ಕ್ಯಾಥೋಲಿಕ್ಸ್ ಯಾರು ಕಡಿಮೆ ದುಷ್ಟರೋ ಅವರನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಅಧ್ಯಕ್ಷ ಸ್ಥಾನದ ಇಬ್ಬರೂ ಅಭ್ಯರ್ಥಿಗಳು ಜೀವ ವಿರೋಧಿಯಾಗಿದ್ದಾರೆ. ಒಬ್ಬರು ವಲಸಿಗರನ್ನು(ಟ್ರಂಪ್) ಹೊರಗಟ್ಟುವುದಾಗಿ ಹೇಳುತ್ತಾರೆ, ಮತ್ತೊಬ್ಬರು ಹುಟ್ಟುವ ಶಿಶುವನ್ನು ಕೊಲ್ಲುವ ಬಗ್ಗೆ(ಹ್ಯಾರಿಸ್) ಮಾತನಾಡುತ್ತಾರೆ ಎಂದು ಪೋಪ್ ಹೇಳಿದ್ದಾರೆ.
ನಾಲ್ಕು ದೇಶಗಳ ಪ್ರವಾಸ ಮುಗಿಸಿ ರೋಮ್ ಗೆ ತೆರಳುತ್ತಿದ್ದ ವೇಳೆ ಏರ್ ಬೋರ್ನ್ (Airborne news) ಕಾನ್ಫರೆನ್ಸ್ ನಲ್ಲಿ ಅಮೆರಿಕನ್ ಕ್ಯಾಥೋಲಿಕರು ಯಾರಿಗೆ ಮತ ಚಲಾಯಿಸಬೇಕೆಂದು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಪೋಪ್ ಈ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅಮೆರಿಕನ್ ಪ್ರಜೆ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಅವರು, ಹೀಗಾಗಿ ನಾನು ಮತ ಚಲಾಯಿಸುವ ಪ್ರಶ್ನೆ ಇಲ್ಲ ಎಂದಿರುವುದಾಗಿ ತಿಳಿಸಿದ್ದಾರೆ.
ರಿಪಬ್ಲಿಕನ್ ಅಭ್ಯರ್ಥಿ ಡೋನಾಲ್ಡ್ ಟ್ರಂಪ್ ಅಥವಾ ಡೆಮೋಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಹೆಸರನ್ನು ಉಲ್ಲೇಖಿಸಿ ಮಾತನಾಡಿದ ಪೋಪ್, ಅಮೆರಿಕ ಚುನಾವಣೆಯಲ್ಲಿ ಗರ್ಭಪಾತ ಮತ್ತು ವಲಸೆ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಈ ವಿಚಾರ ಕ್ಯಾಥೋಲಿಕ್ ಚರ್ಚ್ ಗಳಿಗೆ ಹೆಚ್ಚು ಕಳವಳಕಾರಿಯಾಗಿದೆ ಎಂದು ಪೋಪ್ ಹೇಳಿದ್ದಾರೆ.
ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದರೆ ಮತ ಚಲಾಯಿಸುವ ಮೊದಲು ಯಾರು ಕಡಿಮೆ ಜೀವ ವಿರೋಧಿ ಎಂಬುದನ್ನು ಆಲೋಚಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು…ಅದು ಮಹಿಳೆಯೋ ಅಥವಾ ಪುರುಷನೋ? ಆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪೋಪ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.