ಜನಸಂಖ್ಯೆ ಆಧರಿಸಿ ಲಸಿಕೆ : ಕೇಂದ್ರದಿಂದ ವ್ಯಾಕ್ಸಿನ್‌ ವಿತರಣೆಗೆ ಮಾರ್ಗಸೂಚಿ


Team Udayavani, Jun 9, 2021, 8:35 AM IST

ಜನಸಂಖ್ಯೆ ಆಧರಿಸಿ ಲಸಿಕೆ : ಕೇಂದ್ರದಿಂದ ವ್ಯಾಕ್ಸಿನ್‌ ವಿತರಣೆಗೆ ಮಾರ್ಗಸೂಚಿ

ಹೊಸದಿಲ್ಲಿ : ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನಸಂಖ್ಯೆ, ಕೊರೊನಾ ಸೋಂಕಿನ ತೀವ್ರತೆ, ಜನರಿಗೆ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಪ್ರಗತಿ ಮತ್ತು ಲಸಿ ಕೆ ಪೋಲು ಆಧಾರದ ಮೇಲೆ ದೇಶಾದ್ಯಂತ ಲಸಿಕೆಯನ್ನು ಹಂಚಿಕೆ ಮಾಡಲಾಗುತ್ತದೆ.

ಸೋಮವಾರವಷ್ಟೇ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಶೇ. 75ರಷ್ಟು ಲಸಿಕೆಯನ್ನು ಕೇಂದ್ರ ಸರಕಾರವೇ ಖರೀದಿಸಿ ಹಂಚಿಕೆ ಮಾಡಲಿದೆ. ರಾಜ್ಯಗಳು ನೇರವಾಗಿ ಖರೀದಿ ಮಾಡುವಂತಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ.

ಈ ಮಾರ್ಗ ಸೂಚಿಗಳು ಜೂ. 21ರಂದು ಜಾರಿಯಾಗಲಿವೆ. ಸರಕಾರಿ ಮತ್ತು ಖಾಸಗಿ ಲಸಿಕೆ ಕೇಂದ್ರಗಳಲ್ಲೂ ಉಚಿತವಾಗಿ ಲಸಿಕೆ ಸಿಗಲಿದೆ. ಜನತೆ ಕೊ-ವಿನ್‌ ಆ್ಯಪ್‌ ಮೂಲಕ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಸ್ಥಳದಲ್ಲಿಯೇ ನೋಂದಣಿ ಅವಕಾಶವೂ ಇದೆ ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಹೊಸ ಮಾರ್ಗಸೂಚಿ ಪ್ರಕಾರ, ಆಯಾ ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ, ಹೆಚ್ಚು ಜನಸಂಖ್ಯೆ ಇರುವ ರಾಜ್ಯಗಳಿಗೆ ಹೆಚ್ಚು ಲಸಿಕೆ ದೊರೆಯಲಿದೆ. ಆದರೆ ಲಸಿಕೆ ವ್ಯರ್ಥ ಮಾಡಿದರೆ ಲಸಿಕೆ ಪೂರೈಕೆಯನ್ನು ಕಡಿತ ಮಾಡಲಾಗುತ್ತದೆ. ಹೀಗಾಗಿ ಲಸಿಕೆಯನ್ನು ಎಚ್ಚರದಿಂದ ಬಳಸಿಕೊಳ್ಳಬೇಕಿದೆ.

ಯಾವ ರಾಜ್ಯಕ್ಕೆ ಎಷ್ಟು ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಹೀಗಾಗಿ ಲಭ್ಯತೆಯ ಆಧಾರದಲ್ಲಿ ರಾಜ್ಯ ಸರಕಾರಗಳು ಜನರಿಗೆ ಲಸಿಕೆ ನೀಡಬಹುದು.

ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ವರ್ಗಾವಣೆ ರಹಿತ ಎಲೆಕ್ಟ್ರಾನಿಕ್‌ ವೋಚರ್‌ ಬಳಸಲು ಪ್ರೋತ್ಸಾಹಿಸಲಾಗುವುದು ಎಂದು ಕೇಂದ್ರ ಸರಕಾರ ಇದೇ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ವೋಚರ್‌ ಗಳಿಗೆ ಆರ್‌ ಬಿಐ ಒಪ್ಪಿಗೆ ಇರಬೇಕು, ಆರ್ಥಿಕವಾಗಿ ಹಿಂದುಳಿದವರು ಈ ವೋಚರ್‌ ಬಳಸುವಂತೆ ಪ್ರೋತ್ಸಾಹಿಸಲಾಗುವುದು ಎಂದಿದೆ.

44 ಕೋಟಿ ಲಸಿಕೆಗೆ ಕೇಂದ್ರ ಬೇಡಿಕೆ
ದೇಶದ 18 ವರ್ಷ ತುಂಬಿದ ಎಲ್ಲರಿಗೂ ಉಚಿತ ಲಸಿಕೆ ಕೊಡುವ ಬಗ್ಗೆ ಘೋಷಿಸಿದ ಕೇಂದ್ರ ಸರಕಾರ, ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಗಾಗಿ ಉತ್ಪಾದಕ ಕಂಪೆನಿಗಳಿಗೆ ಬೇಡಿಕೆ ಸಲ್ಲಿಸಿದೆ. ಕೊವಿಶೀಲ್ಡ್‌ 25 ಕೋಟಿ ಡೋಸ್‌ ಮತ್ತು ಕೊವ್ಯಾಕ್ಸಿನ್‌ 19 ಕೋಟಿ ಡೋಸ್‌ಗೆ ಬೇಡಿಕೆ ಸಲ್ಲಿಸಲಾಗಿದೆ.

ಈ 44 ಕೋಟಿ ಡೋಸ್‌ಗಳನ್ನು ಆಗಸ್ಟ್‌ನಿಂದ ಡಿಸೆಂಬರ್‌ ನಡುವಣ ಅವಧಿಯಲ್ಲಿ ಸಂಸ್ಥೆಗಳು ಪೂರೈಸಬೇಕು ಎಂದು ಕೇಂದ್ರ ಸರಕಾರ ತಿಳಿಸಿದೆ. ಈಗಾಗಲೇ ಶೇ. 30ರಷ್ಟು ಹಣವನ್ನು ಭಾರತ್‌ ಬಯೊಟೆಕ್‌ ಮತ್ತು ಸೀರಂ ಇಂಟರ್‌ನ್ಯಾಶನಲ್‌ ಕಂಪೆನಿಗಳಿಗೆ ಮುಂಗಡವಾಗಿ ನೀಡಲಾಗಿದೆ ಎಂದೂ ಹೇಳಿದೆ.

ಇದರ ಜತೆಗೆ 30 ಕೋಟಿ ಬಯಾಲಜಿಕಲ್‌ ಇ ಲಸಿಕೆಗೂ ಕೇಂದ್ರ ಸರಕಾರ ಬೇಡಿಕೆ ಸಲ್ಲಿಸಿದ್ದು, ಇದು ಸೆಪ್ಟಂಬರ್‌ ವೇಳೆಗೆ ಲಭ್ಯವಾಗಲಿದೆ.

ಉಚಿತ ಲಸಿಕೆ, ಪಡಿತರ: 1.45 ಲಕ್ಷ ಕೋ.ರೂ. ವೆಚ್ಚ
ಪ್ರಧಾನಿ ಮೋದಿ ಘೋಷಿಸಿದ ಉಚಿತ ಲಸಿಕೆ ಮತ್ತು ನವೆಂಬರ್‌ ವರೆಗೆ ಉಚಿತ ಪಡಿತರ ಯೋಜನೆಯಿಂದಾಗಿ ಕೇಂದ್ರದ ಬೊಕ್ಕಸಕ್ಕೆ 1.45 ಲಕ್ಷ ಕೋ.ರೂ. ಹೊರೆ ಬೀಳಲಿದೆ. ಉಚಿತ ಲಸಿಕೆಗೆ 45 ಸಾವಿರದಿಂದ 50 ಸಾವಿರ ಕೋ.ರೂ. ವೆಚ್ಚವಾಗಲಿದೆ. ದೇಶದ 80 ಕೋಟಿ ಬಡವರಿಗೆ 5 ಕೆ.ಜಿ. ಅಕ್ಕಿ ಅಥವಾ ಗೋಧಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯ ನೀಡಲು 1.1 ಲಕ್ಷ ಕೋ.ರೂ. ವೆಚ್ಚವಾಗಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.