Lok Sabha Result: ಚುನಾವಣೋತ್ತರ ಸಮೀಕ್ಷೆಯ ಭವಿಷ್ಯದ ಲೆಕ್ಕಾಚಾರ ತಪ್ಪಿದ್ದು ಎಲ್ಲಿ?

ಉತ್ತರ ಪ್ರದೇಶದಲ್ಲಿ ಎನ್‌ ಡಿಎ 67 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಹೇಳಿತ್ತು.

Team Udayavani, Jun 4, 2024, 5:34 PM IST

Lok Sabha Result: ಚುನಾವಣೋತ್ತರ ಸಮೀಕ್ಷೆಯ ಭವಿಷ್ಯದ ಲೆಕ್ಕಾಚಾರ ತಪ್ಪಿದ್ದು ಎಲ್ಲಿ?

ಲೋಕಸಭೆ ಚುನಾವಣೆಯ ಏಳು ಹಂತದ ಮತದಾನ ಮುಕ್ತಾಯ ಕಂಡ ಬೆನ್ನಲ್ಲೇ ಹಲವು ಮಾಧ್ಯಮಗಳು ಪ್ರಕಟಿಸಿದ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿದ್ದು, ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದ್ದವು. ಆದರೆ ಮಂಗಳವಾರ (ಜೂನ್‌ 04) ಬಹಿರಂಗಗೊಂಡ ಫಲಿತಾಂಶದಲ್ಲಿ ಸಮೀಕ್ಷೆಯ ಲೆಕ್ಕಾಚಾರ ತಲೆಕೆಳಗಾಗಿದ್ದು ಸ್ಪಷ್ಟವಾಗಿದೆ. ಅಲ್ಲದೇ ಉತ್ತರಪ್ರದೇಶ, ಪಶ್ಚಿಮಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ ಎಂದು Axis My india ಚುನಾವಣೋತ್ತರ ಸಮೀಕ್ಷೆ ಏಜೆನ್ಸಿ ಅಧ್ಯಕ್ಷ ಪ್ರದೀಪ್‌ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ:Maharashtra ಶಿವಸೇನೆಯ ಬಲ ನನ್ನಲ್ಲೇ ಇದೆ ಎಂದು ತೋರಿಸಿದ ಉದ್ಧವ್ ಠಾಕ್ರೆ!

ಉತ್ತರಪ್ರದೇಶ, ಪಶ್ಚಿಮಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ನಮ್ಮ ಸಮೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಬಿಜೆಪಿ ಮತ ಗಳಿಸಿದ್ದು, ದಲಿತ ಸಮುದಾಯ ಪ್ರಮುಖ ಪಾತ್ರವಹಿಸಿದ್ದು, ಇದು ಇಂಡಿಯಾ ಬ್ಲಾಕ್‌ ಗೆ ವರದಾನವಾಗಿದೆ ಎಂದು ವಿಶ್ಲೇಷಿಸಿದ್ದಾರೆ.

ಎನ್‌ ಡಿಎ 361ರಿಂದ 401 ಸ್ಥಾನಗಳನ್ನು ಗಳಿಸಲಿದ್ದು, ಎನ್‌ ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದೇವು. ಆದರೆ ಈಗಿನ ಟ್ರೆಂಡ್‌ ಪ್ರಕಾರ ಎನ್‌ ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂದರೆ ಸುಮಾರು 66 ಸ್ಥಾನಗಳು ಕಡಿಮೆಯಾದಂತಾಗಿದೆ ಎಂದು ಗುಪ್ತಾ ಇಂಡಿಯಾ ಟುಡೇ ಟಿವಿ ಜತೆಗಿನ ಚರ್ಚೆಯಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಎನ್‌ ಡಿಎ 67 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಹೇಳಿತ್ತು. ಆದರೆ ಎನ್‌ ಡಿಎ ಕೇವಲ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬರೋಬ್ಬರಿ 30 ಸ್ಥಾನಗಳು ಕಡಿಮೆ ಪಡೆದಂತಾಗಿದೆ. ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 26ರಿಂದ 32 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದ್ದು, ಅಲ್ಲಿ ಕೇವಲ 11 ಸ್ಥಾನ ಮಾತ್ರ ಪಡೆದಿದೆ. ನಮ್ಮ ಭವಿಷ್ಯಗಿಂತ 15 ಸ್ಥಾನಗಳ ವ್ಯತ್ಯಾಸ ಬಂದಿದೆ. ಮಹಾರಾಷ್ಟ್ರದಲ್ಲೂ ಎನ್‌ ಡಿಎ 28 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಿದ್ದು, ಕೇವಲ 20 ಕ್ಷೇತ್ರಗಳಲ್ಲಿ ಗೆಲುವು ಗಳಿಸಿದೆ. ಹೀಗಾಗಿ ಮೂರು ರಾಜ್ಯಗಳಲ್ಲಿ ಎನ್‌ ಡಿಎಗೆ 60 ಸ್ಥಾನಗಳ ಕೊರತೆಯಾಗಿದೆ ಎಂದು ಗುಪ್ತಾ ಹೇಳಿದರು.

ನಮ್ಮ ಸಮೀಕ್ಷೆ ಸಂಪೂರ್ಣ ತಪ್ಪಾಗಿದೆ. ಈ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಗುಪ್ತಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ದಲಿತ ಮತಗಳು ನಿರ್ಣಾಯಕ ಪಾತ್ರ ವಹಿಸಿವೆ ಎಂದರು.

ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ದಲಿತರು ಅಂತರ ಕಾಯ್ದುಕೊಂಡಿದ್ದಾರೆ. ಮೀಸಲಾತಿ, ಸಂವಿಧಾನ ಬದಲಾವಣೆಯಂತಹ ವಿಚಾರಗಳು ಮತ ಬದಲಾವಣೆಗೆ ಕಾರಣವಾದವು. ಮಹಾರಾಷ್ಟ್ರದಲ್ಲಿ ಪ್ರಕಾಶ್‌ ಅಂಬೇಡ್ಕರ್‌ ಅವರ ವಂಚಿತ್‌ ಬಹುಜನ್‌ ಅಘಾಡಿ (ವಿಬಿಎ)ಯಿಂದ ಇಂಡಿಯಾ ಬ್ಲಾಕ್‌ ಗೆ ಲಾಭವಾಗಿದೆ.

ಆದರೆ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್‌, ಬಿಹಾರ, ತಮಿಳುನಾಡು ಹಾಗೂ ಇತರ ರಾಜ್ಯಗಳ ಸಮೀಕ್ಷೆ ಸರಿಯಾಗಿದೆ. ಅದೇ ರೀತಿ ಆಂಧ್ರಪ್ರದೇಶ, ಒಡಿಶಾ. ಸಿಕ್ಕಿಂ ಮತ್ತು ಅರುಣಾಚಲ್‌ ಪ್ರದೇಶದ ವಿಧಾನಸಭೆ ಚುನಾವಣೆಯ ಸಮೀಕ್ಷೆ ಸರಿಯಾಗಿದೆ ಎಂದು ಗುಪ್ತಾ ಹೇಳಿದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.