ಕೋಲಾರ ಬಂದ್‌ನಲ್ಲಿ ಪಾಲ್ಗೊಳ್ಳದಂತೆ ನೋಟಿಸ್ : ಮುತಾಲಿಕ್ ಕಿಡಿ


Team Udayavani, Nov 17, 2021, 9:25 PM IST

ಕೋಲಾರ ಬಂದ್‌ನಲ್ಲಿ ಪಾಲ್ಗೊಳ್ಳದಂತೆ ನೋಟಿಸ್ : ಮುತಾಲಿಕ್ ಕಿಡಿ

ಗದಗ: ಕೋಲಾರದಲ್ಲಿ ದತ್ತ ಮಲಾಧಾರಿಗಳ ಕೊಲೆಗೆ ಯತ್ನಿಸಿರುವುದನ್ನು ಖಂಡಿಸಿ ನ.18 ರಂದು ಕೆರೆದಿರುವ ಕೋಲಾರ್ ಬಂದ್‌ನಲ್ಲಿ ಪಾಲ್ಗೊಳ್ಳದಂತೆ ನನಗೆ ಎಂಟ್ರಿ ಬ್ಯಾನ್ ನೋಟಿಸ್ ನೀಡಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರ ಕಾಂಗ್ರೆಸ್, ಜೆಡಿಎಸ್ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಹಿಂದೂ ನಾಯಕರನ್ನು ತಡೆದರೆ, ಹಿಂದುತ್ವವನ್ನು ತಡೆದಂತೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹರಿಹಾಯ್ದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಘಟನೆ ಖಂಡಿಸಿ ಶ್ರೀರಾಮ ಸೇನೆ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗಹರಣ ಸಮಿತಿ ಸೇರಿದಂತೆ ಅನೇಕ ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಶಾಂತಿಯುತ ಬಂದ್‌ನಲ್ಲಿ ಪಾಲ್ಗೊಳ್ಳಬೇಕೆಂದಿರುವ ನನಗೆ ಅನಾವಶ್ಯಕವಾಗಿ ಇಂದು ಸಂಜೆ 6 ಗಂಟೆಗೆ ಕೋಲಾರ್ ಎಂಟ್ರಿ ಬ್ಯಾನ್ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಮೂಲಕ ದತ್ತ ಮಾಲಾಧಾರಿಗಳ ಹಲ್ಲೆಕೋರರಿಗೆ ಸರಕಾರವೇ ಬೆಂಬಲವಾಗಿ ನಿಲ್ಲುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ : ಪಟಾಕಿ ಸಿಡಿಸಿ ಗಾಯಗೊಳಿಸಿದ ವ್ಯಕ್ತಿಗೆ ಜೈಲು ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ದಶಕಗಳ ಹಿಂದೆ ನನ್ನ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಅದರಲ್ಲಿನ ಯಾವುದೇ ಪ್ರಕರಣ ಈಗ ಚಾಲ್ತಿಯಲ್ಲಿಲ್ಲ. ಆ ಎಲ್ಲ ಪ್ರಕರಣಗಳಲ್ಲಿ ನಾನು ನಿರ್ದೋಷಿಯಾಗಿದ್ದೇನೆ. ಹೀಗಾಗಿ ತಕ್ಷಣವೇ ಕೋಲಾರ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹಿಂಪಡೆಯಬೇಕು. ಈ ಬಗ್ಗೆ ನಮ್ಮ ವಕೀಲರೊಂದಿಗೆ ಚರ್ಚಿಸಿದ್ದು, ತುರ್ತು ತಡೆಯಾಜ್ಞೆ ಪಡೆದುಕೊಂಡು, ಕೋಲಾರ್ ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ಪ್ರಮೋದ್ ಮುತಾಲಿಕ್ ತಿಳಿಸಿದ ಅವರು, ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಈ ಸರಕಾರ, ಹಿಂದೂಗಳ ಮೇಲಿನ ಹಲ್ಲೆ, ತಲಿಬಾನ್ ಕೃತ್ಯವನ್ನು ಪರೋಕ್ಷವಾಗಿ ಸಮರ್ಥಿಸಿಕೊಳ್ಳುತ್ತಿದೆ. ಇದೊಂದು ನಿರ್ಲಜ್ಜ ಸರಕಾರವೆಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.