ಪುಣೆ ಮೆಟ್ರೋ ರೈಲು ನಿಲ್ದಾಣ ಲೋಕಾರ್ಪಣೆ : ಟಿಕೆಟ್ ಖರೀದಿಸಿ ಪ್ರಧಾನಿ ಪ್ರಯಾಣ
Team Udayavani, Mar 6, 2022, 9:35 PM IST
ಪುಣೆ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪುಣೆ ಮೆಟ್ರೋ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಲೋಕಾರ್ಪಣೆ ಮಾಡಿದರು. ಪುಣೆಯ ಗಾರ್ವಾರೆ ಮೆಟ್ರೋ ರೈಲು ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಸಮಾರಂಭದ ನಂತರ, ನಿಲ್ದಾಣದಲ್ಲಿರುವ ಕಿಯೋಸ್ಕ್ನಿಂದ ಖುದ್ದು ಟಿಕೆಟ್ ಖರೀದಿಸಿದ ಮೋದಿ, ಅಲ್ಲಿಂದ ಐದು ಕಿ.ಮೀ. ದೂರದಲ್ಲಿರುವ ಆನಂದನಗರ್ ನಿಲ್ದಾಣದವರೆಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಪ್ರಧಾನಿಯಿದ್ದ ಬೋಗಿಯಲ್ಲಿದ್ದ ದಿವ್ಯಾಂಗರ ಜೊತೆಯಲ್ಲಿ ಮೋದಿ ಉಭಯಕುಶಲೋಪರಿ ನಡೆಸಿದರು.
ಒಟ್ಟು 32 ಕಿ.ಮೀ. ಉದ್ದದ ಈ ಯೋಜನೆಗೆ 2016ರಲ್ಲಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಮೊದಲ ಹಂತದಲ್ಲಿ 12 ಕಿ.ಮೀ. ದೂರದವರೆಗಿನ ಯೋಜನೆ ಸಿದ್ಧವಾಗಿದ್ದು, ಉಳಿದ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ.
ಶಿವಾಜಿ ಪುತ್ಥಳಿ ಅನಾವರಣ
ಪುಣೆ ಮಹಾನಗರ ಪಾಲಿಕೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಿವಾಜಿ ಪುತ್ಥಳಿಯನ್ನು ಪ್ರಧಾನಿ ಲೋಕಾರ್ಪಣೆ ಮಾಡಿದರು. 9.5 ಅಡಿ ಎತ್ತರದ 1,850 ಕೆಜಿ ತೂಕದ ಕಂಚು ಲೋಹದ ಮತ್ತೂಂದು ಸ್ವರೂಪವಾದ ಗನ್ ಮೆಟಲ್ನಿಂದ ನಿರ್ಮಿಸಲಾಗಿದೆ. ಇದೇ ವೇಳೆ, ಮೋದಿಯವರು ಪಾಲಿಕೆ ಆವರಣದಲ್ಲಿರುವ ಜ್ಯೋತಿಭಾಯಿ ಫುಲೆಯವರ ಪುತ್ಥಳಿಗೂ ಮಾಲಾರ್ಪಣೆ ಮಾಡಿದರು.
ಮ್ಯೂಸಿಯಂ ಉದ್ಧಾಟನೆ
ಖ್ಯಾತ ವ್ಯಂಗ್ಯಚಿತ್ರಕಾರ ದಿ. ಆರ್.ಕೆ. ಲಕ್ಷ್ಣಣ್ರವರ ಜೀವನವನ್ನು ಕಟ್ಟಿಕೊಡುವ ಹೊಸ ವಸ್ತುಸಂಗ್ರಹಾಲಯವನ್ನು ಮೋದಿ ಉದ್ಘಾಟಿಸಿದರು. ಇದರಲ್ಲಿ ಲಕ್ಷ್ಮಣ್ ಅವರು ಕಾಮನ್ ಮ್ಯಾನ್ ಪರಿಕಲ್ಪನೆಯಡಿ ರಚಿಸಿದ 30,000 ವ್ಯಂಗ್ಯಚಿತ್ರಗಳನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.