Corruption Case: ಆರ್ ಜಿ ಕರ್ ಮಾಜಿ ಪ್ರಾಂಶುಪಾಲ ಘೋಷ್ ನಿವಾಸದ ಮೇಲೆ ED ದಾಳಿ
ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಿಬಿಐ ಘೋಷ್ ಅವರನ್ನು ಬಂಧಿಸಿತ್ತು.
Team Udayavani, Sep 6, 2024, 10:08 AM IST
ನವದೆಹಲಿ: ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು-ಆಸ್ಪತ್ರೆಯ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಸೆ.06) ಬೆಳಗ್ಗೆ ಜಾರಿ ನಿರ್ದೇಶನಾಲಯ ಆರ್ ಜಿ ಕರ್ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ನಿಕಟವರ್ತಿ ಬಿಪ್ಲಾಬ್ ಸಿಂಗ್ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಪ್ರಕರಣದಲ್ಲಿ ಸಿಬಿಐ ಈಗಾಗಲೇ ಬಿಪ್ಲಾಬ್ ಸಿಂಗ್ ನನ್ನು ಬಂಧಿಸಿದೆ. ಕಳೆದ ತಿಂಗಳು ಆರ್ ಜಿ ಕರ್ ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆಗೈದ ಘಟನೆ ನಡೆದಿದ್ದು, ಇದಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಜಾರಿ ನಿರ್ದೇಶನಾಲಯ (ED) ಘೋಷ್ ಅವರ ಬೆಲಿಯಾಘಾಟಾ ನಿವಾಸ, ಹೌರಾ ಹಾಗೂ ಸುಭಾಸ್ ಗ್ರಾಮ್ ನಿವಾಸ ಮತ್ತು ಮೂವರು ನಿಕಟವರ್ತಿಗಳ ಮನೆ ಮೇಲೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಆಸ್ಪತ್ರೆಯ ಡಾಟಾ ಎಂಟ್ರಿ ನಿರ್ವಾಹಕ ಪ್ರಸೂನ್ ಚಟರ್ಜಿ ನಿವಾಸದ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಆಸ್ಪತ್ರೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಿಬಿಐ ಘೋಷ್ ಅವರನ್ನು ಬಂಧಿಸಿತ್ತು.
ತನಿಖೆಯ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸುವಂತೆ ಕೋಲ್ಕತಾ ಹೈಕೋರ್ಟ್ ಸಿಬಿಐಗೆ ಸೂಚನೆ ನೀಡಿದ್ದು, ಸೆಪ್ಟೆಂಬರ್ 17ರಂದು ವರದಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
Delhi 5 ಸಾವಿರ ನಕಲಿ ವೀಸಾ ಸೃಷ್ಟಿ: 300 ಕೋ. ರೂ. ಸಂಪಾದನೆ!
Kolkata; ಮಗುವಿನ ಚಿಕಿತ್ಸೆಗೆ ಬಂದ ತಾಯಿಗೆ ಆಸ್ಪತ್ರೆಯಲ್ಲಿ ಕಿರುಕುಳ: ವ್ಯಕ್ತಿ ಬಂಧನ
MUST WATCH
ಹೊಸ ಸೇರ್ಪಡೆ
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.