Problem Solve: ಬಿಪಿಸಿಎಲ್‌ ಅಧಿಕಾರಿಗಳ ಅಸಹಕಾರ: ತೈಲ ಸಾಗಾಟ ಟ್ಯಾಂಕರ್‌ ಮುಷ್ಕರ

ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಸಂಧಾನ; ಲೋಡಿಂಗ್‌ ಆರಂಭ

Team Udayavani, Sep 11, 2024, 1:41 AM IST

BPCL-MUSKARA

ಬೈಕಂಪಾಡಿ: ಬೈಕಂಪಾಡಿಯ ಬಿಪಿಸಿಎಲ್‌ ಪೆಟ್ರೋಲಿಯಂ ಡಿಪೋದಲ್ಲಿ ಟ್ಯಾಂಕರ್‌ ಚಾಲಕರ ಸಮಸ್ಯೆಗಳಿಗೆ ಬಿಪಿಸಿಎಲ್‌ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ, ಜತೆಗೆ ಈ ಹಿಂದೆ ಇದ್ದಂತೆ ಮಾಸಿಕ ಐದು – ಆರು ಸಾವಿರ ಕಿಲೋಮೀಟರ್‌ಗಳ ಬದಲಾಗಿ ಕೇವಲ 2 ಸಾವಿರ ಕಿ.ಮೀ.ಗಳಿಗೆ ಸಂಚಾರ ನಿರ್ಬಂಧಿಸಿರುವುದನ್ನು ವಿರೋಧಿಸಿ ಎರಡು ದಿನಗಳ ಕಾಲ ನಡೆಯುತ್ತಿದ್ದ ಟ್ಯಾಂಕರ್‌ ಮುಷ್ಕರಕ್ಕೆ ತಾತ್ಕಾಲಿಕವಾಗಿ ವಿರಾಮ ದೊರೆತಿದೆ.

ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಟ್ರಾನ್ಸ್‌ಫೋರ್ಟ್‌ ಪದಾಧಿಕಾರಿಗಳು, ಟ್ಯಾಂಕರ್‌ ಮಾಲಕರು ಸೇರಿ ಬಿಪಿಸಿಎಲ್‌ ಅಧಿಕಾರಿಗಳ ಜತೆ ಸುದೀರ್ಘ‌ ಮಾತುಕತೆ ನಡೆಸಿದರು. ಮಂಗಳವಾರ ಜಿಲ್ಲಾಧಿಕಾರಿಯ ಪ್ರತಿನಿಧಿಯಾಗಿ ಬಂದಿರುವ ಅಧಿಕಾರಿ ಗೋಕುಲ್‌ದಾಸ್‌ ನಾಯಕ್‌ ಅವರು ಮಾತುಕತೆ ನಡೆಸಿ, ಟ್ಯಾಂಕರ್‌ ಚಾಲಕರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಲ್ಲಿ ಪ್ರಯತ್ನವಾಗಿದೆ.

ತೈಲ ಸಾಗಾಟವನ್ನು ಒಂದು ಟ್ಯಾಂಕರ್‌ಗೆ ಹಿಂದಿನಂತೆಯೇ ಆರೇಳು ಸಾವಿರ ಕಿ.ಮೀ. ಸಂಚಾರಕ್ಕೆ ನೀಡುವ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಹಿರಿಯ ಅಧಿಕಾರಿಗಳ ತೀರ್ಮಾನವಾಗಬೇಕಿದೆ. ಇದರ ಬಗ್ಗೆ ಬಿಪಿಸಿಎಲ್‌ ಡಿಪೋ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಮುಂದಿನ ಎರಡು ವಾರದೊಳಗಾಗಿ ಚಾಲಕರ ಸಮಸ್ಯೆ ಪರಿಹಾರವಾಗುವ ವಿಶ್ವಾಸವಿದೆ. ತತ್‌ಕ್ಷಣ ಮುಷ್ಕರವನ್ನು ನಿಲ್ಲಿಸಿ ತೈಲ ಸರಬರಾಜಿಗೆ ಟ್ಯಾಂಕರ್‌ ಚಾಲಕರ ಮುಂದಾಗಬೇಕು ಎಂದು ಮನವಿ ಮಾಡಿದರು.

ಸಮಸ್ಯೆಗಳ ಕುರಿತಾಗಿ ಟ್ಯಾಂಕರ್‌ ಚಾಲಕರು ಅಭಿಪ್ರಾಯ ವ್ಯಕ್ತಪಡಿಸಿ, ತೈಲ ಸಾಗಾಟ ಟ್ಯಾಂಕರ್‌ಗೆ ಸೂಕ್ತ ಸಮಯಕ್ಕೆ ಲೋಡಿಂಗ್‌ ಆಗುತ್ತಿಲ್ಲ, ಇದರಿಂದ ನಿಗದಿತ ಸಮಯದಲ್ಲಿ ಸಂಚಾರ, ಮನೆ ತಲುಪುವುದು ಕಷ್ಟವಾಗುತ್ತದೆ. ಕೆಲವು ಕಡೆ ಅನ್‌ಲೋಡಿಂಗ್‌ಗೆ ಮೂರ್‍ನಾಲ್ಕು ದಿನಗಳ ಕಾಲ ಕಾಯುವ ಸ್ಥಿತಿಯಿದೆ.
ಹಲವು ಸಂದರ್ಭಗಳಲ್ಲಿ ಸಂಸ್ಥೆಯ ನಿಗದಿತ ಅವಧಿಗಿಂತ ಹೆಚ್ಚು ಸಮಯ ಅನಿವಾರ್ಯವಾಗಿ ಟ್ಯಾಂಕರ್‌ಗಳನ್ನು ನಿಲ್ಲಿಸಿದ ಸಂದರ್ಭ ಜಿಪಿಎಸ್‌ ಲಾಕ್‌ ಸಿಸ್ಟಮ್‌ ತೆರವು ಮಾಡಲು ಹೇಳಿದರೆ ಇಲ್ಲಿನ ಡಿಪೋದ ಅಧಿಕಾರಿಗಳು ಸರಿಯಾದ ಸ್ಪಂದಿಸುತ್ತಿಲ್ಲ. ಜತೆಗೆ ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಸಮಸ್ಯೆಗಳು ಇವೆ. ಇದನ್ನು ಕೂಡ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗೆ ಸ್ಪಂದನೆ
ಟ್ಯಾಂಕರ್‌ ಚಾಲಕರ ಬೇಡಿಕೆಗೆ ಸ್ಪಂದಿಸಿರುವ ಅಧಿಕಾರಿಗಳು ನಿಗದಿತ ಸಮಯದಲ್ಲಿ ಈಡೇರಿಸಲಾಗುವುದು ಎಂದು ಬಿಪಿಸಿಎಲ್‌ ಭರವಸೆ ನೀಡಿದ ಬಳಿಕ ತೈಲ ಲೋಡಿಂಗ್‌ ಆರಂಭಿಸಲಾಯಿತು. ತೈಲ ಸಾಗಾಟ ಟ್ಯಾಂಕರ್‌ ಮಾಲಕರ ವತಿಯಿಂದ ಸುಜಿತ್‌ ಆಳ್ವ, ಇಕ್ಬಾಲ್‌, ಬಿಪಿಸಿಎಲ್‌ನ ಹಿರಿಯ ಅಧಿಕಾರಿ ನೀರಜ್‌ ಅಗರ್ವಾಲ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.