ಅರ್ಜಿ ಇಲ್ಲದೆ ಸಾಧಕರನ್ನು ಗುರುತಿಸಲು ಕ್ರಮ: ಸುನಿಲ್‌

ಡಾ| ಯು. ಬಿ. ರಾಜಲಕ್ಷ್ಮೀ, ರೋಹಿತ್‌ ಕುಮಾರ್‌ ಅವರಿಗೆ ಪೌರ ಸಮ್ಮಾನ

Team Udayavani, Dec 12, 2021, 5:40 AM IST

ಅರ್ಜಿ ಇಲ್ಲದೆ ಸಾಧಕರನ್ನು ಗುರುತಿಸಲು ಕ್ರಮ: ಸುನಿಲ್‌

ಕಾರ್ಕಳ: ಮುಂದಿನ ರಾಜ್ಯೋತ್ಸವ ಸಂದರ್ಭ ಅರ್ಜಿಗಳನ್ನು ಸ್ವೀಕರಿಸದೆ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತರಂಗ ವಾರಪತ್ರಿಕೆಯ ಸಂಪಾದಕಿ ಡಾ| ಯು.ಬಿ. ರಾಜಲಕ್ಷ್ಮೀ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲು ಅವರಿಗೆ ಕಾರ್ಕಳದಲ್ಲಿ ಶನಿವಾರ ಜರಗಿದ ಹುಟ್ಟೂರ ಪೌರ ಅಭಿನಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್‌ ಉದ್ಘಾಟಿಸಿದರು. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅಭಿನಂದನ ಭಾಷಣ ಮಾಡಿ, ಡಾ| ರಾಜಲಕ್ಷ್ಮೀ ಸದ್ದುಗದ್ದಲವಿಲ್ಲದೆ ಎಲೆಮರೆಯ ಕಾಯಿಯಂತೆ ಸಾಧನೆಯ ಹಾದಿಯಲ್ಲಿ ನಡೆದು ಬಂದವರು. ದೀರ್ಘಾವಧಿ ತರಂಗ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವುದಲ್ಲದೆ ತರಂಗ ಪತ್ರಿಕೆಯ ವ್ಯವಸ್ಥಾಪಕಿ ಡಾ| ಸಂಧ್ಯಾ ಪೈ ಪ್ರೀತಿಗೆ ಪಾತ್ರರಾದವರು ಎಂದರು.

ಅಂತೆಯೇ ರೋಹಿತ್‌ ಕಟೀಲು ಅವರಲ್ಲಿ ಹಿರಿಯರಲ್ಲಿ ರಕ್ತಗತವಾಗಿದ್ದ ನಾಯಕತ್ವ, ಹೋರಾಟ ಮನೋಭಾವ, ಸೌಂದರ್ಯ ಪ್ರಜ್ಞೆ ಬೆಳೆದು ಬಂದಿದೆ ಎಂದರು.

ಇದನ್ನೂ ಓದಿ:ಒಂಟೆ ಸವಾರಿ ವಿಡಿಯೋ ಹಂಚಿಕೊಂಡ ಸಚಿವ ಕಿರಣ್‌ ರಿಜಿಜು 

ಹಿರಿಯ ಉದ್ಯಮಿ ಬೋಳ ಪ್ರಭಾಕರ ಕಾಮತ್‌, ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ| ಮಂಜುನಾಥ ಕೋಟ್ಯಾನ್‌, ಬಿಲ್ಲವ ಸಮಾಜ ಅಧ್ಯಕ್ಷ ಡಿ.ಆರ್‌. ರಾಜು, ಉದ್ಯಮಿಗಳಾದ ಮಹೇಶ್‌ ಶೆಟ್ಟಿ, ಕುಡುಪುಲಾಜೆ, ಚಿತ್ರ ನಟಿಯರಾದ ದುನಿಯ ರಶ್ಮಿ, ಭಾವನಾ ಮಾತನಾಡಿ ದರು. ಕರಿಯಣ್ಣ ಶೆಟ್ಟಿ, ಶಿವರಾಮ ಶೆಟ್ಟಿ, ಅಪ್ಸರಾ ರೋಹಿತ್‌ ಕುಮಾರ ಕಟೀಲು, ಸಮಿತಿ ಅಧ್ಯಕ್ಷ ಸುನಿಲ್‌ ಕುಮಾರ್‌ ವೇದಿಕೆಯಲ್ಲಿದ್ದರು.

ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿ ವಂದಿಸಿದರು. ರಾಜೇಂದ್ರ ಭಟ್‌ ನಿರೂಪಿಸಿದರು. ಪ್ರಶಸ್ತಿ ಪುರಸ್ಕೃತರಿಬ್ಬರಿಗೂ ತುಪ್ಪದ ನಂದಾದೀಪ ಬೆಳಗಿ, ಪನ್ನೀರು ಚಿಮುಕಿಸಿ, ಅವರದೇ ಎತ್ತರದ ಮಾನ ಪತ್ರ, ಸ್ಮರಣಿಕೆ ಫ‌ಲಪುಷ್ಪ ನೀಡಿ ಗೌರವಿಸಲಾಯಿತು. ಡಾ| ರಾಜಲಕ್ಷ್ಮೀ ಸಮ್ಮಾನ ಸ್ವೀಕರಿಸಿದ ವೇಳೆ ತರಂಗ ಪತ್ರಿಕೆಯ ವ್ಯವಸ್ಥಾಪಕಿ ಡಾ| ಸಂಧ್ಯಾ ಎಸ್‌. ಪೈ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.