![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 23, 2020, 6:00 AM IST
ಬೆಂಗಳೂರು: ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ವಿವಾದಾತ್ಮಕ ಮೂಢ ನಂಬಿಕೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿ ರಾಜ್ಯದ ಬಿಜೆಪಿ ಸರಕಾರ ಆದೇಶ ಹೊರಡಿಸಿದೆ.
ಆಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಮಾನ ವೀಯ, ದುಷ್ಟ ಪದ್ಧತಿಗಳು, ಮಾಟ ಮಂತ್ರ ಮತ್ತು ವಾಮಾಚಾರ ನಿಯಂತ್ರಿಸುವ ಮಸೂದೆ- 2017ನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಅಂಗೀ ಕರಿಸಲಾಗಿತ್ತು. ಬಿಜೆಪಿ ಸರಕಾರ ಈ ಕಾಯ್ದೆಯನ್ನು ಯಾವುದೇ ಬದಲಾವಣೆಯಿಲ್ಲದೆ 2020ರ ಜ. 4ರಿಂದ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಿದ್ದು, ಶೀಘ್ರವೇ ಕರ್ನಾಟಕ ರಾಜ್ಯಪತ್ರ ಹೊರಡಿಸಲಿದೆ.
ಹಿನ್ನೆಲೆ
ರಾಜ್ಯದಲ್ಲಿ ಮಡೆಮಡಸ್ನಾನ ನಿಷೇಧಿಸುವಂತೆ ಪ್ರಗತಿಪರ ಸಂಘಟನೆಗಳು ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಹಾರಾಷ್ಟ್ರ ಮಾದರಿಯಲ್ಲಿ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತರಲು ರಮೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅವರ ಸಮಿತಿ ವರದಿ ಆಧಾರದಲ್ಲಿ 2017ರಲ್ಲಿ ಮೂಢ ನಂಬಿಕೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿತ್ತು. ಪ್ರಮುಖವಾಗಿ ಈ ಕಾಯ್ದೆಯಲ್ಲಿ ಕೆಲವು ನಂಬಿಕೆ ಗಳನ್ನು ನಿಷೇಧಿಸುವ ಬಗ್ಗೆ ಅಂದು ವಿಪಕ್ಷದಲ್ಲಿದ್ದ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ಬಿಜೆಪಿ ಈ ಕಾಯ್ದೆ ಕೇವಲ ಹಿಂದೂ ಧರ್ಮ ವನ್ನು ಮಾತ್ರ ಗುರಿಯಾಗಿಟ್ಟುಕೊಂಡು ಹಿಂದೂ ಧರ್ಮೀಯರ ಆಚರಣೆಗಳನ್ನು ನಿಷೇಧಿಸಲಾಗುತ್ತಿದೆ ಎಂದಿತ್ತು. ಆದರೆ ಕಾಂಗ್ರೆಸ್ ಸರಕಾರ ಅದೆಲ್ಲವನ್ನು ಸಮರ್ಥಿಸಿಕೊಂಡು, ಮೂಗು ಚುಚ್ಚುವುದು, ಹಚ್ಚೆ ಹಾಕಿಸುವುದು, ಜ್ಯೋತಿಷ ಹೇಳುವಂಥ ಕೆಲವು ಪದ್ಧತಿಗಳನ್ನು ಕೈಬಿಟ್ಟು ಕಾಯ್ದೆ ಜಾರಿಗೆ ಮುಂದಾಗಿತ್ತು. ಈಗ ಬಿಜೆಪಿ ಸರಕಾರ ಹಿಂದಿನ ಸರಕಾರ ಅವಧಿಯಲ್ಲಿ ವಿಧಾನ ಮಂಡಲದ ಎರಡೂ ಸದನಗಳಲ್ಲಿ ಅಂಗೀಕೃತ ವಾಗಿರುವಂತೆ ಜಾರಿಗೆ ತರಲು ನಿರ್ಧರಿಸಿ, ಅಧಿಕೃತ ಆದೇಶ ಹೊರಡಿಸಿದೆ.
ಏನೇನು ನಿಷೇಧ ?
ಎಂಜಲೆಲೆಯ ಮೇಲೆ ಉರುಳುವ ಮಡೆಸ್ನಾನ
ಸಿಡಿ ಹಾಯುವುದು
ಬೆತ್ತಲೆ ಸೇವೆ
ಋತುಮತಿಯಾದಾಗ ಮತ್ತು ಗರ್ಭಿಣಿಯನ್ನು ಊರ ಹೊರಗಿಡುವ ಪದ್ಧತಿ
ವಶೀಕರಣ, ವಾಮಾಚಾರ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.