ಕತಾರ್‌: ವಲಸೆ ಕಾರ್ಮಿಕರಿಗೆ ಹೆಚ್ಚು ಕೆಲಸ !


Team Udayavani, Apr 25, 2020, 11:17 AM IST

ಕತಾರ್‌: ವಲಸೆ ಕಾರ್ಮಿಕರಿಗೆ ಹೆಚ್ಚು ಕೆಲಸ !

ಮಣಿಪಾಲ : ಕೋವಿಡ್ 19 ವೈರಸ್‌ ವಿಶ್ವದಲ್ಲಿ ವಲಸೆ ಕಾರ್ಮಿಕರಿಗೆ ಸೃಷ್ಟಿಸಿರುವ ಸಮಸ್ಯೆ ಒಂದೇ-ನಿರುದ್ಯೋಗ ಮತ್ತು ಆರ್ಥಿಕ ನಷ್ಟ. ಯಾಕೆಂದರೆ ಲಾಕ್‌ ಡೌನ್‌ ಕಾರಣದಿಂದ ಯಾರಿಗೂ ಕೆಲಸ ಇಲ್ಲ. ಕೆಲವು ರಾಷ್ಟ್ರಗಳಲ್ಲಿ ಅವರಿಗೆ ಊಟ- ಉಪಾಹಾರದ ವ್ಯವಸ್ಥೆ ಮಾಡುತ್ತಿವೆ. ಆದರೆ ಕತಾರ್‌ ಆಡಳಿತ ವಲಸೆ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುತ್ತಿದೆ ಎಂಬ ಆರೋಪಕ್ಕೆ ಗುರಿಯಾಗಿದೆ.

ದಿ ಗಾರ್ಡಿಯನ್‌ ವರದಿ ಮಾಡಿರುವ ಪ್ರಕಾರ, ಕತಾರ್‌ 2022ರ ವಿಶ್ವಕಪ್‌ ಪೂರ್ವ ತಯಾರಿ ನಡೆಸುತ್ತಿದೆ. ಕ್ರೀಡಾಂಗಣ ನಿರ್ಮಾಣ ಕೆಲಸದಲ್ಲಿ ವಲಸೆ ಕಾರ್ಮಿಕರನ್ನು ಬಳಸಲಾಗುತ್ತಿದೆ. ಕ್ರೀಡಾಕೂಟಕ್ಕೆ ಇನ್ನೂ ಎರಡು ವರ್ಷಗಳಿದ್ದು, ಕಾಮಗಾರಿ ನಡೆಸಲು ಸಮಯವಿದೆ. ಆದರೆ ಅದರ ಬಗ್ಗೆ ಗಮನ ಹರಿಸದ ಕತಾರ್‌ ಆಡಳಿತ, ಪ್ರತಿನಿತ್ಯವೂ ನೂರಾರು ಕಾರ್ಮಿಕರಿಂದ ಕೆಲಸ ಮಾಡಿಸುತ್ತಿದೆ. ಅಲ್ಲಿ ಸಾಮಾಜಿಕ ಅಂತರವಾಗಲೀ, ಸುರಕ್ಷತಾ ಕ್ರಮವಾಗಲಿ ಪಾಲಿಸುತ್ತಿಲ್ಲ ಎನ್ನಲಾಗುತ್ತಿದೆ.

ದಿನದಿಂದ ದಿನಕ್ಕೆ ಸೋಂಕಿಗೆ ತುತ್ತಾಗುತ್ತಿರುವವ ಸಂಖ್ಯೆ ಹೆಚ್ಚುತ್ತಿರುವ ಇಂತಹ ಪರಿಸ್ಥಿತಿಯಲ್ಲೂ ಸೀಮಿತ ಜಾಗದಲ್ಲಿ ಹೆಚ್ಚು ಕಾರ್ಮಿಕ ಶಿಬಿರಗಳನ್ನು ನಿರ್ಮಿಸಿದೆ. ಒಂದೇ ವಸತಿ ನಿಲಯವನ್ನು ಹಲವರಿಗೆ ನೀಡಿದ್ದು, ಎಲ್ಲಿಯೂ ನಿಯಮ ಪಾಲನೆಯಾಗುತ್ತಿಲ್ಲ ಎಂದು ವರದಿ ಉಲ್ಲೇಖೀಸಿದೆ.

ಸಂಪೂರ್ಣ ಲಾಕ್‌ಡೌನ್‌ ಆಗಿಲ್ಲ
ಕಳೆದ ವಾರ, ಕತಾರ್‌ ಅಧಿಕಾರಿಗಳು ಸಾಮೂಹಿಕ ಸಮಾರಂಭಗಳ ಆಯೋಜನೆ, ಜಿಮ್‌ಗಳು, ಚಿತ್ರಮಂದಿರಗಳು, ಶಾಪಿಂಗ್‌ ಮಾಲ್‌ಗ‌ಳು ಮತ್ತು ಬ್ಯಾಂಕ್‌ಗಳ ಕಾರ್ಯಾಚರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಆದೇಶಿಸಿದ್ದರು. ಆದರೆ ಕಟ್ಟದ ನಿರ್ಮಾಣ ಕಾರ್ಮಿಕರಿಗೆ ಮತ್ತು ಖಾಸಗಿ ವಲಯದ ಇತರ ಕೆಲಸಗಾರರಿಗೆ, ಕಾರ್ಮಿಕರಿಗೆ ಈ ನಿಯಮ ಅನ್ವಯಿಸದು ಎಂದು ತಿಳಿಸಿದರು. ಸೀಮಿತ ನಿಯಮಗಳ ಅನ್ವಯ ಸಾರ್ವ ಜನಿಕ ಉದ್ಯಾನವ ನಗಳಲ್ಲಿ, ಕಡಲತೀರಗಳು ಮತ್ತು ಸಾಮಾಜಿಕ ಕೂಟಗಳನ್ನು ನಡೆಸಬಹುದೂ ಎಂದು ಹೇಳಿದೆ. ಹಾಗಾಗಿ ಪೂರ್ಣ ಲಾಕ್‌ಡೌನ್‌ ಪಾಲಿಸುತ್ತಿಲ್ಲ.

ನಾವು ಬದುಕುವುದು ಇಷ್ಟವಿಲ್ಲವೇ ?
ಸಾರ್ವಜನಿಕ ಸ್ಥಳಗಳು ಮತ್ತು ಕೂಟಗಳಲ್ಲಿ ಸಾಮೂಹಿಕವಾಗಿ ಸೇರಬೇಡಿ ಎಂಬ ಆದೇಶ ಹೊರಡಿಸಿದ ಸುದ್ದಿಯನ್ನು ಸರಕಾರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಅಲ್ಲಿನ ಕಟ್ಟಡ ಕಾರ್ಮಿಕ ಓರ್ವರು “ಕಟ್ಟಡ ನಿರ್ಮಾಣ ಕಾರ್ಮಿಕರು ಹೇಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ? ನಮ್ಮ ಸುರಕ್ಷತೆಯ ಬಗ್ಗೆ ಯಾರೂ ಏಕೆ ಕಾಳಜಿ ವಹಿಸುವುದಿಲ್ಲ ? ನಾವು ಬದುಕುವುದು ಇಷ್ಟವಿಲ್ಲವೇ? ನಮ್ಮ ಕುಟುಂಬಗಳನ್ನು ತೊರೆದು ಜೀವದ ಆಸೆಬಿಟ್ಟು ಕೆಲಸಕ್ಕೆ ಬರಬೇಕೇ ? ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದೇ ವಿಷಯವಾಗಿ 2022ರ ಕ್ರೀಡಾಂಗಣ ಕಟ್ಟಡ ನಿರ್ಮಾಣ  ಕೆಲಸದಲ್ಲಿ ತೊಡಗಿರುವ ಕೀನ್ಯಾದ ವಲಸೆ ಕಾರ್ಮಿಕರೂ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, “ಪ್ರತಿದಿನ ಸೋಂಕಿನ ಭಯದಿಂದಲೇ ಮನೆಯಿಂದ ಹೊರಬೀಳುವ ನಮಗೆ ಕೆಲಸ ಮಾಡುವಾಗಲು ಅದೇ ಭಯ.

ನಮ್ಮಂಥ ಬಡ ಕಾರ್ಮಿಕರು ದಿನ ದುಡಿದೇ ತಿನ್ನಬೇಕು. ಅದಕ್ಕೆ ಆದಾಯಬೇಕು. ಅನಿವಾರ್ಯವಾಗಿ ಮತ್ತು ಒತ್ತಡದಿಂದ ಕೆಲಸಕ್ಕೆ ಬರುತ್ತಿದ್ದೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.