ಬಜೆಟ್ 2020 ಕಿರು ವಿಮರ್ಶೆ: ರೇಲ್ವೇ ವೆಚ್ಚ ಕಡಿತ, ಮೂಲ ಸೌಕರ್ಯಕ್ಕೆ ಒತ್ತು


Team Udayavani, Feb 1, 2020, 3:34 PM IST

railway

ಹೊಸದಿಲ್ಲಿ; ಈ ಬಾರಿಯ ಕೇಂದ್ರ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಸಂಸತ್ತಿನಲ್ಲಿ ಮಂಡಿಸಿದ್ದು, ಹಲವು ರೈಲ್ವೇ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಮೂಲಸೌಕರ್ಯ ಸುಧಾರಣೆ, ಇಂಧನ ಮಿತವ್ಯಯ, ಪ್ರಯಾಣಿಕರ ಅನುಕೂಲ ಇತ್ಯಾದಿಗಳಿಗೆ ಆದ್ಯತೆ ನೀಡಲಾಗಿದೆ. ರೈಲ್ವೇ ಸಹಿತ ಮೂಲಸೌಕರ್ಯಗಳ ಅಭಿವೃದ್ಧಿಗೆ 1.7 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಕಿಸಾನ್‌ ರೈಲುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಒಟ್ಟು 150 ರೈಲುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಓಡಿಸಲು ಹಾಗೂ ನಾಲ್ಕು ರೈಲು ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಪುನರುಜ್ಜೀವನಗೊಳಿಸುವ ಯೋಜನೆಯನ್ನೂ ಘೋಷಿಸಲಾಗಿದೆ. ರೈಲು ನಿಲ್ದಾಣಗಳ ಆಧುನೀಕರಣಕ್ಕೂ ಯೋಜನೆ ರೂಪಿಸಲಾಗಿದೆ.

ಮುಂಬಯಿ- ಅಹಮದಾಬಾದ್‌ ನಡುವೆ ಹೈಸ್ಪೀಡ್‌ ರೈಲು ಯೋಜನೆಗೆ ವೇಗ ಲಭಿಸಲಿದೆ. ಸುಮಾರು 550 ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಒದಗಿಸಲಾಗಿದೆ. ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.

ರೈಲ್ವೇ ಇಲಾಖೆಯ ಅಧೀನದಲ್ಲಿ ಹಳಿಗಳ ಪಕ್ಕದಲ್ಲಿರುವ ಜಾಗದಲ್ಲಿ ಸೌರಶಕ್ತಿ ಉತ್ಪಾದನ ಘಟಕಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ದೇಶದಲ್ಲಿ 1.25 ಲಕ್ಷ ಕಿ.ಮೀ. ಉದ್ದದ ರೈಲು ಜಾಲವಿದೆ. ದಿನಕ್ಕೆ 20,849 ಸಂಚಾರಗಳನ್ನು ಕೈಗೊಳ್ಳುತ್ತಿದ್ದು, ಸರಾಸರಿ 2.3 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. 30 ಲಕ್ಷ ಟನ್‌ ಸರಕು ಸಾಗಿಸುತ್ತಿದೆ. 10,773 ಲೋಕೋ ಮೋಟಿವ್‌ ರೈಲುಗಳಿದ್ದು, 53,046 ಕೋಚ್‌ ಗಳನ್ನು ಹೊಂದಿದೆ. ಸರಕು ಸಾಗಾಟದ ವ್ಯಾಗನ್‌ಗಳ ಒಟ್ಟು ಸಂಖ್ಯೆ 2.45 ಲಕ್ಷ. ಇದು ಜಗತ್ತಿನಲ್ಲಿಯೇ ಬೃಹತ್ತಾದ ಸಂಚಾರ ವ್ಯವಸ್ಥೆ. ಹಳಿಗಳ ಪಕ್ಕದಲ್ಲಿ ಇಲಾಖೆಗೆ ಸೇರಿದ ಸಾಕಷ್ಟು ಜಾಗವೂ ಇದೆ. ಇದನ್ನು ಬಳಸಿಕೊಂಡು ಸೌರಶಕ್ತಿ ಉತ್ಪಾದಿಸುವ ಗುರಿ ಹೊಂದಲಾಗಿದೆ. ಇಂಧನ ಮಿತವ್ಯಯ ಸಾಧಿಸುವ ಜತೆಗೆ ಸ್ವಾವಲಂಬನೆಗೂ ಇದು ಸಹಕಾರಿಯಾಗಲಿದೆ. ಪರಿಸರಕ್ಕೂ ಪೂರಕ ಯೋಜನೆ.

ಇದರ ಜತೆಗೆ 27,000 ಕಿ.ಮೀ. ರೈಲು ಹಳಿಗಳ ವಿದ್ಯುದೀಕರಣಕ್ಕೂ ಸರಕಾರ ಯೋಜನೆ ರೂಪಿಸಿದೆ. ಭವಿಷ್ಯದಲ್ಲಿ ವಿದ್ಯುತ್‌ ಚಾಲಿತ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ಇದು ಪೂರಕ ಯೋಜನೆ. ಈ ಮೂಲಕ ಇಂಧನ ಮಿತವ್ಯಯ ಸಾಧಿಸುವ ಯೋಜನೆಯೂ ನಿರ್ಮಲಾ ಅವರ ಬಜೆಟ್‌ನಲ್ಲಿದೆ.

2030ರ ಸುಮಾರಿಗೆ ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಶೂನ್ಯಕ್ಕಿಳಿಸುವ ಗುರಿಯನ್ನು ರೈಲ್ವೇ ಇಲಾಖೆ ಹೊಂದಿದೆ. ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ತನ್ನ ಒಟ್ಟು ಆವಶ್ಯಕತೆಯ ಶೇ. 10ರಷ್ಟು ಇಂಧನ ಉತ್ಪಾದಿಸಲು ಇಲಾಖೆ ಹೆಜ್ಜೆ ಇರಿಸಿದೆ.

ಪ್ರವಾಸಿ ತಾಣಗಳ ಸಂಪರ್ಕಕ್ಕೆ ಇನ್ನಷ್ಟು ತೇಜಸ್‌ ರೈಲುಗಳ ಅನುಷ್ಠಾನ ಮಾಡುವ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ದಿಲ್ಲಿ- ಮುಂಬಯಿ ನಡುವಿನ ಎಕ್ಸ್‌ಪ್ರೆಸ್‌ ವೇ 2023ರ ಒಳಗೆ ಪೂರ್ಣಗೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಸುಮಾರು 18,600 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳ್ಳುವ 148 ಕಿ.ಮೀ. ಉದ್ದದ ಬೆಂಗಳೂರಿನ ಸಬ್‌ ಅರ್ಬನ್‌ ರೈಲು ಯೋಜನೆಗೆ ಶೇ. 60ರಷ್ಟು ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

ಮಾನವ ರಹಿತ ಲೆವೆಲ್‌ ಕ್ರಾಸಿಂಗ್‌ಗಳನ್ನು ಸರಕಾರ ಇಲ್ಲವಾಗಿಸುತ್ತಿದ್ದು, ಸುರಕ್ಷಿತ ಸಂಚಾರಕ್ಕೆ ಪೂರಕವಾಗಿ ಹಲವು ಉಪಕ್ರಮಗಳನ್ನೂ ಕೈಗೊಳ್ಳುತ್ತಿದೆ.

*ಅನಂತ್ ಹುದೆಂಗಜೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

House-Programme

Budget: ಅಪೂರ್ಣ ವಸತಿ ಯೋಜನೆ ಪೂರ್ಣಕ್ಕೆ ಮುಂದು, ಮಧ್ಯಮ ವರ್ಗದವರಿಗೆ ಸ್ವಾಮಿಹ್‌ ನಿಧಿ- 2

Street-vendors

Union Budget: ಬೀದಿ ವ್ಯಾಪಾರಿಗಳಿಗೆ 30 ಸಾವಿರ ಕ್ರೆಡಿಟ್‌ ಕಾರ್ಡ್‌ ಸಾಲ

Urban-Nirmala

Union Budget: ನಗರಾಭಿವೃದ್ಧಿ ಸವಾಲು ಮೆಟ್ಟಿ ನಿಲ್ಲಲು 1 ಲಕ್ಷ ಕೋಟಿ ರೂ. ಹೂಡಿಕೆ ನಿಧಿ

1-bndd

Union Budget; ಮಧ್ಯಮ ವರ್ಗಕ್ಕೆ ಕುಂಭಮೇಳ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.