Railway Track: ಸುರಕ್ಷೆ, ತ್ವರಿತ ಕಾರ್ಯಕ್ಕೆ ಆದ್ಯತೆ: ಶ್ರೀವಾಸ್ತವ

ದೋಣಿಗಾಲ್‌ ಭೂಕುಸಿತ ಸ್ಥಳಕ್ಕೆ ನೈಋತ್ಯ ರೈಲ್ವೇ ಮಹಾಪ್ರಬಂಧಕರ ಭೇಟಿ

Team Udayavani, Jul 30, 2024, 7:10 AM IST

Railway-Track

ಮಂಗಳೂರು: ಕಡಗರವಳ್ಳಿ ಹಾಗೂ ಎಡಕುಮೇರಿ ಮಧ್ಯೆ ರೈಲು ಮಾರ್ಗದಲ್ಲಿ ಆಗಿರುವ ಭೂಕುಸಿತ, ಅಲ್ಲಿನಡೆಯುತ್ತಿರುವ ದುರಸ್ತಿ ಕೆಲಸಗಳ ಪರಿಶೀಲನೆಗೆ ವಿಶೇಷ ಪರಿಶೀಲನಾ ರೈಲಿನಲ್ಲಿ ನೈಋತ್ಯ ರೈಲ್ವೇ ಮಹಾಪ್ರಬಂಧಕರು ಸೋಮವಾರ ಆಗಮಿಸಿದ್ದಾರೆ.

ಆಗಬೇಕಾದ ಕೆಲಸಗಳನ್ನು ಮನಗಂಡು, ಅಗತ್ಯವಿರುವ ತಾಂತ್ರಿಕ ಸಲಹೆ ನೀಡುವುದಕ್ಕಾಗಿ ಮಹಾಪ್ರಬಂಧಕ ಅರವಿಂದ ಶ್ರೀವಾಸ್ತವ ಅವರು ಈ ರೈಲಿನಲ್ಲಿ ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳ ಪರಿಶೀಲಿಸಿ, ಭೂಕುಸಿತ ಪ್ರದೇಶದಲ್ಲಿ ಸುಧಾರಣ ಕೆಲಸಗಳ ಪ್ರಗತಿ ವೀಕ್ಷಿಸಿ, ದುರಸ್ತಿ ಕೆಲಸದಲ್ಲಿ ಆಗಬೇಕಿರುವ ಸುರಕ್ಷಾ ಕ್ರಮಗಳನ್ನು ಸೂಚಿಸಿದರು.
ಈ ವೇಳೆ ಮಾತನಾಡಿದ ಶ್ರೀವಾಸ್ತವ, ಸುರಕ್ಷೆ, ತ್ವರಿತವಾದ ದುರಸ್ತಿ ಕಾರ್ಯಗಳು ನಮ್ಮ ಆದ್ಯತೆ, ಇದರಲ್ಲಿ ಉನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸುರಿಯುವ ನಡುವೆ ನಿರಂತರವಾಗಿ ದುರಸ್ತಿ ಕಾರ್ಯಗಳು ನಡೆಯುತ್ತಿವೆ. ಸುಮಾರು 50 ಅಡಿ ಭೂಕುಸಿತವಾದ ಹಿನ್ನೆಲೆಯಲ್ಲಿ ತಳದಿಂದಲೇ ಮರಳುಚೀಲ, ಬಂಡೆಗಳ ನ್ನಿರಿಸಿ ಜಾರದಂತೆ ಗೇಬಿಯನ್‌ ಮೆಷ್‌ನೊಂದಿಗೆ ದುರಸ್ತಿ ನಡೆಸಲಾಗುತ್ತಿದೆ.

ಈ ರೀತಿಯ ಸನ್ನಿವೇಶಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಮೂರು ಕನ್ಸಲ್ಟೆನ್ಸಿಗಳ ಅಭಿಪ್ರಾಯ ವನ್ನೂ ಕೇಳಲಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆಯ ಪರಿಸ್ಥಿತಿ ತುಸು ಸುಧಾರಿಸಿದ್ದು, ಕಾಮಗಾರಿ ವೇಗ ಪಡೆದಿದೆ. ಇನ್ನು ಎರಡು-ಮೂರು ದಿನಗಳಲ್ಲಿ ಹಳಿ ರೈಲು ಸಂಚಾರಕ್ಕೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

2 ವಿಶೇಷ ರೈಲು
ಈ ನಡುವೆ ರೈಲು ಪ್ರಯಾಣಿಕರ ದಟ್ಟಣೆ ಹಗುರಗೊಳಿಸಲು ಮಡ ಗಾಂವ್‌- ಬೆಂಗಳೂರು ಮಧ್ಯೆ ಹಾಗೂ ಕಾರವಾರ ಬೆಂಗಳೂರು ಮಧ್ಯೆ ಮಂಗಳೂರು-ಶೋರನೂರು ದಾರಿಯಾಗಿ ಎರಡು ರೈಲುಗಳನ್ನು ಓಡಿಸಲಾಗುತ್ತಿದೆ.

ನಂ.01696 ಮಡಗಾಂವ್‌ ಜಂಕ್ಷನ್‌ ಕೆಎಸ್‌ಆರ್‌ ಬೆಂಗಳೂರು ಏಕಮುಖ ರೈಲು ಮಡಗಾಂವ್‌ನಿಂದ ಜು.30ರಂದು ಸಂಜೆ 4.30ಕ್ಕೆ ಹೊರಟು ಮರುದಿನ ಸಂಜೆ 3.30ಕ್ಕೆ ಬೆಂಗಳೂರು ತಲುಪಲಿದೆ. ಇದಕ್ಕೆ ಕಾನಕೋನ, ಕಾರವಾರ, ಅಂಕೋಲ, ಗೋಕರ್ಣರೋಡ್‌, ಕುಮಟ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್‌ ಬೈಂದೂರು, ಕುಂದಾಪುರ, ಬಾಕೂìರು, ಉಡುಪಿ, ಮೂಲ್ಕಿ, ಸುರತ್ಕಲ್‌, ಮಂಗಳೂರು ಜಂಕ್ಷನ್‌, ಕಾಸರಗೋಡು, ಕಣ್ಣೂರಿನಲ್ಲಿ ನಿಲುಗಡೆ ಇರುತ್ತದೆ.

ನಂ.01656 ಕಾರವಾರ ಯಶವಂತಪುರ ಏಕಮುಖ ರೈಲು ಜು.31ರಂದು ಕಾರವಾರದಿಂದ ಬೆಳಗ್ಗೆ 5.30ಕ್ಕೆ ಹೊರಟು ಮರುದಿನ ಮುಂಜಾನೆ 2.15ಕ್ಕೆ ಯಶವಂತಪುರ ತಲುಪಲಿದೆ. ಅಂಕೋಲ, ಗೋಕರ್ಣರೋಡ್‌, ಕುಮಟ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್‌ ಬೈಂದೂರು, ಕುಂದಾಪುರ, ಬಾರ್ಕೂರು, ಉಡುಪಿ, ಮೂಲ್ಕಿ, ಸುರತ್ಕಲ್‌, ಮಂಗಳೂರು ಜಂಕ್ಷನ್‌, ಕಾಸರಗೋಡು, ಕಣ್ಣೂರು ಸಹಿತ ನಿಲುಗಡೆ ಇರುತ್ತದೆ. ಈ ರೈಲಿನಲ್ಲಿ 2 ವಿಸ್ತಾಡೋಮ್‌ ಕೋಚ್‌ಗಳೂ ಇರಲಿವೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.