Rain Alert: ದಕ್ಷಿಣ ಕನ್ನಡ ಸೇರಿ 10 ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ
ಹವಾಮಾನ ಇಲಾಖೆಯಿಂದ 10 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ
Team Udayavani, Sep 4, 2024, 9:28 PM IST
ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರವೂ (ಸೆ.05) ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ.ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
#ಮಳೆ #ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ತುಂತುರು ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. #ಮುಂಗಾರುಮಳೆ @KarnatakaVarthe pic.twitter.com/NLQJ2ljGY6
— Karnataka State Natural Disaster Monitoring Centre (@KarnatakaSNDMC) September 4, 2024
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀವರೆಗೆ ಇರಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್ ಮಾನವ ಸರಪಳಿ
CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ
U.T. Khader; ಭಾರತದಲ್ಲಿ ಸಮಸ್ಯೆ ಆಧಾರಿತ ಚರ್ಚೆಗಳಾಗಲಿ
Yadagiri ಶಾಸಕರನ್ನೇಕೆ ಇನ್ನೂ ಬಂಧಿಸಿಲ್ಲ ? ಎನ್. ರವಿಕುಮಾರ್
CM ಸಿದ್ದರಾಮಯ್ಯ ಅವರಿದ್ದ ವೇದಿಕೆಗೆ ನುಗ್ಗಿದ ಯುವಕ:ಎಳೆದೊಯ್ದ ಭದ್ರತಾ ಸಿಬಂದಿ
MUST WATCH
ಹೊಸ ಸೇರ್ಪಡೆ
Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ
India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್
J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.