Rain: ಸುಳ್ಯ, ಪುತ್ತೂರಿನಲ್ಲಿ ಉತ್ತಮ ಮಳೆ; ಇತರೆಡೆ ತುಸು ಕಡಿಮೆ

ಕರಾವಳಿಗೆ ಶನಿವಾರ, ರವಿವಾರ ಆರೆಂಜ್‌ ಅಲರ್ಟ್‌ ಘೋಷಣೆ

Team Udayavani, Aug 3, 2024, 12:41 AM IST

Putturu

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ- ಪುತ್ತೂರು ತಾಲೂಕಿನಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದ್ದು, ಉಳಿದಂತೆ ಇತರೆಡೆಗಳಲ್ಲಿ ಮಳೆಯ ತುಸು ಪ್ರಮಾಣ ಕಡಿಮೆಯಾಗಿದೆ. ಸುಳ್ಯ ಪುತ್ತೂರಿನಲ್ಲಿ ಮುಂಜಾನೆಯಿಂದಲೇ ನಿರಂತರ ಮಳೆ ಸುರಿದಿದೆ ಹಲವೆಡೆ ಭೂ ಕುಸಿತಗಳು ಸಂಭವಿಸಿವೆ.

ಮಂಗಳೂರಿನಲ್ಲಿ ಕಡಿಮೆ
ಮಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ಹೊತ್ತೇ ರುತ್ತಿದ್ದಂತೆ ಮಳೆ ತೀವ್ರತೆ ಕಡಿಮೆ ಯಾಗಿತ್ತು. ಮಳೆಯಬ್ಬರಕ್ಕೆ ಉಕ್ಕೇರಿದ್ದ ಘಲ್ಗುಣಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ನೆರೆ ಬಾಧಿತ ಪ್ರದೇಶದಲ್ಲಿಯೂ ನೀರು ಇಳಿದಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರಿನ ಬಡಿಲದಲ್ಲಿ ಮಮ್ತಾಜ್‌ ಅವರ ಮನೆ ಸಂಪೂರ್ಣ ಕುಸಿದಿದೆ.

ಆರೆಂಜ್‌ ಅಲರ್ಟ್‌
ಕರಾವಳಿಗೆ ಶನಿವಾರ ಮತ್ತು ರವಿವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ವಾತಾವರಣ ಯಥಾಸ್ಥಿತಿ ಇರುವ ಸಾಧ್ಯತೆ ಇದೆ. ಸದ್ಯದ ಪ್ರಕಾರ ಸೋಮವಾರದಿಂದ ಎಲ್ಲೋ ಅಲರ್ಟ್‌ ಇದೆ. ದ.ಕ. ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

118.9 ಮಿ.ಮೀ. ಮಳೆ
ಶುಕ್ರವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆಯಲ್ಲಿ ದ.ಕ ಜಿಲ್ಲೆಯಲ್ಲಿ ಸರಾಸರಿ 118.9 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 89.3 ಮಿ.ಮೀ., ಬಂಟ್ವಾಳ 125 ಮಿ.ಮೀ., ಮಂಗಳೂರು 97.6., ಪುತ್ತೂರು 146.6, ಸುಳ್ಯ 138.4, ಮೂಡುಬಿದಿರೆ 124.6, ಕಡಬ 144.4, ಮೂಲ್ಕಿ 94.5 ಹಾಗೂ ಉಳ್ಳಾಲದಲ್ಲಿ 123.7 ಮಿ.ಮೀ. ಮಳೆಯಾಗಿದೆ.

ಮಳೆ ಹಾನಿ
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಒಟ್ಟು ಕೂಳೂರು ಮತ್ತು ಸುಬ್ರಹ್ಮಣ್ಯದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಹಲವು ಮಂದಿಗೆ ಆಶ್ರಯ ನೀಡಲಾಗಿದೆ. 96 ವಿದ್ಯುತ್‌ ಕಂಬಗಳು, 4.80 ಕಿ.ಮೀ.ನಷ್ಟು ವಿದ್ಯುತ್‌ ತಂತಿಗೆ ಹಾನಿಯಾಗಿದೆ. 6 ಕಿ.ಮೀ.ನಷ್ಟು ಮುಖ್ಯ ಜಿಲ್ಲಾ ರಸ್ತೆ, 6.97 ಕಿ.ಮೀ. ನಷ್ಟು ರಾಜ್ಯ ಹೆದ್ದಾರಿಗೆ ಹಾನಿಯಾಗಿದೆ. ಪಂಚಾಯತ್‌ರಾಜ್‌ ವಿಭಾಗಕ್ಕೆ ಸಂಬಂಧಿಸಿ 11 ಮೋರಿಗಳು, 43 ಕಿ.ಮೀ. ರಸ್ತೆಗಳು ಹಾನಿಗೀಡಾಗಿವೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

ಶಿರ್ತಾಡಿಯಲ್ಲಿ ಮನೆಗೆ ಹಾನಿ
ಮೂಡುಬಿದಿರೆ: ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ರಾತ್ರಿ 2 ಗಂಟೆ ಸುಮಾರಿಗೆ ಶಿರ್ತಾಡಿ ಗ್ರಾಮದ ದಡ್ಡಲ್‌ಪಲ್ಕೆ ವಿಕ್ರಮ್‌ ಆಚಾರ್ಯ ಅವರ ಮನೆಯ ಹಿಂಭಾಗ, ದೇವರ ಕೋಣೆ ಕುಸಿದು ಬಿದ್ದು ಅಪಾರ ನಷ್ಟವುಂಟಾಗಿದೆ. ವಿಕ್ರಮ ಆಚಾರ್ಯ, ತಾಯಿ, ಪತ್ನಿ ಮತ್ತು ಮಕ್ಕಳೊಂದಿಗೆ ಮಲಗಿದ್ದಾಗ ಈ ಘಟನೆ ನಡೆದಿದ್ದು ಮನೆಯೊಳಗಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಕೂಳೂರು ಸೇತುವೆ ದಾಟಲು ಅರ್ಧ ತಾಸು!
ಪಣಂಬೂರು: ರಸ್ತೆ ಹೊಂಡ ಕಾರಣದಿಂದ ಕೂಳೂರು ಸೇತುವೆ ಭಾಗದಲ್ಲಿ ವಾಹನಗಳು ತೀವ್ರ ಪರದಾಡುವಂತಾಗಿದ್ದು, ಶುಕ್ರವಾರ ಭಾರೀ ಉದ್ದದ ವಾಹನಗಳ ಸಾಲು ಕಂಡು ಬಂದಿದೆ. ಶುಕ್ರವಾರ ಒಂದು ಕಿ.ಮೀ. ವಾಹನ ಸಾಲು ಕಂಡು ಬಂದ ಹಿನ್ನೆಲೆಯಲ್ಲಿ ಎರಡೂ ಸೇತುವೆಯಲ್ಲಿ ಮಂಗಳೂರು ಕಡೆ ಸಾಗಲು ಸಂಚಾರ ಪೊಲೀಸರು ಅವಕಾಶ ನೀಡಿದರು. ಈ ಭಾಗದಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು, ವಾಹನಗಳು ತೆವಳಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಆದಷ್ಟು ಬೇಗ ಇಲ್ಲಿನ ರಸ್ತೆಯನ್ನು ಸುಸ್ಥಿತಿಗೆ ತರಬೇಕು ಎಂದು ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.

ಉಡುಪಿಯಲ್ಲಿ ಉತ್ತಮ ಮಳೆ
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಉತ್ತಮ ಮಳೆ ಸುರಿದಿದೆ. ಕಾರ್ಕಳದಲ್ಲಿ 99.6, ಕುಂದಾಪುರ 120.3, ಉಡುಪಿ 117.1, ಬೈಂದೂರು 127.2, ಬ್ರಹ್ಮಾವರ 117.5, ಕಾಪು 115.9, ಹೆಬ್ರಿ 118.3 ಮಿ.ಮೀ.ಮಳೆಯಾಗಿದೆ. ಬೆಳಗ್ಗಿನಿಂದಲೇ ಉತ್ತಮವಾಗಿ ಮಳೆ ಸುರಿಯುತ್ತಿತ್ತು. ಮಧ್ಯಾಹ್ನದ ಬಳಿಕ ಮಳೆ ಬಿಡುವು ನೀಡಿತಾದರೂ ಸಂಜೆಯ ವೇಳೆಗೆ ಮತ್ತೆ ಮಳೆ ಸುರಿಯಿತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.