Ram Temple: ಶ್ರೀರಾಮ ಪ್ರಾಣಪ್ರತಿಷ್ಠೆಗೆ ಕನ್ನಡ ನಾಡಿನ ಪುರೋಹಿತ

ಕರ್ನಾಟಕದಿಂದ ಆಯ್ಕೆಯಾದ ಏಕೈಕ ಪುರೋಹಿತರು

Team Udayavani, Jan 19, 2024, 11:31 AM IST

Ram Temple: ಶ್ರೀರಾಮ ಪ್ರಾಣಪ್ರತಿಷ್ಠೆಗೆ ಕನ್ನಡ ನಾಡಿನ ಪುರೋಹಿತ

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆ ಪ್ರಕ್ರಿಯೆ ಯಲ್ಲಿ ಭಾಗಿಯಾಗಲು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರೊಬ್ಬರು ಆಯ್ಕೆಯಾಗಿದ್ದಾರೆ.

ಜಾಲ್ಸೂರು ಗ್ರಾಮದ ಕೆಮನಬಳ್ಳಿ ಮೂಲದ ಪ್ರಸ್ತುತ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ| ಕೆ. ಗಣಪತಿ ಭಟ್‌ ಈ ಅಪೂರ್ವ ಅವಕಾಶ ಪಡೆದುಕೊಂಡವರು.

101 ಮಂದಿಯಲ್ಲಿ ಓರ್ವ ಕನ್ನಡಿಗ ಲಭ್ಯ ಮಾಹಿತಿ ಪ್ರಕಾರ ರಾಮಲಲ್ಲಾನ ವಿಗ್ರಹ ಪ್ರತಿಷ್ಠೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ನೇಮಕವಾಗಿರುವ 101 ಮಂದಿ ಪ್ರಧಾನ ಪುರೋಹಿತರಲ್ಲಿ ಗಣಪತಿ ಭಟ್‌ ಒಬ್ಬರು. ಅವರ ನೇತೃತ್ವದ ತಂಡದಲ್ಲಿ 40 ಮಂದಿ ಆರ್ಚಕರು ಇರಲಿದ್ದಾರೆ. ಅವರು ಕರ್ನಾಟಕದಿಂದ ಆಯ್ಕೆಯಾದ ಏಕೈಕ ಪುರೋಹಿತರು.

ಸ್ಥಳೀಯವಾಗಿ ಆರಂಭಿಕ ಶಿಕ್ಷಣವನ್ನು ಪೂರೈಸಿ 1978ರಲ್ಲಿ ಕಂಚಿ ಕಾಮಕೋಟಿ ವಿದ್ಯಾಪೀಠದಲ್ಲಿ ಋಗ್ವೇದದಲ್ಲಿ ಪದವಿ ಶಿಕ್ಷಣ
ವನ್ನು ಪಡೆದರು. ಬಳಿಕ ಮಂತ್ರಾಲಯ ಶ್ರೀ ರಾಘವೇಂದ್ರ ಮಠದಲ್ಲಿ ಶಾಸ್ತ್ರ ಆಧ್ಯಯನ ವಿಷಯದಲ್ಲಿ ಎಂ.ಎ., ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯಲ್ಲಿ ಪಿಎಚ್‌ಡಿ ಪಡೆದರು. ಮದ್ರಾಸ್‌ ವಿ.ವಿ.ಯಲ್ಲಿ ಸಂಸ್ಕತ ವೇದಾಂತ ಮತ್ತು ನ್ಯಾಯಶಾಸ್ತ್ರ ವಿಷಯದಲ್ಲಿ ಮತ್ತೊಂದು ಎಂಎ ಪದವಿ ಪೂರೈಸಿದ್ದಾರೆ.

ಕಾಲಡಿಯ ಶಂಕರಾಚಾರ್ಯ ವಿ.ವಿ.ಯಲ್ಲಿ 8 ವರ್ಷ ಉಪನ್ಯಾಸಕರಾಗಿ, ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯಲ್ಲಿ ಪ್ರೊಫೆಸರ್‌, ಪರೀಕ್ಷಾಂಗ ಕುಲಸಚಿವ, ಪ್ರಸ್ತುತ ಗುರುಕುಲದ ನಿರ್ದೇಶಕರಾಗಿದ್ದಾರೆ. ಕೇರಳದ ಎಲ್ಲ ವಿಶ್ವ ವಿದ್ಯಾನಿಲಯಗಳ ಪರೀಕ್ಷಾಧಿಕಾರಿಯಾಗಿ, ದೇಶದ ವಿವಿಧ 18 ವಿ.ವಿ.ಗಳ ಪಿಎಚ್‌.ಡಿ ಮೌಲ್ಯಮಾಪಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಾಶಿಯ ವಿದ್ವಾಂಸರಾದ ಗಣೇಶ್ವರ ಶಾಸ್ತ್ರೀ ಮತ್ತು ಲಕ್ಷ್ಮೀಕಾಂತ ದೀಕ್ಷಿತರ ಮೂಲಕ ರಾಮ ಜನ್ಮಭೂಮಿಗೆ ಕಾಲಿರಿಸುವ ಅವಕಾಶ ಲಭಿಸಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಧಾರ್ಮಿಕ ವಿಧಿ ನೆರವೇರಿಸಲು ಅವಕಾಶ ಸಿಕ್ಕಿರುವುದು ನನ್ನ ಬದುಕಿನ ಪವಿತ್ರ ಕ್ಷಣ.
●ಡಾ| ಕೆ. ಗಣಪತಿ ಭಟ್‌

*ದಯಾನಂದ ಕಲ್ನಾರು

ಸೀತೆಯ ತವರಿನಲ್ಲಿ ಸಡಗರ ಆರಂಭ
ಕಠ್ಮಂಡು: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಭಾರತ ಮಾತ್ರವಲ್ಲದೇ, ನೆರೆಯ ನೇಪಾಲವೂ ಕಾತರದಿಂದ ಕಾಯುತ್ತಿದ್ದು, ಸಂಭ್ರಮ ಆಚರಿಸಲು ನೇಪಾಲಿಗರು ಸಜ್ಜುಗೊಂಡಿದ್ದಾರೆ. ನೇಪಾಲದ ಜನಕಪುರ ಸೀತಾದೇವಿಯ ತವರು ಎಂಬ ಪ್ರತೀತಿ ಹೊಂದಿರುವ ಹಿನ್ನೆಲೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ನೇಪಾಲದ ಹಿಂದೂಗಳು ಸಂಭ್ರಮಿಸುತ್ತಿದ್ದಾರೆ.

ವಿಶೇಷವಾಗಿ ಹಿಂದೂಗಳು ಹೆಚ್ಚಿರುವ ಮಾಧೇಶ ಪ್ರಾಂತ್ಯದಲ್ಲಿ ಹಬ್ಬದ ಕಳೆ ಶುರುವಾಗಿದ್ದು ಪ್ರಾಂತದಲ್ಲಿರುವ ರಸ್ತೆಗಳನ್ನೆಲ್ಲ ದೀಪಗಳು, ಫ್ಲೆಕ್ಸ್‌ಗಳನ್ನು ಅಳವಡಿಸಿ ಅಲಂಕರಿಸಲಾಗುತ್ತಿದೆ. ಈಗಾಗಲೇ ಅಯೋಧ್ಯೆಗೆ ನೇಪಾಲದಿಂದ ವಸ್ತ್ರ, ಒಡವೆ ಸೇರಿದಂತೆ ಹಲವು ಉಡುಗೊರೆಗಳನ್ನೂ ಕಳುಹಿಸಿಕೊಡಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.