Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

5.75 ಲಕ್ಷ ಮಂದಿಯಿಂದ ಪರೀಕ್ಷೆಗೆ ಅರ್ಜಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Team Udayavani, Sep 28, 2024, 12:10 AM IST

Exam-Authotiy

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (1 ಸಾವಿರ ಹುದ್ದೆ) ಹಾಗೂ ಜಿಟಿಟಿಸಿ (98 ಹುದ್ದೆ)ಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ. 29ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಸುತ್ತಿದ್ದು ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ 5.75 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ರಾಜ್ಯದ 1,410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ. ಶುಕ್ರವಾರ ಸಂಜೆವರೆಗೆ 4.8 ಲಕ್ಷ ಮಂದಿ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಂಡಿದ್ದಾರೆ. ರವಿವಾರ ನಡೆಯುವ 150 ಅಂಕಗಳ ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅ. 27ರಂದು ನಡೆಯುವ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ. ಈ ಪರೀಕ್ಷೆಗೆ ಗೈರಾದವರು ಕೂಡ ಅರ್ಹರಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

4 ಸಾವಿರ ಮಂದಿಗೆ ಪರೀಕ್ಷೆಗೆ ವ್ಯವಸ್ಥೆ
ಜಿಟಿಟಿಸಿಯ ವಿವಿಧ ಹುದ್ದೆಗಳ ಕನ್ನಡ ಕಡ್ಡಾಯ ಪರೀಕ್ಷೆಗೆ 4 ಸಾವಿರ ಮಂದಿ ಇದ್ದು ಅಷ್ಟೂ ಮಂದಿಗೆ ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಆ ದಿನ ಬೆಂಗಳೂರಿನ 115 ಕೇಂದ್ರಗಳಲ್ಲಿ 56 ಸಾವಿರ ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದರು. ವಯೋಮಿತಿ ಸಡಿಲಿಕೆಯ ಅನುಕೂಲ ಪಡೆ
ಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ. 26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ಅನಂತರ ಅವರು ಅ. 27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸಿಇಟಿ, ನೀಟ್‌: 153 ಎಂಬಿಬಿಎಸ್‌ ಸೇರಿ ಸಾವಿರ ಸೀಟು ಹಿಂದಿರುಗಿಸಿದ ಅಭ್ಯರ್ಥಿಗಳು
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ಇತರ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ  ಪ್ರಾಧಿಕಾರ ನಡೆಸಿದ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದು ಅನಂತರ 1,006 ಮಂದಿ ಅವುಗಳನ್ನು ರದ್ದುಪಡಿಸಿ ಕೊಂಡಿದ್ದಾರೆ. ಇಷ್ಟೂ ಸೀಟುಗಳನ್ನು 3ನೇ ಅಥವಾ 2ನೇ ವಿಸ್ತರಿತ ಸುತ್ತಿನಲ್ಲಿ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಸರಕಾರಿ ಕಾಲೇಜಿನ 7 ಸೀಟು ಸೇರಿ ಒಟ್ಟು 153 ಅಭ್ಯರ್ಥಿಗಳು ತಮ್ಮ ವೈದ್ಯಕೀಯ ಸೀಟುಗಳನ್ನು ರದ್ದುಪಡಿಸಿಕೊಂಡಿದ್ದಾರೆ. ಇದರಲ್ಲಿ ಖಾಸಗಿ ಕೋಟಾದಲ್ಲಿ 112, ಮ್ಯಾನೇಜ್ಮೇಂಟ್‌ ಕೋಟಾದಲ್ಲಿ 33 ಮತ್ತು ಎನ್‌ಆರ್‌ಐ ಕೋಟಾದ ಒಂದು ಸೀಟು ಸೇರಿದೆ ಎಂದು ಅವರು ವಿವರಿಸಿದರು. ದಂತ ವೈದ್ಯಕೀಯದಲ್ಲಿ ಸರಕಾರಿ ಕೋಟಾದ 105 ಸೇರಿ 269, ಆಯುರ್ವೇದದಲ್ಲಿ ಸರಕಾರಿ ಕೋಟಾದ 184 ಸೇರಿದಂತೆ 363 ಸೀಟುಗಳನ್ನು ಅಭ್ಯರ್ಥಿಗಳು ಹಿಂದಿರುಗಿಸಿದ್ದಾರೆ.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.