Remove GST: ಜೀವನ, ವೈದ್ಯಕೀಯ ವಿಮೆಗಳ ಮೇಲಿನ ಶೇ.18 ಜಿಎಸ್ಟಿ ತೆಗೆದು ಹಾಕಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದು ಕೇಂದ್ರ ಸಚಿವ ನಿತಿನ್ ಗಡ್ಕರಿ ಒತ್ತಾಯ
Team Udayavani, Jul 31, 2024, 7:51 PM IST
ಹೊಸದಿಲ್ಲಿ: ಜೀವನ ಮತ್ತು ವೈದ್ಯಕೀಯ ವಿಮೆಗಳಿಗೆ ಪಾವತಿಸುವ ಪ್ರೀಮಿಯಂಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (Goods and Service Tax) ಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ನಾಗ್ಪುರ ಎಲ್ಐಸಿ ಒಕ್ಕೂಟದ ಮನವಿಯ ಮೇರೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿರುವ ಗಡ್ಕರಿ, ಜೀವ ವಿಮಾ ಪ್ರೀಮಿಯಂ ಮೇಲೆ ವಿಧಿಸುವ ಶೇ. 18 ಪರೋಕ್ಷ ತೆರಿಗೆಯು ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆ ವಿಧಿಸುತ್ತದೆ ಎಂದು ಹೇಳಿದ್ದಾರೆ. ನಾಗ್ಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘ, ನಾಗ್ಪುರ, ವಿಮಾ ಉದ್ಯಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಆಲಿಸುವಾಗ ಸಚಿವರು, ವಿಮಾ ನಿಗಮದ ನೌಕರರ ಸಮಸ್ಯೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಗಡ್ಕರಿ ಅವರ ಮುಂದೆ ವಿಮಾ ನಿಗಮದ ನೌಕರರು, ಜೀವನ ಮತ್ತು ವೈದ್ಯಕೀಯ ವಿಮೆ ಮೇಲಿನ ಶೇ. 18 ಜಿಎಸ್ಟಿ (GST) ವಾಪಸ್ ಪಡೆಯುಂತೆ ಒತ್ತಾಯಿಸಿದ್ದಾರೆ. ಜೀವ ವಿಮಾ ಪ್ರೀಮಿಯಂ ಮೇಲೆ ವಿಧಿಸುವ ಮೂಲಕ ಜೀವನದ ಅನಿಶ್ಚಿತತೆಗಳ ಮೇಲೆ ತೆರಿಗೆ ವಿಧಿಸದಂತೆ ಹಾಗೂ ಅನಿಶ್ಚಿತತೆಯ ಅಪಾಯಕ್ಕೆ ಒಳಗಾಗುವ ವ್ಯಕ್ತಿಗೆ ತೆರಿಗೆ ವಿಧಿಸಬಾರದು ಎಂದು ಒಕ್ಕೂಟ ಹೇಳಿದೆ.
ಜಿಎಸ್ಟಿ ವಿಧಿಸಿದ್ದರೆ ವಿಮೆ ಮಾಡಲು ಜನರು ಮುಂದೆ ಬರುವುದಿಲ್ಲ. ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತದೆ. ಹಾಗಾಗಿ ವಿಮಾ ಮೇಲಿನ ತೆರಿಗೆ ತೆಗೆದು ಹಾಕಲು ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾರಿಗೆ ಪತ್ರ ಬರೆದಿದ್ದಾರೆ. ಭಾರತದಲ್ಲಿ ವಿಮೆ ಮತ್ತು ಪಿಂಚಣಿ ನಿಧಿ ಆಸ್ತಿಗಳ ಜಿಡಿಪಿ ಶೇ. 19 ಮತ್ತು ಶೇ. 5 ಮೇಲೆ ನಿಂತಿದೆ. ಭಾರತಕ್ಕೆ ಹೋಲಿಸಿದರೆ ಯುಎಸ್ಎನಲ್ಲಿ ಶೇ. 52 ಮತ್ತು ಶೇ. 122 ಮತ್ತು ಯುಕೆಯಲ್ಲಿ ಶೇ.112 ಮತ್ತು 80 ಇದೆ ಎಂದು ಹೇಳಿದ್ದಾರೆ.
ವಿಮೆ ಮೇಲಿನ ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿ ಮರುಪರಿಶೀಲನೆ ಮಾಡುವ ಅಗತ್ಯ ಇದೆ ಎಂದು ಕೇಂದ್ರದ ಮಾಜಿ ಹಣಕಾಸು ರಾಜ್ಯ ಸಚಿವ ಜಯಂತ್ ಸಿನ್ಹಾ ನೇತೃತ್ವದ ಸಂಸದೀಯ ಸಮಿತಿಯು ಈ ಹಿಂದೆ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.