Renukaswamy Case: ದರ್ಶನ್‌ಗೆ ಬಳ್ಳಾರಿ ‘ಹೈ ಸೆಕ್ಯುರಿಟಿ’ ಸೆಲ್‌ ಸಿದ್ಧ

ಕೋರ್ಟ್‌ ಕಲಾಪ ವೀಕ್ಷಿಸಲು ವೀಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ, ಸಿಸಿ ಕೆಮರಾ ನಿಗಾ

Team Udayavani, Aug 28, 2024, 7:00 AM IST

Darshan

ಬಳ್ಳಾರಿ: ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ನಟ ದರ್ಶನ್‌ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, “ಹೈ ಸೆಕ್ಯುರಿಟಿ’ ಸೌಲಭ್ಯವುಳ್ಳ ಸೆಲ್‌ಗ‌ಳನ್ನು ಸಿದ್ಧಗೊಳಿಸಲಾಗುತ್ತಿದೆ.

ಬಳ್ಳಾರಿ ಕೇಂದ್ರ ಕಾರಾಗೃಹ 800ರಿಂದ 1 ಸಾವಿರ ಕೈದಿಗಳ ಸಾಮರ್ಥ್ಯ ಹೊಂದಿದೆ. ಸದ್ಯ ವಿಚಾರಣಾಧೀನ, ಸಜಾಬಂದಿಗಳು ಸೇರಿ ಒಟ್ಟು 368 ಕೈದಿಗಳಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ ಪ್ರತ್ಯೇಕ 5 ಬ್ಲಾಕ್‌ಗಳಿವೆ. ಸಜಾಬಂದಿಗಳಿಗೆ 200 ಪ್ರತ್ಯೇಕ ಸೆಲ್‌ಗ‌ಳಿವೆ.

“ಹೈ ಸೆಕ್ಯುರಿಟಿ’ ಸೆಲ್‌ಗ‌ಳು ನೀರು, ಶೌಚಾಲಯ ಸೌಲಭ್ಯ ಹೊಂದಿವೆ. ಸೆಲ್‌ನಲ್ಲಿದ್ದುಕೊಂಡೇ ಕೋರ್ಟ್‌ ಕಲಾಪ ವೀಕ್ಷಿಸಲು ವೀಡಿಯೋ ಕಾನ್ಫರೆನ್ಸ್‌ ವ್ಯವಸ್ಥೆ ಇದೆ. ಸಿಸಿ ಕೆಮರಾ ಅಳವಡಿಸಿ ನಿಗಾ ವಹಿಸಲಾಗುತ್ತದೆ. ಬಳ್ಳಾರಿ ಕಾರಾಗೃಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಜಿಲ್ಲೆಗಳ ಕೈದಿಗಳೇ ಇದ್ದಾರೆ.

ಅಂದು ಚಿತ್ರೀಕರಣ; ಇಂದು ಸೆರೆವಾಸ!
2017ರಲ್ಲಿ ತೆರೆಕಂಡಿದ್ದ ದರ್ಶನ್‌ ನಟನೆಯ “ಚೌಕ’ ಚಿತ್ರವನ್ನು ಬಳ್ಳಾರಿ ಕೇಂದ್ರ ಕಾರಾಗೃಹದ ಖಾಲಿ ಸೆಲ್‌ಗ‌ಳಲ್ಲಿ ಚಿತ್ರೀಕರಿಸಲಾಗಿತ್ತು. ಅಂದು ಚಿತ್ರೀಕರಣಕ್ಕೆ ಈ ಜೈಲಿಗೆ ಬಂದಿದ್ದ ದರ್ಶನ್‌ ಈಗ ಅದೇ ಜೈಲಲ್ಲಿ ಸೆರೆವಾಸಕ್ಕೆ ಆಗಮಿಸುತ್ತಿದ್ದಾನೆ.

ಒಂದು ರಾತ್ರಿ ಕಳೆದಿದ್ದ ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪದಡಿ ಜನಾರ್ದನ ರೆಡ್ಡಿ ಆಂಧ್ರದ ಚರ್ಲಪಲ್ಲಿ ಜೈಲಲ್ಲಿದ್ದರು. ಅವರನ್ನು ವಿಚಾರಣೆಗೆ ಸಂಡೂರು ನ್ಯಾಯಾಲಯಕ್ಕೆ ಕರೆತರುವಾಗ ಬಳ್ಳಾರಿ ಜೈಲಿನಲ್ಲಿ ಒಂದು ದಿನ ರಾತ್ರಿ ಇರಿಸಲಾಗಿದ್ದು, ಮರು ದಿನ ಬೆಳಗ್ಗೆ ಸಂಡೂರಿನ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು.

ವಿಶೇಷವೆಂದರೆ ಇದಕ್ಕೂ ಒಂದು ವರ್ಷದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಜನಾರ್ದನ ರೆಡ್ಡಿ, ಇದೇ ಜೈಲಲ್ಲಿ ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸುವಂತೆ ಪ್ರತಿಭಟಿಸುತ್ತಿದ್ದ ಕೈದಿಗಳನ್ನು ಭೇಟಿ ಮಾಡಿ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Girl-harras

Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!

Yuvanidhi-meet

Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್‌

Kantabare-Kambla

Kinnigoli: ಜಾನಪದ, ಧಾರ್ಮಿಕ ಐತಿಹ್ಯದ ಐಕಳ ಕಂಬಳದಿಂದ ಊರಿಗೇ ಹಬ್ಬ: ಡಾ.ರಾಜೇಂದ್ರ ಕುಮಾರ್‌

DH-mastakabhisheka

Dharmasthala: ದಯೆ ಇದ್ದರಷ್ಟೇ ಧರ್ಮಕ್ಕೆ ಅರ್ಥ: ಕ್ಷುಲ್ಲಕ ನಿರ್ವಾಣ ಸಾಗರ ಮುನಿಮಹಾರಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

hk-patil

Micro Finance ಅಧ್ಯಾದೇಶ ಶೀಘ್ರ ರಾಜ್ಯಪಾಲರಿಗೆ: ಕಾನೂನು ಸಚಿವ ಎಚ್‌.ಕೆ. ಪಾಟೀಲ್‌

bosaraju

Micro Finance; ಕೇಂದ್ರ ಕಡಿವಾಣ ಹಾಕಬೇಕು: ಸಚಿವ ಭೋಸರಾಜು

Chaluvarayaswamy

HDK ಅನುಕಂಪ ಗಿಟ್ಟಿಸುವಲ್ಲಿ ನಂಬರ್‌ ಒನ್‌ : ಚಲುವರಾಯಸ್ವಾಮಿ ವ್ಯಂಗ್ಯ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Girl-harras

Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!

Yuvanidhi-meet

Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.