Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್ ವಿವೇಚನೆ ಬಳಸಬೇಕು
ಪ್ರದೋಷ್ ಸ್ಥಳಾಂತರ ಪ್ರಕರಣದಲ್ಲಿ ಹೈಕೋರ್ಟ್ ಅಭಿಮತ
Team Udayavani, Oct 10, 2024, 2:26 AM IST
ಬೆಂಗಳೂರು: ವಿಚಾರಣಾಧೀನ ಕೈದಿಗಳನ್ನು ಒಂದು ಜೈಲಿನಿಂದ ಮತ್ತೊಂದಕ್ಕೆ ಸ್ಥಳಾಂತರಿಸುವ ಪ್ರಕರಣಗಳಲ್ಲಿ ವಿಚಾರಣ ನ್ಯಾಯಾಲಯಗಳು ವಿವೇಚನೆ ಬಳಸಿ ಆದೇಶ ಮಾಡಬೇಕು ಎಂದು ಹೈಕೋರ್ಟ್ ಹೇಳಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಎಸ್. ರಾವ್ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ಹೇಳಿದೆ.
ಪ್ರದೋಷ್ನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ತತ್ಕ್ಷಣ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದ್ದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಅರ್ಜಿದಾರರು ದರ್ಶನ್ರಿಂದ ದೂರ ಇದ್ದಾರೆ. ವೈರಲ್ ಆದ ಫೋಟೋದಲ್ಲೂ ಕಾಣಿಸಿಕೊಂಡಿಲ್ಲ. ದರ್ಶನ್ ಮೇಲಿನ ಆರೋಪವನ್ನು ಅರ್ಜಿದಾರರ ಮೇಲೆ ಹೊರಿಸಲಾಗಿದೆ ಎಂದು ಹೇಳಿದೆ, ಜತೆಗೆ, ವಿಚಾರಣಾಧೀನ ಕೈದಿಗೆ ತನ್ನಿಷ್ಟದ ಜೈಲು ಆಯ್ಕೆ ಮಾಡಿಕೊಳ್ಳಲು ಅವಕಾಶವಿಲ್ಲ.
ಹಾಗಂತ ಯಾವುದೇ ಕಾರಣಗಳಿಲ್ಲದೆ, ಏಕಾಏಕಿ ಅವರನ್ನು ಸ್ಥಳಾಂತರಿಸುವಂತಿಲ್ಲ. ವಿಚಾರಣಾಧೀನ ಕೈದಿಗಳ ಸ್ಥಳಾಂತರಕ್ಕೆ ಸೂಕ್ತ ಮತ್ತು ಸಮಂಜಸ ಕಾರಣ ನೀಡಬೇಕಾಗುತ್ತದೆ. ಇಂತಹ ಪ್ರಕರಣಗಳಲ್ಲಿ ವಿಚಾರಣ ನ್ಯಾಯಾಲಯಗಳು ವಿವೇಚನೆ ಬಳಸಿ ಆದೇಶಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿರುವ ಹೈಕೋರ್ಟ್, ಪ್ರದೋಷ್ ರಾವ್ನನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ ಜೆಎಂಎಫ್ಸಿ ಕೋರ್ಟ್ 2024ರ ಆಗಸ್ಟ್ 27ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayudha Pooje: ಬಸ್, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್ಆರ್ಟಿಸಿ
High Court Order: ಹಳೆ ಸಂಹಿತೆ ಸಿಆರ್ಪಿಸಿಯ ಮೊದಲ ಎಫ್ಐಆರ್ ರದ್ದು!
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.