Renukaswamy Case: ಪವಿತ್ರಾಗೌಡ ಮಾಸ್ಟರ್‌ಮೈಂಡ್‌!

ಆಕೆಯ ಪ್ರಚೋದನೆಯಿಂದಲೇ ಕೊಲೆ, ಪೊಲೀಸರಿಂದ ನ್ಯಾಯಾಲಯಕ್ಕೆ ಮಾಹಿತಿ

Team Udayavani, Jun 21, 2024, 11:25 AM IST

Darshan-case

ಬೆಂಗಳೂರು:  ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಗೆಳತಿ ಪವಿತ್ರಾಗೌಡ ಮಾಸ್ಟರ್‌ ಮೈಂಡ್‌ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆಕೆ ಯನ್ನು ಸದ್ಯ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾ ಗಿದೆ. ಇದೇ ವೇಳೆ ಕೃತ್ಯದಲ್ಲಿ ಈಕೆಯ ಪಾತ್ರದ ಬಗ್ಗೆ ತನಿಖಾಧಿಕಾರಿಗಳು ಕೋರ್ಟ್‌ಗೆ ಕೆಲವೊಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಈಕೆಯೇ ಪ್ರಕರಣದ ಪ್ರಮುಖ ಕಾರಣಕರ್ತೆಯಾಗಿದ್ದು, ಈಕೆಯ ಪ್ರಚೋದನೆಯಿಂದಲೇ ಇತರೆ ಆರೋಪಿಗಳು ಕೊಲೆ ಒಳಸಂಚು ರೂಪಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈಕೆಗೆ ರೇಣುಕಸ್ವಾಮಿ ಕಳುಹಿಸಿದ ಅಶ್ಲೀಲ ಸಂದೇಶವನ್ನು ದರ್ಶನ್‌ಗೆ ತೋರಿಸಿ ಕೃತ್ಯಕ್ಕೆ ಪ್ರಚೋದನೆ ನೀಡಿದ್ದಳು. ಅದರಿಂದ ದರ್ಶನ್‌, ತನ್ನ ಅಭಿಮಾನಿ ಬಳಗ ಹಾಗೂ ಆಪ್ತರ ಮೂಲಕ ಚಿತ್ರ ದುರ್ಗದಿಂದ ರೇಣುಕ ಸ್ವಾಮಿಯನ್ನು ಕರೆಸಿಕೊಂಡು ಹತ್ಯೆ ಮಾಡಿದ್ದಾನೆ.

ಶೆಡ್‌ ದುಷ್ಕೃತ್ಯ ಎಸಗುವ ಅಡ್ಡ: ಪಟ್ಟಣಗೆರೆ ಜಯಣ್ಣ ಎಂಬಾತನಿಗೆ ಸೇರಿದ ಶೆಡ್‌ ದುಷ್ಕೃತ್ಯಗಳ ಎಸಗುವ ಅಡ್ಡೆ ಎಂದು ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ತನ್ನ ಸಂಬಂಧಿ ಜಯಣ್ಣಗೆ ಸೇರಿದ ಶೆಡ್‌ನ್ನು ವಿನಯ್‌, ತನ್ನ ಸ್ನೇಹಿತ ದೀಪಕ್‌ ಜತೆ ನಿರ್ವಹಿಸುತ್ತಿದ್ದ. ಅಲ್ಲದೆ, ವಿನಯ್‌, ತನ್ನ ದುಷ್ಕೃತ್ಯಗಳು ಹಾಗೂ ಇತರೆ ಅಕ್ರಮ ಚಟುವಟಿಕೆಗಳ ಎಸಗಲು ಇದನ್ನೇ ಅಡ್ಡೆಯನ್ನಾಗಿಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಕೆಲ ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳಿಸಿದ ರೇಣುಕಸ್ವಾಮಿ  

ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನಿಂದ ಹತ್ಯೆಗೊಳಗಾದ ಚಿತ್ರದುರ್ಗದ ರೇಣುಕಸ್ವಾಮಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಕೆಲ ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸಿರುವುದಾಗಿ ತಿಳಿದು ಬಂದಿದೆ.

ರಾಜ್ಯಾದ್ಯಂತ ಭಾರಿ ಕೋಲಾಹಲ ಎಬ್ಬಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆತನ ಹಿನ್ನೆಲೆ ಕೆದಕುತ್ತಾ ಹೋದಾಗ ಇನ್‌ಸ್ಟಾಗ್ರಾಂನಲ್ಲಿ ಕೆಲ ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸಿರುವುದು ಪತ್ತೆಯಾಗಿದೆ. ಅಶ್ಲೀಲ ಸಂದೇಶದ ಜತೆಗೆ ಆತನ ಆಕ್ಷೇಪಾರ್ಹ ಫೋಟೋಗಳನ್ನು ಸಹ ಕಳುಹಿಸಿದ್ದಾನೆ ಎನ್ನಲಾಗಿದೆ. ಇನ್‌ಸ್ಟಾಗ್ರಾಂ ಖಾತೆಯಿಂದ ಅಶ್ಲೀಲ ಸಂದೇಶಗಳು, ಫೋಟೋಗಳನ್ನು ಕಳಿಸಿರುವ ಬಗ್ಗೆ ಇಬ್ಬರು ಮಹಿಳೆಯರು ರೇಣುಕಸ್ವಾಮಿ ವಿರುದ್ಧ ಈ ಹಿಂದೆ ಆರೋಪಿಸಿದ್ದರು. ಸಾಮಾಜಿಕ ಜಾಲತಾಣ ಗಳನ್ನು ಹೆಚ್ಚೆಚ್ಚು ಸಕ್ರಿಯನಾಗಿದ್ದ ರೇಣುಕಸ್ವಾಮಿ ಇತ್ತೀಚೆಗೆ ನಟ ದರ್ಶನ್‌ ಸ್ನೇಹಿತೆ ಪವಿತ್ರಾಗೌಡಗೂ ಇದೇ ರೀತಿಯ ಸಂದೇಶಗಳು ಹಾಗೂ ಖಾಸಗಿ ಭಾಗಗಳ ಫೋಟೋಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಪವಿತ್ರಾ ಈ ಸಂಗತಿಯನ್ನು ತನ್ನ ಮನೆಕೆಲಸದಾತ ಪವನ್‌ಗೆ ತಿಳಿಸಿದ್ದಳು.

ಚಾಟ್‌ ಮಾಡಿ ರೇಣುಕಸ್ವಾಮಿ ನಂಬರ್‌ ಪಡೆದಿದ್ದ ಪವನ್‌!:  ಇತ್ತ ಪವನ್‌ ಈ ವಿಚಾರವನ್ನು ದರ್ಶನ್‌ ಗಮನಕ್ಕೆ ತಂದಿದ್ದ. ಜತೆಗೆ ಪವಿತ್ರಾ ಹೆಸರಿನಲ್ಲಿ ರೇಣುಕಸ್ವಾಮಿ ಜತೆಗೆ ಇನ್‌ ಸ್ಟಾಗ್ರಾಂನಲ್ಲಿ ಚಾಟ್‌ ಮಾಡಿಕೊಂಡು ಆತನ ನಂಬರ್‌ ಪಡೆದುಕೊಂಡಿದ್ದ. ಪವಿತ್ರಾ ಗೌಡ ತಮ್ಮ ಬಳಿ ಚಾಟ್‌ ಮಾಡಿರಬಹುದು ಎಂದು ನಂಬಿದ್ದ ರೇಣುಕಸ್ವಾಮಿ ತನ್ನ ಮೊಬೈಲ್‌ ನಂಬರ್‌ ಅನ್ನು ಹಂಚಿಕೊಂಡಿದ್ದ. ಇಷ್ಟಕ್ಕೆ ಸುಮ್ಮನಾಗದ “ಡಿ’ ಗ್ಯಾಂಗ್‌ ಆತನ ಮೊಬೈಲ್‌ ನಂಬರ್‌ ಆಧಾರದಲ್ಲಿ ಆತನ ಜಾಡು ಹಿಡಿದಾಗ ಚಿತ್ರದುರ್ಗದಲ್ಲಿ ಮೆಡಿಕಲ್‌ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಸುಳಿವು ಸಿಕ್ಕಿತ್ತು.

ಚಿತ್ರದುರ್ಗ ಜಿಲ್ಲೆಯ ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಆರೋಪಿ ರಾಘವೇಂದ್ರನನ್ನು ನಟ ದರ್ಶನ್‌ ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಮೊಬೈಲ್‌ ಹಾಗೂ ಫೋಟೋ ಆಧರಿಸಿ ರಾಘವೇಂದ್ರ ಚಿತ್ರದುರ್ಗದಲ್ಲಿ ಹುಡುಕಾಟ ನಡೆಸಿ ರೇಣುಕಸ್ವಾಮಿಯನ್ನು ಪತ್ತೆಹಚ್ಚಿದ್ದ. ಜೂನ್‌ 8ರಂದು ಚಿತ್ರದುರ್ಗದಲ್ಲಿ ರೇಣುಕಸ್ವಾಮಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಬಂದು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆ ತರಲಾಗಿತ್ತು. ನಂತರ “ಡಿ’ ಗ್ಯಾಂಗ್‌ ಆತನಿಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿತ್ತು. ಬಳಿಕ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿತ್ತು.

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.