Reservation For Job: ಮೀಸಲಾತಿ ಮಸೂದೆ ಪರಾಮರ್ಶೆಗೆ ಸಂಪುಟ ಉಪಸಮಿತಿ ರಚನೆ?
ಕನ್ನಡಿಗರಿಗೆ ಉದ್ಯೋಗದ ಭರವಸೆ ನೀಡಿ ಮೋಸ ಮಾಡಿದೆ: ಕನ್ನಡ ಪರ ಸಂಘಟನೆ
Team Udayavani, Jul 18, 2024, 7:10 AM IST
ಬೆಂಗಳೂರು: ಅನುಮೋದನೆ ನೀಡಿರುವ ಮಸೂದೆಗೆ ತಾತ್ಕಾಲಿಕ ತಡೆ ನೀಡಿರುವ ಸರಕಾರ, ಜು. 22ರ ಸೋಮವಾರ ಸಚಿವ ಸಂಪುಟ ಸಭೆ ಕರೆದಿದ್ದು ಈ ವಿಚಾರವನ್ನು ಪರಾಮರ್ಶೆಗೆ ಒಳಪಡಿಸಲಿದೆ.
ಸಂಪುಟ ಸಭೆ ಅನುಮೋದಿಸಿ, ಇನ್ನೇನು ಅಧಿವೇಶನದಲ್ಲಿ ಮಸೂದೆ ಮಂಡಿಸುವ ಹಂತದಲ್ಲಿ ತಾತ್ಕಾಲಿಕ ತಡೆ ನೀಡಿರುವ ಸರಕಾರ ಕ್ರಮದ ವಿರುದ್ಧ ವಿಪಕ್ಷಗಳು ಈಗಾಗಲೇ ತಿರುಗಿಬಿದ್ದಿದ್ದು, ಕನ್ನಡಿಗರಿಗೆ ಉದ್ಯೋಗದ ಭರವಸೆ ನೀಡಿ ಮೋಸ ಮಾಡಿದೆ ಎಂದಿದೆ. ಇದಕ್ಕೆ ಕನ್ನಡಪರ ಸಂಘಟನೆಯೂ ಬೇಸರ ವ್ಯಕ್ತಪಡಿಸಿವೆ.
ಖಾಸಗಿ ವಲಯ ಉದ್ಯಮಿಗಳು ಸರಕಾರದ ನಡೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ಉದ್ಯಮಿಗಳ ಅಸಮಾಧಾನ ತಣಿಸುವ ಕಾರ್ಯಕ್ಕೂ ಸರಕಾರ ಕೈಹಾಕಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಸೂದೆಯ ಪರವಾಗಿದ್ದರೆ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇದರ ವಿರುದ್ಧ ಇದ್ದಾರೆ. ಸಂಪುಟದಲ್ಲೇ ಒಡಕು ಧ್ವನಿ ಮೂಡಿರುವುದರಿಂದ ಸಚಿವರ ವಿವೇಚನೆಗೇ ಬಿಡಲು ಸಿಎಂ ನಿರ್ಧರಿಸಿದ್ದಾರೆ.
ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಮೂವರು ಸಚಿವರ ಜತೆಗೆ ಕಾನೂನು ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸುವ ಸಾಧ್ಯತೆಗಳಿವೆ. ಈ ಸಂಪುಟ ಉಪಸಮಿತಿಯ ಪರಾಮರ್ಶೆಗೆ ಉದ್ದೇಶಿತ ಮಸೂದೆಯನ್ನು ನೀಡಿ, ಅದಕ್ಕೊಂದು ರೂಪ ನೀಡಿದ ಬಳಿಕ ಮುಂದಿನ ದಿನಗಳಲ್ಲಿ ಯಾವ ರೀತಿ ಸಂಪುಟದ ಮುಂದೆ ತರಬೇಕೆಂದು ನಿರ್ಧರಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi Govt: ದೆಹಲಿ ಸಿಎಂ ರೇಸ್ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.