Revenue Department: ಬಗರ್ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು
ರಾಜ್ಯಾದ್ಯಂತ 160 ಬಗರ್ಹುಕುಂ ಸಮಿತಿ ರಚನೆ ನಮೂನೆ 57ರ ಅಡಿ 9.80 ಲಕ್ಷ ಅರ್ಜಿ
Team Udayavani, Sep 28, 2024, 7:33 AM IST
ಬೆಂಗಳೂರು: ಬಗರ್ಹುಕುಂ ಸಮಿತಿ ಮುಂದಿರುವ ಅರ್ಜಿಗಳನ್ನು 8 ತಿಂಗಳಲ್ಲಿ ವಿಲೇವಾರಿ ಮಾಡುವಂತೆ ಗಡುವು ವಿಧಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಶುಕ್ರವಾರ ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನ ಸಭೆ ನಡೆಸಿದ ಅನಂತರ ಮಾತನಾಡಿದ ಅವರು, ರಾಜ್ಯಾದ್ಯಂತ 160 ಬಗರ್ಹುಕುಂ ಸಮಿತಿ ರಚನೆಯಾಗಿದ್ದು, ಈ ಸಮಿತಿಗಳ ಮುಂದೆ ನಮೂನೆ 57ರ ಅಡಿ ಸುಮಾರು 9.80 ಲಕ್ಷ ಅರ್ಜಿಗಳು ಬಂದಿವೆ. ಇವುಗಳ ಪೈಕಿ ಅನರ್ಹ ಅರ್ಜಿಗಳೇ ಹೆಚ್ಚಿವೆ. ಹೀಗಾಗಿ ಮುಂದಿನ 8 ತಿಂಗಳಲ್ಲಿ ಇವುಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಎಷ್ಟು ದರಖಾಸ್ತು ಪೋಡಿ ಪ್ರಕರಣಗಳು ಬಾಕಿ ಇವೆ ಎನ್ನುವ ಮಾಹಿತಿ ಸರಕಾರದ ಬಳಿಯೇ ಇಲ್ಲ ಎನ್ನುವುದನ್ನು ಒಪ್ಪಿಕೊಂಡ ಸಚಿವ ಕೃಷ್ಣ ಬೈರೇ
ಗೌಡ, ಸಮಸ್ಯೆಯ ಗಾತ್ರವನ್ನೇ ಅರಿಯದೆ, ಪರಿಹಾರ ಸೂಚಿಸಲಾಗದು. ಹೀಗಾಗಿ ಅಭಿಯಾನದ ಮಾದರಿಯಲ್ಲಿ ದರಖಾಸ್ತು ಪೋಡಿ ಪ್ರಕರಣಗಳನ್ನು ಅನುಷ್ಠಾನ
ಗೊಳಿಸಲು ತೀರ್ಮಾನಿಸಿದೆ. ಗ್ರಾಮ ಲೆಕ್ಕಿಗರ ಬಳಿ 69,437 ಸರ್ವೇ ನಂಬರ್ಗಳಲ್ಲಿ 1-5 ಪ್ರಕ್ರಿಯೆ ಆರಂಭಿಸಿದ್ದೇವೆ. ಪೋಡಿ ಅರ್ಹತಾ ಕಡತ ತಯಾ
ರಾದರೆ, ಸರ್ವೇ ಇಲಾಖೆಯು 6-10 ಪ್ರಕ್ರಿಯೆಯನ್ನು ನಡೆಸಲು ಅನುಕೂಲ ಆಗಲಿದೆ ಎಂದರು.
ಗ್ರಾಮ ಲೆಕ್ಕಿಗರಿಗೆ ಲ್ಯಾಪ್ಟಾಪ್ ಭರವಸೆ
ಕ್ಷೇತ್ರಕಾರ್ಯದಲ್ಲಿ ತೊಡಗಿರುವ ಗ್ರಾಮ ಲೆಕ್ಕಿಗ(ವಿಎ)ರು ಪ್ರತಿಯೊಂದನ್ನು ಜಿಪಿಎಸ್ ಅನೇಬಲ್ಡ್ ಆ್ಯಪ್ ಮೂಲಕವೇ ಮಾಡಬೇಕಿರುವುದರಿಂದ ಫೀಲ್ಡ್ಗೆ ಹೋಗಲೇಬೇಕಿದೆ. ಇದರಿಂದ ಕೆಲಸದ ಒತ್ತಡ ಹೆಚ್ಚಾಗಿದ್ದು, ರಜೆ ದಿನಗಳಲ್ಲೂ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ರಜೆ ದಿನಗಳಲ್ಲಿ ಕೆಲಸ ಮಾಡಿಸಿಕೊಳ್ಳದೇ ಇರಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಕ್ಷೇತ್ರಕಾರ್ಯದಲ್ಲಿರುವ 7 ಸಾವಿರ ಗ್ರಾಮಲೆಕ್ಕಿಗರ ಪೈಕಿ ಶೇ. 50ರಷ್ಟು ವಿಎಗಳಿಗೆ ಲ್ಯಾಪ್ಟಾಪ್ ಕೊಡಲು ಚಿಂತನೆ ನಡೆಸಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಅಧಿಕಾರಿಗಳ ಕರ್ತವ್ಯಕ್ಕೆ ಕಂದಾಯ ಇಲಾಖೆ ಪ್ರಶಂಸೆ
ಕಂದಾಯ, ವಿಪತ್ತು ನಿರ್ವಹಣೆ, ಭೂದಾಖಲೆ, ಭೂಸರ್ವೇಕ್ಷಣ ಇಲಾಖೆಗಳಲ್ಲಿ ಹಮ್ಮಿಕೊಂಡ ಅನೇಕ ಕಾರ್ಯಕ್ರಮಗಳು, ಅಭಿಯಾನಗಳನ್ನು ಅನುಷ್ಠಾನಗೊಳಿಸುವಲ್ಲಿ ಉತ್ಸಾಹ ತೋರಿ, ನಿರೀಕ್ಷೆ ಮೀರಿ ಸಾಧನೆ ಮಾಡಿದ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ಕೊಡಲು ನಿರ್ಧರಿಸಿದ್ದು, ಶುಕ್ರವಾರ ಚಿತ್ರದುರ್ಗ, ಹಾಸನ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿ ಸೇರಿದಂತೆ 11 ಎಸಿ, 21 ತಹಶೀಲ್ದಾರ್, 36 ಗ್ರಾಮ ಲೆಕ್ಕಿಗರು, 9 ಮಂದಿ ವಿಪತ್ತು ನಿರ್ವಹಣ ಅಧಿಕಾರಿಗಳು, ಭೂಮಾಪನ ಇಲಾಖೆಯ 83 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Congress Government: ಪೊಲೀಸ್ ಅಧಿಕಾರಿಗಳ ವಿರುದ್ಧ ಇಂದು ಎಚ್ಡಿಕೆ ದಾಖಲೆ ಬಿಡುಗಡೆ
Cabinet Decision: ಸಿಬಿಐ ಪವರ್ ಕಟ್: ರಾಜ್ಯ ಸರಕಾರ ಸಮರ್ಥನೆ
Mallikarjun Kharge: ಕುಟುಂಬ ವಿರುದ್ಧಲೋಕಾಯುಕ್ತಕ್ಕೆ ದೂರು
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಬಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.