Rewind 2023; ಚಿತ್ರರಂಗಕ್ಕೆ ವರ್ಷಪೂರ್ತಿ ಚೈತನ್ಯ ತುಂಬಿದ ಹೊಸಬರು


Team Udayavani, Dec 19, 2023, 1:20 PM IST

Rewind 2023; ಚಿತ್ರರಂಗಕ್ಕೆ ವರ್ಷಪೂರ್ತಿ ಚೈತನ್ಯ ತುಂಬಿದ ಹೊಸಬರು

2023 ಮುಗಿಯುತ್ತಾ ಬಂದಿದೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗಿವೆ. ಡಿಸೆಂಬರ್‌ 15ರವರೆಗೆ ಬಿಡುಗಡೆಯಾಗಿರುವ ಸಿನಿಮಾಗಳನ್ನು ಲೆಕ್ಕ ಹಾಕಿದಾಗ ಈ ವರ್ಷ 211 ಪ್ಲಸ್‌ ಚಿತ್ರಗಳು ಸಿಗುತ್ತವೆ. ಈ ಸಂಖ್ಯೆ ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳಷ್ಟೇ ಹತ್ತಿರದಲ್ಲಿದೆ. 211 ಪ್ಲಸ್‌ ಸಿನಿಮಾಗಳಲ್ಲಿ ಸ್ಟಾರ್‌ಗಳ ಹಾಗೂ ಪರಿಚಿತ ಮುಖಗಳ, ಚಿತ್ರರಂಗದ ಮುಂಚೂಣಿ ನಟರ ಸಿನಿಮಾಗಳೆಂದು ಲೆಕ್ಕ ಹಾಕುತ್ತಾ ಹೋದರೆ ಸಿಗುವ ಸಂಖ್ಯೆ 25ರ ಹಾಸುಪಾಸಿನಲ್ಲೇ ಇದೆ. ಮಿಕ್ಕಂತ 186ಕ್ಕೂ ಹೆಚ್ಚು ಹೊಸಬರ ಚಿತ್ರಗಳು ಬಿಡುಗಡೆಯಾಗಿರೋದು ಸ್ಪಷ್ಟ. ಅಲ್ಲಿಗೆ ಒಂದು ಸಾಬೀತಾಗಿದೆ, ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ಚಿತ್ರರಂಗವನ್ನು ಸದಾ ಚಟುವಟಿಕೆಯಲ್ಲಿ ಇಟ್ಟಿರೋದು ಹೊಸಬರೇ.

ಯಾವುದೇ ಚಿತ್ರರಂಗವನ್ನಾದರೂ ತೆಗೆದು ನೋಡಿ, ಅಲ್ಲಿನ ಚಿತ್ರರಂಗವನ್ನು ಸದಾ ಹಸಿರಾಗಿರುವಂತೆ ಹಾಗೂ ನಿರಂತರ ಕೆಲಸ ಕಾರ್ಯಗಳು ನಡೆಯುವಂತೆ ಮಾಡುವುದು ಹೊಸಬರೇ. ಆದರೆ, ಇಂತಹ ಹೊಸಬರಿಗೆ ಗೆಲುವಿನ ಕೊರತೆ ಮಾತ್ರ ಕಾಡುತ್ತಲೇ ಇರುತ್ತದೆ.

ಭಿನ್ನ- ವಿಭಿನ್ನ ಪ್ರಯತ್ನ

ಚಿತ್ರರಂಗಕ್ಕೆ ಸ್ಟಾರ್‌ ಸಿನಿಮಾಗಳು ಎಷ್ಟು ಮುಖ್ಯವೋ ಹೊಸಬರ ಸಿನಿಮಾಗಳು ಅಷ್ಟೇ ಮುಖ್ಯ. ಸ್ಟಾರ್‌ ಸಿನಿಮಾಗಳು ವರ್ಷದ ಜಾತ್ರೆಯಾದರೆ, ಹೊಸಬರ ಸಿನಿಮಾಗಳು ಊರ ದಿನಸಿ ಅಂಗಡಿಯಂತೆ. ನಿರಂತರವಾಗಿ ಚಿತ್ರರಂಗಕ್ಕೆ ಕೆಲಸ ನೀಡುತ್ತಲೇ ಇರುತ್ತವೆ. 2023ರಲ್ಲೂ 185ಕ್ಕೂ ಹೆಚ್ಚು ಹೊಸಬರ ಸಿನಿಮಾಗಳು ಬಿಡುಗಡೆಯಾಗಿವೆ. ಇಲ್ಲಿ ಲವ್‌ಸ್ಟೋರಿ, ಆ್ಯಕ್ಷನ್‌, ಹಾರರ್‌, ಥ್ರಿಲ್ಲರ್‌, ಸಸ್ಪೆನ್ಸ್‌, ಸೇರಿದಂತೆ ಬೇರೆ ಬೇರೆ ಜಾನರ್‌ಗಳನ್ನು ಪ್ರಯತ್ನಿಸಿದ್ದಾರೆ. ಬಹುತೇಕ ಸಿನಿಮಾಗಳು ಅನುಭವದ ಹಾಗೂ ಪೂರ್ವತಯಾರಿಯ ಕೊರತೆಯಿಂದ ಸದ್ದಿಲ್ಲದೇ ಚಿತ್ರಮಂದಿರದಿಂದ ಮಾಯವಾದರೆ, ಒಂದಷ್ಟು ಚಿತ್ರಗಳು ಮೆಚ್ಚುಗೆಗೆ ಪಾತ್ರವಾಗಿವೆ. ಆದರೆ, ಸೂಕ್ತ ಪ್ರೋತ್ಸಾಹ, ಸಿನಿಮಾ ಮಂದಿರದಲ್ಲಿ ಸಿನಿಮಾಗಳನ್ನು ನಿಲ್ಲಿಸುವ ಸಾಮರ್ಥ್ಯದ ಕೊರೆತೆಯಿಂದಾಗಿ ತಣ್ಣಗಾಗಿವೆ.

ವರ್ಷದ ಮೊದಲ ಬ್ರೇಕ್‌ ನೀಡಿದ್ದೇ ಹೊಸಬರು

ಸಿನಿಮಾದ ಗೆಲುವನ್ನು ಊಹಿಸೋದು ಕಷ್ಟ. ಸೂಪರ್‌ ಹಿಟ್‌ ಆಗಬಹುದೆಂದು ಅಭಿಮಾನಿಗಳು ಕಾಯುತ್ತಿದ್ದ ಸ್ಟಾರ್‌ ಸಿನಿಮಾ ಇನ್ನಿಲ್ಲದಂತೆ ಸೋಲಬಹುದು. ಅದೇ ಸದ್ದಿಲ್ಲದೇ ಬಂದ ಹೊಸಬರು ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು. ಈ ವರ್ಷ ಕನ್ನಡ ಚಿತ್ರರಂಗಕ್ಕೆ ಮೊದಲ ಗೆಲುವು ಕೊಟ್ಟಿದ್ದೇ ಹೊಸಬರು. ಅದು “ಡೇರ್‌ ಡೆವಿಲ್‌ ಮುಸ್ತಫಾ’ ಚಿತ್ರದ ಮೂಲಕ. ಸಂಪೂರ್ಣ ಹೊಸಬರೇ ಸೇರಿ ಮಾಡಿದ ಈ ಚಿತ್ರಕ್ಕೆ ಬೆನ್ನೆಲುಬಾಗಿ ಇದ್ದಿದ್ದು ನಟ ಧನಂಜಯ್‌ ಮಾತ್ರ. ಆದರೆ, ಈ ಚಿತ್ರ ಒಂದು ಮಟ್ಟದ ಯಶಸ್ಸನ್ನು ತಂದುಕೊಟ್ಟು ನಿಟ್ಟುಸಿರು ಬಿಡುವಂತೆ ಮಾಡಿತು.

ಇದರ ಜೊತೆಗೆ “ಹೊಂದಿಸಿ ಬರೆಯಿರಿ’ ಚಿತ್ರಕ್ಕೂ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ, ಕಮರ್ಷಿಯಲ್‌ ಆಗಿ ಕೋಟಿ ಕೋಟಿ ಕಲೆಕ್ಷನ್‌ ಮಾಡಿದ್ದು ಕೂಡಾ ಹೊಸಬರೇ ಸೇರಿ ಮಾಡಿದ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಚಿತ್ರ. ಈ ಚಿತ್ರದ ಮೂಲಕ ಇಡೀ ಚಿತ್ರರಂಗಕ್ಕೊಂದು ಭರವಸೆ ಬಂದಿತ್ತು. ಹಾಗಾಗಿ, ಈ ವರ್ಷ ಆರಂಭದ ಗೆಲುವು ನೀಡಿದ್ದು ಕೂಡಾ ಹೊಸಬರೇ. ಹಾಗಂತ ಸ್ಟಾರ್‌ ಸಿನಿಮಾಗಳು ಗೆದ್ದಿಲ್ಲ ಎಂದಲ್ಲ, ಸ್ಟಾರ್‌ ಸಿನಿಮಾಗಳು ಕೂಡಾ ಕಲೆಕ್ಷನ್‌ನಲ್ಲಿ ಜೋರು ಸೌಂಡ್‌ ಮಾಡಿವೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024-Merge

Rewind 2024: ಸರಿದ 2024ರ ಪ್ರಮುಖ 24 ಹೆಜ್ಜೆ ಗುರುತು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

 Yearender 2024: ಅಮೆರಿಕ To ಉಕ್ರೈನ್- ಪ್ರಧಾನಿ ಮೋದಿ ಅವರ ಟಾಪ್‌ ವಿದೇಶ ಪ್ರವಾಸ

 Yearender 2024: ಅಮೆರಿಕ To ಉಕ್ರೈನ್- ಪ್ರಧಾನಿ ಮೋದಿ ಅವರ ಟಾಪ್‌ 5 ವಿದೇಶ ಪ್ರವಾಸ

Yearender 2024: ಬಿಲ್ಕೀಸ್‌ To ಜೈಲುಗಳಲ್ಲಿ ಜಾತಿ ತಾರತಮ್ಯ: ಸುಪ್ರೀಂನ Top 10 ತೀರ್ಪುಗಳು

Yearender 2024: ಬಿಲ್ಕೀಸ್‌ To ಜೈಲುಗಳಲ್ಲಿ ಜಾತಿ ತಾರತಮ್ಯ: ಸುಪ್ರೀಂನ Top 10 ತೀರ್ಪುಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.