ಬಾಂಗ್ಲಾ ದೇಶದಲ್ಲಿ ಗಲಭೆ..ಸಿಂಧನೂರಿನಲ್ಲಿ ದುಗುಡ!-1971ರ ನಿರಾಶ್ರಿತ ಕುಟುಂಬದ ಕಥನ…

ಈ ಕ್ಯಾಂಪ್‌ಗಳಲ್ಲಿ ಪ್ರಸ್ತುತ ಸುಮಾರು 2-3 ಸಾವಿರದಷ್ಟು ಕುಟುಂಬಗಳಿವೆ..

Team Udayavani, Aug 8, 2024, 5:04 PM IST

ಬಾಂಗ್ಲಾ ದೇಶದಲ್ಲಿ ಗಲಭೆ..ಸಿಂಧನೂರಿನಲ್ಲಿ ದುಗುಡ!-1971ರ ನಿರಾಶ್ರಿತ ಕುಟುಂಬದ ಕಥನ…

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರಿಯಾಬಿಟೇಶನ್‌ ಕ್ಯಾಂಪ್‌(ಆರ್‌.ಎಚ್‌.ಕ್ಯಾಂಪ್‌) ಗಳಲ್ಲಿ ಆತಂಕ-ದುಗುಡಕ್ಕೆ ಕಾರಣವಾಗಿದೆ. ಹೌದು. ನೆರೆಯ ದೇಶದ ವಿದ್ಯಮಾನ ಅದರಲ್ಲೂ
ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿ, ದೌರ್ಜನ್ಯ, ಹಿಂದೂಗಳ ಮನೆ-ಆಸ್ತಿ, ದೇವಸ್ಥಾನ ಧ್ವಂಸದಂತಹ ಕೃತ್ಯಗಳು ಸಿಂಧನೂರು ತಾಲೂಕಿನ ನಿರಾಶ್ರಿತ ಕ್ಯಾಂಪ್‌ಗಳಲ್ಲಿ ಸರಿ ಸುಮಾರು ನಾಲ್ಕು ದಶಕಗಳಿಂದ ಬದುಕು ಕಟ್ಟಿಕೊಂಡು ಇಲ್ಲಿಯವರೇ ಆಗಿರುವ ಮೂಲತಃ ಬಾಂಗ್ಲಾ ನಿವಾಸಿಗಳ ನೋವು ದಿನದಿಂದ ದಿನಕ್ಕೆ ಹೆಚ್ಚುವಂತೆ ಮಾಡಿದೆ.

1971ರಲ್ಲಿ ನಡೆದ ಬಾಂಗ್ಲಾ ದೇಶ ವಿಮೋಚನಾ ಸಂದರ್ಭ ಪಾಕಿಸ್ತಾನದ ಸೇನೆಯಿಂದ ವಿಶೇಷವಾಗಿ ಹಿಂದೂಗಳ ಮೇಲೆ ಅತ್ಯಾಚಾರ, ಆಸ್ತಿ-ಪಾಸ್ತಿ ನಷ್ಟ ಅಪಾರ ಪ್ರಮಾಣದಲ್ಲಿ ನಡೆದಿತ್ತು. ಆಗ ಬಾಂಗ್ಲಾ ತೊರೆದು ಭಾರತಕ್ಕೆ ಬಂದ ನಿರಾಶ್ರಿತ ಹಿಂದೂ ಕುಟುಂಬಗಳಿಗೆ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಸರ್ಕಾರ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುಂಗಭದ್ರ ಜಲಾಶಯದ ಎಡದಂಡೆ ನಾಲೆಗೆ ಹೊಂದಿಕೊಂಡಂತೆ ಐದು ಕ್ಯಾಂಪ್‌ ನಿರ್ಮಿಸಿ, ಐದು ಸಾವಿರ ಎಕರೆಯಷ್ಟು ಭೂಮಿ ಹಂಚಿಕೆ ಮಾಡಿ ಆಶ್ರಯ ಕಲ್ಪಿಸಿತ್ತು. ಈ ಕ್ಯಾಂಪ್‌ಗಳಲ್ಲಿ ಪ್ರಸ್ತುತ ಸುಮಾರು 2-3 ಸಾವಿರದಷ್ಟು ಕುಟುಂಬಗಳಿದ್ದು, ಎರಡ್ಮೂರು ತಲೆಮಾರುಗಳನ್ನು ಇಲ್ಲಿಯೇ ಕಳೆದಾಗಿದೆ.

ಮರುಕಳಿಸಿದ ಆತಂಕ: ನಿರಾಶ್ರಿತರಾಗಿ ಭಾರತಕ್ಕೆ ಬಂದು ನೆಲೆಸಿದ್ದರೂ ಇಂದಿಗೂ ಬಾಂಗ್ಲಾದಲ್ಲಿನ ಸಂಬಂಧಿಕರ ಜತೆಗಿನ ಬಾಂಧವ್ಯ ಮುಂದುವರಿದಿತ್ತು. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಹೋಗಿ ಬರುವುದು ನಡೆದೇ ಇತ್ತು. ಆದರೆ ಈಗಿನ ಹಿಂಸೆ-ದೌರ್ಜನ್ಯ ನೋಡಿದರೆ ನಮ್ಮ ಸಂಬಂಧಿಕರು 43 ವರ್ಷಗಳ ಹಿಂದೆ ನಾವು ಅನುಭವಿಸಿದ ಸ್ಥಿತಿಯನ್ನೇ ಅನುಭವಿಸುತ್ತಿರುವಂತಿದೆ. ಈಗ ಸಂಬಂಧಿಕರ ಸ್ಥಿತಿ-ಗತಿ ವಿಚಾರಿಸಲು ಫೋನ್‌ ಸಂಪರ್ಕ ಇಲ್ಲ. ಅವರ ಜೀವಕ್ಕೆ ಏನಾದರೂ ಅಪಾಯ ಎದುರಾಗಿದೆಯಾ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಯಾವ ಮಾಹಿತಿಯೂ ದೊರೆಯುತ್ತಿಲ್ಲ. ಕನಿಷ್ಟ ಅವರ ಸಂಪರ್ಕಕ್ಕಾದರೂ ಅವಕಾಶ ದೊರೆಯಲಿ ಎಂಬ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ.

ಬಾಂಗ್ಲಾದಲ್ಲಿ 1947ರಲ್ಲಿ ಹಿಂದೂಗಳ ಜನಸಂಖ್ಯೆ ಶೇ.31ಆಗಿತ್ತು. 1961ರ ವೇಳೆಗೆ ಅದು ಶೇ.19ಕ್ಕೆ ಕುಸಿದರೆ, 1971ರ ಘಟನೆ ನಂತರ 1974 ಅವಧಿಗೆ ಶೇ.14ಕ್ಕೆ ಕುಸಿದಿತ್ತು. ಈಗ ಬಾಂಗ್ಲಾದಲ್ಲಿ ಹಿಂದೂಗಳ ಸಂಖ್ಯೆ ಶೇ.5-9ರಷ್ಟಿದೆ. ಅಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ, ದೇವಸ್ಥಾನ-ಮಂದಿರಗಳ ಮೇಲೆ ದಾಳಿಯಂತಹ ಘಟನೆಗಳು ಆಗಾಗ ನಡೆಯುತ್ತಿದ್ದರೂ ಈಗ  ನಡೆದಿರುವ ಗಲಭೆ ಬಳಿಕ ಹಿಂದೂಗಳು ಅಲ್ಲಿ ಬದುಕುವುದು ಕಷ್ಟವಾಗಬಹುದು ಎಂದು ಹೇಳುತ್ತಾರೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ದಾಳಿ ನಮ್ಮನ್ನು ಆತಂಕಕ್ಕೀಡು ಮಾಡಿದೆ. ಸುಮಾರು 43 ವರ್ಷಗಳ ಹಿಂದೆ ನಮ್ಮ ತಾತ ಸೇರಿದಂತೆ ಅನೇಕ ಕುಟುಂಬಗಳು ಕರ್ನಾಟಕದಲ್ಲಿ ನೆಲೆ ಕಂಡುಕೊಂಡಿದ್ದರೂ, ಇಂದಿಗೂ ಅಲ್ಲಿನ ನಮ್ಮ
ಸಂಬಂಧಿಕರೊಂದಿಗೆ ಸಂಪರ್ಕ ಇದೆ. ಗಲಭೆ ನಂತರದಲ್ಲಿ ನೇರ ಸಂಪರ್ಕ ಇಲ್ಲ. ಫೋನ್‌ ಸಂಪರ್ಕವೂ ಸ್ಥಗಿತಗೊಳಿಸಲಾಗಿದೆ. ಪಶ್ಚಿಮ ಬಂಗಾಲದಲ್ಲಿರುವ ನಮ್ಮ ಸಂಬಂಧಿಯೊಬ್ಬರ ಮೂಲಕ ಮಾಹಿತಿ ಪಡೆಯುತ್ತಿದ್ದೇವೆ.
ಪ್ರದೀಪ, ಆರ್‌.ಎಚ್‌.ಕ್ಯಾಂಪ್‌ ನಿವಾಸಿ.

■ ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.