
ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ “ಪೆದ್ರೊ” ಇಲ್ಲದ್ದಕ್ಕೆ ರಿಷಬ್ ಶೆಟ್ಟಿ ಬೇಸರ
ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ
Team Udayavani, Mar 3, 2022, 11:44 AM IST

ಬೆಂಗಳೂರು: 13ನೇ “ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ’ಕ್ಕೆ ಇಂದು(ಗುರುವಾರ) ಸಂಜೆ ಚಾಲನೆ ಸಿಗುತ್ತಿದೆ. ಇದರ ನಡುವೆಯೇ ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ “ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ’ವಕ್ಕೆ ಆರಂಭದಲ್ಲಿಯೇ ವಿವಾದಗಳು ಸುತ್ತಿಕೊಂಡಿವೆ.
ಇದನ್ನೂ ಓದಿ:ಕ್ಯಾನ್ಸರ್ ನಿಂದ ನೊಂದು, ಬೆಂದಿದ್ದ ತಾಯಿಗೆ ಮರು ಮದುವೆ ಮಾಡಿಸಿದ ಪುತ್ರ!
ಸಿನಿಮೋತ್ಸವದಲ್ಲಿ ಸಿನಿಮಾಗಳ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಅರ್ಹ ಸಿನಿಮಾಗಳನ್ನು ವಿನಾಕಾರಣ ಹೊರಗಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ನಡುವೆಯೇ ಈಗಾಗಲೇ ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ, ವಿಮರ್ಶಕರಿಂದ ಪ್ರಶಂಸೆ ಪಡೆದ “ಪೆದ್ರೊ’ ಸಿನಿಮಾವನ್ನು “ಬೆಂಗಳೂರು ಸಿನಿಮೋತ್ಸವ’ದಿಂದ ಹೊರಗಿಡಲಾಗಿದೆ.
ಇದು “ಪೆದ್ರೊ’ ಚಿತ್ರದ ನಿರ್ಮಾಪಕ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ನಟೇಶ್ ಹೆಗಡೆ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪತ್ರವೊಂದನ್ನು ಬರೆದಿರುವ ನಟ, ನಿರ್ದೇಶಕ ಮತ್ತು ನಿರ್ಮಾಪಕ ರಿಷಬ್ ಶೆಟ್ಟಿ, “ಮೊನ್ನೆಯಷ್ಟೇ ಆಯೋಜಿಸಿದ್ದ ನಮ್ಮ ಸಿನಿಮಾದ ಪ್ರೈವೇಟ್ ಸ್ಕ್ರೀನಿಂಗ್ಗೆ ಆಗಮಿಸಿ ಸಿನಿಮಾವನ್ನು ಬಹುವಾಗಿ ಮೆಚ್ಚಿದ ಗಿರೀಶ್ ಕಾಸರವಳ್ಳಿ, ಎಂ.ಎಸ್. ಸತ್ಯು, ವಸಂತ ಮೋಕಾಶಿ, ವಿವೇಕ್ ಶಾನಭಾಗ್, ಕವಿತಾ ಲಂಕೇಶ್ ಹಾಗೂ ಇನ್ನಿತರ ಹಿರಿಯರು ತೋರಿದ ಪ್ರೀತಿ ನಮ್ಮ ಹೃದಯವನ್ನು ಆರ್ದಗೊಳಿಸಿದೆ. ಜನರೊಂದಿಗೆ ನಮ್ಮ ಸಿನಿಮಾವನ್ನು ಹಂಚಿಕೊಳ್ಳುವ ಆಸೆಯನ್ನು ಇಮ್ಮಡಿಯಾಗಿಸಿದೆ.
ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದು ವಿಮರ್ಶಕರಿಂದ ಪ್ರಶಂಸೆ ಪಡೆದ ಪೆದ್ರೊ, ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ. ನಮ್ಮ ಸಿನಿಮಾ ಚಿತ್ರೋತ್ಸವದಿಂದ ಅವಕಾಶ ವಂಚಿತವಾಯಿತು ಎಂಬುದು ಎಷ್ಟು ಸತ್ಯವೋ ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ. ಸಿನಿಮಾ ಎಂಬ ನದಿಗೆ ಎಲ್ಲ ತೊರೆಗಳೂ ಬಂದು ಸೇರಬೇಕು. ನಮ್ಮಲ್ಲಿಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ತಡೆಗಾಲು ಒಡ್ಡುವ ಪ್ರಯತ್ನ ಮಾಡಿದ್ದಾರೆ’ ಎಂದು ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ನಟೇಶ್ ಹೆಗಡೆ ಬಹಿರಂಗ ಪತ್ರ ಬರೆದಿದ್ದಾರೆ.
ಮಾ. 3ರಿಂದ ಬೆಂಗಳೂರಿನಲ್ಲಿ ಸಿನಿಮೋತ್ಸವ ಆರಂಭವಾಗಲಿದ್ದು, ಜಗತ್ತಿನ ಹಲವು ಭಾಷೆಯ ನೂರಾರು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಕನ್ನಡದ ಕೆಲವು ಚಿತ್ರಗಳನ್ನು ಹೊರತುಪಡಿಸಿ, ಜಾಗತಿಕವಾಗಿ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡ ಕನ್ನಡದ ಹಲವು ಸದಭಿರುಚಿ ಸಿನಿಮಾಗಳು ಈ ಸಿನಿಮೋತ್ಸವದಲ್ಲಿ ಆಯ್ಕೆ ಆಗದೇ ಇರುವುದು ನಿಜಕ್ಕೂ ವಿಪರ್ಯಾಸವೇ ಸರಿ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.