![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 22, 2024, 10:36 AM IST
ನವದೆಹಲಿ: ಗುಜರಾತ್ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ (Lawrence Bishnoi) ಯನ್ನು ಯಾವ ಪೊಲೀಸ್ ಅಧಿಕಾರಿಯಾಗಲಿ ಹ*ತ್ಯೆಗೈದರೆ ಅವರಿಗೆ 1,11,11,111 ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರೀಯ ಕರ್ಣಿ ಸೇನಾ(Kshatriya Karni Sena) ಘೋಷಿಸಿದೆ.
ಜೀ ನ್ಯೂಸ್ ವರದಿ ಪ್ರಕಾರ, ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್, ಬಿಷ್ಣೋಯಿಯನ್ನು ಹ*ತ್ಯೆಗೈಯುವ ಯಾವುದೇ ಪೊಲೀಸ್ ಅಧಿಕಾರಿ ಇರಲಿ ಅವರಿಗೆ 1,11,11,111 ರೂಪಾಯಿ ಇನಾಮು ನೀಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಕೊ*ಲೆಗೀಡಾಗಿದ್ದ ಎನ್ ಸಿಪಿ ಮುಖಂಡ ಬಾಬಾ ಸಿದ್ಧಿಕಿ ಹ*ತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿತ್ತು. ಸಾಬರಮತಿ ಜೈಲಿನಲ್ಲಿ ಬಂಧಿಯಾಗಿರುವ ಬಿಷ್ಣೋಯಿ ಪಾತಕ ಕೃತ್ಯ ಎಸಗುತ್ತಿದ್ದರೂ ಕೂಡಾ ಕೇಂದ್ರ ಸರ್ಕಾರ ಮತ್ತು ಗುಜರಾತ್ ಸರ್ಕಾರ ಕಣ್ಮುಚ್ಚಿ ಕುಳಿತಿರುವುದಾಗಿ ಶೇಖಾವತ್ ಆರೋಪಿಸಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೂ ಏಪ್ರಿಲ್ ತಿಂಗಳಿನಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ಆದರೆ ಲಾರೆನ್ಸ್ ಬಿಷ್ಣೋಯಿಯನ್ನು ತಮ್ಮ ವಶಕ್ಕೆ ಪಡೆಯುವಲ್ಲಿ ಮುಂಬೈ ಪೊಲೀಸರು ವಿಫಲರಾಗಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.