![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 27, 2019, 5:00 AM IST
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಕಣದಿಂದ ಹಿಂದೆ ಸರಿಯಲು ಮೂರೂವರೆ ಕೋಟಿ ರೂ.ಪಡೆದಿದ್ದಾರೆ ಎನ್ನುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ರಾಜಕೀಯ ರಂಗದಲ್ಲಿ ಬೀರುಗಾಳಿ ಎಬ್ಬಿಸಿದೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪರಮಾಪ್ತ ಶಿಷ್ಯ ಮತ್ತು ಕಾಂಗ್ರೆಸ್ ಪಕ್ಷದ ತುಮಕೂರು ಸಾಮಾಜಿಕ ಜಾಲತಾಣದ ಸಂಚಾಲಕ ದರ್ಶನ್ ಎಂಬುವರು ಮತ್ತೂಬ್ಬ ಕಾಂಗ್ರೆಸ್ ಕಾರ್ಯಕರ್ತನ ಜತೆಗೆ ಮಾತನಾಡಿರುವ ಈ ಆಡಿಯೋ ಈಗ ವೈರಲ್ ಆಗಿದೆ.
ತುಮಕೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರು ಸ್ಪರ್ಧಿಸುವುದು ಖಚಿತ ಎನ್ನುವ ಮಾಹಿತಿ ಬರುತ್ತಲೇ ಇವರು ಬಂಡಾಯದ ಬಾವುಟ ಹಾರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಪಕ್ಷದ ವರಿಷ್ಠರ ಮಾತಿಗೆ ಕಟ್ಟು ಬಿದ್ದು, ನಾಮಪತ್ರ ವಾಪಸ್ ಪಡೆದಿದ್ದರು.
ಇವರು ಕಣದಿಂದ ಹಿಂದಕ್ಕೆ ಸರಿಯಲು ಮೂರೂವರೆ ಕೋಟಿ ರೂ.ಪಡೆದಿದ್ದಾರೆ. ಆದರೂ, ಗೌಡರ ಪರ ಅವರು ಪ್ರಚಾರ ಮಾಡಲಿಲ್ಲ. ದೇವೇಗೌಡರು ಗೆದ್ದ ನಂತರ ಪರಮೇಶ್ವರ್ ಸಿಎಂ ಆಗುತ್ತಾರೆ. ಎಚ್.ಡಿ.ರೇವಣ್ಣ ಉಪಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳು ಈ ಆಡಿಯೋದಲ್ಲಿವೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಸೆಲ್ಫಿ ವಿಡಿಯೋ ಹರಿಬಿಟ್ಟು ಸ್ಪಷ್ಟನೆ ನೀಡಿರುವ ದರ್ಶನ್, ಕಾರ್ಯಕರ್ತರು ಹೀಗೆ ಮಾತನಾಡಿರಬಹುದು ಎಂದು ಗೆಳೆಯನ ಬಳಿ ಹೇಳಿದ್ದೇನೆ ಅಷ್ಟೆ. ಆದರೆ, ಯಾರೂ ಹಣ ಪಡೆದಿಲ್ಲ. ಇದೊಂದು ಕುತಂತ್ರ ಎಂದಿದ್ದಾರೆ.
ಈ ಮಧ್ಯೆ, ಸುದ್ದಿ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕನಾಗಿದ್ದ ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದರ್ಶನ್ ಎಂಬಾತ ಯಾರು ಎನ್ನುವ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ. ಪಕ್ಷದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆ ನೀಡಿದ್ದರೆ ಪ್ರತಿಕ್ರಿಯೆ ನೀಡಬಹುದು. ಅವನು ಯಾರೋ, ಎಲ್ಲಿಯೋ ಮಾತನಾಡಿದ್ದನ್ನೇ ವೈಭವಿಕರಿಸುವುದು ಸರಿ ಕಾಣುವುದಿಲ್ಲ.
-ಎಸ್.ಆರ್.ಶ್ರೀನಿವಾಸ್, ಸಣ್ಣ ಕೈಗಾರಿಕಾ ಸಚಿವ.
ಮಧುಗಿರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಪರಮೇಶ್ವರ್, ಸಿದ್ದು, ದೇವೇಗೌಡರ ಸಮ್ಮುಖದಲ್ಲಿ, ಮಧುಗಿರಿ ದಂಡಿನ ಮಾರಮ್ಮನ ಸನ್ನಿಧಾನದಲ್ಲಿಯೇ ನಾವು ಯಾವುದೇ ಡೀಲ್ಗೆ ಒಳಗಾಗಿ ನಾಮಪತ್ರ ವಾಪಸ್ ಪಡೆದಿಲ್ಲ ಎಂದು ಹೇಳಿದ್ದೇನೆ. ಈಗ ಇಂತಹ ಚಿಲ್ಲರೆ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಯಾರು ಎಂಬುದು ಜನರಿಗೆ ಗೊತ್ತಿದೆ.
-ಎಸ್.ಪಿ.ಮುದ್ದಹನುಮೇಗೌಡ.
ಮುದ್ದಹನುಮೇಗೌಡ, ರಾಜಣ್ಣ ಅಂತವರಲ್ಲ. ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದು, ಸ್ಥಾನಮಾನ ಗಳಿಸಿದ್ದಾರೆ. ದರ್ಶನ್ ಎನ್ನುವ ಹುಡುಗ ನನ್ನ ಜತೆಗೆ ಓಡಾಡುತ್ತಿದ್ದ ಅಷ್ಟೇ. ಯಾವುದೇ ಪುರಾವೆಯಿಲ್ಲದೆ ಇಂತಹ ಆರೋಪ, ಗೊಂದಲ ಸೃಷ್ಟಿಸುವುದು ಸರಿಯಲ್ಲ. ದರ್ಶನ್ ವಿರುದ್ಧ ಕ್ರಮ ಕೈಗೊಳ್ಳಬೇಕು.
-ಪರಮೇಶ್ವರ್, ಉಪಮುಖ್ಯಮಂತ್ರಿ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.