Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಎಪಿಎಂಸಿ ಕಾರ್ಯದರ್ಶಿಗೆ ಮನವಿ
Team Udayavani, Sep 17, 2024, 5:51 PM IST
ಸಾಗರ: ಅಡಿಕೆ ಮಾರುಕಟ್ಟೆಯಲ್ಲಿ ಕಳಪೆ ಹಾಗೂ ಕಲಬೆರಕೆ ಅಡಕೆ ಬರುತ್ತಿದ್ದು, ಮಲೆನಾಡಿನ ಗುಣಮಟ್ಟದ ಅಡಿಕೆ ತನ್ನ ಬೆಲೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕಲಬೆರಕೆ ಅಡಿಕೆ ಮಾರಾಟಗಾರರ ಮತ್ತು ಮಿಶ್ರಣ ಮಾಡಿ ಅಡಿಕೆ ಗುಣಮಟ್ಟ ಹಾಳು ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಎಪಿಎಂಸಿ ಕಾರ್ಯದರ್ಶಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಕ್ರಮವಾಗದಿದ್ದರೆ ಸಂಘದಿಂದ ಪ್ರತಿಭಟನೆ:
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಮಲೆನಾಡು ಭಾಗದಲ್ಲಿ ಸಾಂಪ್ರದಾಯಿಕ ಅಡಿಕೆ ಬೆಳೆಗಾರರಿದ್ದು, ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ತರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕಲಬೆರಕೆ ಹಾಗೂ ಕಳಪೆ ಅಡಿಕೆ ಮಾರುಕಟ್ಟೆಗೆ ವ್ಯಾಪಕವಾಗಿ ಪ್ರವೇಶವಾಗುತ್ತಿದೆ. ಕೆಲವು ಮಧ್ಯವರ್ತಿಗಳು ಅಡಿಕೆ ಕಲಬೆರೆಕೆ ಮೂಲಕ ಅಡಿಕೆಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಅಡಿಕೆಗೆ ಬಣ್ಣ ಹಾಕಿ ಉತ್ತಮ ಅಡಿಕೆ ಜೊತೆ ಸೇರಿಸಿ ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಇದರಿಂದ ಅಡಿಕೆ ಸೇವನೆ ಮಾಡುವವರ ಆರೋಗ್ಯವೂ ಹದಗೆಡುತ್ತಿದೆ. ಯಾರು ಕಲಬೆರಕೆ ಮಾಡುತ್ತಿದ್ದಾರೋ ಅವರನ್ನು ಬಂಧಿಸಿ. ಮುಂದಿನ 10-15 ದಿನಗಳಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೆಳೆಗಾರರ ಸಂಘ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಡಿಕೆ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ:
ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಅಡಿಕೆ ಬೆಳೆಗಾರರ ರಕ್ಷಿಸುವುದು ನಮ್ಮ ಕರ್ತವ್ಯ. ಅಡಿಕೆ ಕಲಬೆರೆಕೆಯಿಂದ ಬೆಳೆಗಾರರ ಹೆಸರು ಹಾಳಾಗುವ ಜೊತೆಗೆ ಅಡಿಕೆ ಗುಣಮಟ್ಟ ಕೆಡುತ್ತಿದೆ. ಕೆಲವು ಮಧ್ಯವರ್ತಿಗಳ ಕೃತ್ಯದಿಂದಾಗಿ ಅಡಿಕೆ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ತಕ್ಷಣ ಅಧಿಕಾರಿಗಳು ಅಡಿಕೆಗೆ ಬಣ್ಣ ಮಿಶ್ರಣ ಮಾಡುವವರು ಮತ್ತು ಕಳಪೆ ಅಡಿಕೆ ಮಿಶ್ರಣ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮುಲಾಜಿಲ್ಲದೆ ಕ್ರಮ: ಎಪಿಎಂಸಿ ಕಾರ್ಯದರ್ಶಿ
ಮನವಿ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಕಾರ್ಯದರ್ಶಿ ನಿಜಲಿಂಗಪ್ಪ ತೋಟದ್, ಅಡಿಕೆಗೆ ಬಣ್ಣ ಮಿಶ್ರಣ ಮತ್ತು ಕಳಪೆ ಅಡಕೆ ಬೆರೆಸುವವರ ಬಗ್ಗೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು. ಅಂತಹ ಪ್ರಕರಣ ಕಂಡು ಬಂದಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಡಕೆ ಕಳಪೆ ಬಗ್ಗೆ ಮಾಹಿತಿ ಇದ್ದವರು 9008063378ಗೆ ಕರೆ ಮಾಡಲು ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ಎಸ್.ಗಿರಿ, ಹಿರಿಯ ಸಹಕಾರಿ ಯು.ಎಚ್.ರಾಮಪ್ಪ ಮಾತನಾಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ರವಿಕುಮಾರ್ ಎಚ್.ಎಂ., ಅಡಿಕೆ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ಭೀಮನಕೋಣೆ ಪ್ಯಾಕ್ಸ್ ಅಧ್ಯಕ್ಷ ರಾಜೇಶ್ ಕೆ.ಕೆ., ವರುಣ ಹೆಗಡೆ, ವೆಂಕಟಗಿರಿ ಕುಗ್ವೆ, ವೆಂಕಟೇಶ್, ನಾಗಾನಂದ, ರಾಜಶೇಖರ ಹಂದಿಗೋಡು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.