Sagara: ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಕುಟುಕುವ ಚೇಳಿನ ಬುದ್ಧಿ
ಸಾಗರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ವ್ಯಂಗ್ಯ
Team Udayavani, Jul 10, 2024, 8:48 PM IST
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರದ್ದು ಚೇಳಿನ ಬುದ್ಧಿ. ತನಗೆ ಸಹಾಯ ಮಾಡಿದವರಿಗೂ ಕುಟುಕುವ ಬುದ್ಧಿ ಹೊಂದಿರುವ ಬೇಳೂರು ಚುನಾವಣೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕಾಗೋಡು ತಿಮ್ಮಪ್ಪ ಅವರನ್ನೂ ಬಿಟ್ಟಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡವರ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಈ ಚೇಳಿನ ಕೈನಲ್ಲಿ ಹಿಂದೆ ನಾವೆಲ್ಲಾ ಕುಟುಕಿಸಿಕೊಂಡಿದ್ದೇವೆ. ಸರ್ಕಾರ ಕಾಗೋಡು ತಿಮ್ಮಪ್ಪ ಅವರ ಸ್ವಾಧೀನದಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಜಾಗ ಮಂಜೂರು ಮಾಡಿದೆ.
ಗೋಪಾಲಕೃಷ್ಣ ಬೇಳೂರು ತಾವು ಗೆದ್ದ ನಂತರ ಆ ಜಾಗ ವಶಕ್ಕೆ ಪಡೆಯುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಿಂದೆ ಕಂಸ, ಧ್ವಂಸ ಎಂದು ಕಾಗೋಡು ತಿಮ್ಮಪ್ಪರನ್ನು ಟೀಕಿಸಿದ್ದರು. ಆದರೂ ಕಾಗೋಡು ತಿಮ್ಮಪ್ಪ ಅವರು ಬೇಳೂರು ಗೆಲುವಿಗೆ ಶ್ರಮಿಸಿದ್ದಾರೆ. ಅಂತಹವರ ಕಾಲೇಜಿಗೆ ಸರ್ಕಾರ ನೀಡಿದ ಜಾಗವನ್ನು ವಾಪಸ್ ಪಡೆಯಿರಿ ಎಂದು ಪತ್ರ ಬರೆದಿರುವ ದಾಖಲೆ ನನ್ನ ಬಳಿ ಇದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಪಕ್ಷದ ಪ್ರಮುಖರು ಮಾಡಬೇಕು ಎಂದರು.
ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ:
ಅಭಿವೃದ್ಧಿ ವಿಷಯವಾಗಿ ಹಣ ತಂದಿದ್ದು ತಾವೇ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಅವರು ಅಭಿವೃದ್ಧಿಗೆ ಯಾವ ರೀತಿ ಹಣ ತಂದಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುತ್ತದೆ. ಪಕ್ಷದ ಮುಖಂಡರು ಕಾರ್ಯಕರ್ತರು ಯಾವುದಕ್ಕೂ ಹಿಂದೆ ಸರಿಯದೆ ಪಕ್ಷ ಸಂಘಟನೆಗೆ ತೊಡಗಿಕೊಳ್ಳಬೇಕು. ಮುಂದಿನ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಾ. ರಾಜನಂದಿನಿ, ಗಣೇಶಪ್ರಸಾದ್, ದೇವೇಂದ್ರಪ್ಪ ಯಲಕುಂದ್ಲಿ, ಮಧುರಾ ಶಿವಾನಂದ್, ವಿ.ಮಹೇಶ್, ಜನಾರ್ದನ ಉಡುಪ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.