ಪೊಲೀಸರ ಕಾರ್ಯಾಚರಣೆ : 2.70 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ವಶ, ಓರ್ವನ ಬಂಧನ


Team Udayavani, Apr 13, 2022, 9:23 PM IST

ಪೊಲೀಸರ ಕಾರ್ಯಾಚರಣೆ : 2.70 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ವಶ, ಓರ್ವನ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರದ ವಿವಿಧ ಕಡೆಗಳಲ್ಲಿನ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು 2.70 ಲಕ್ಷ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ಸಹಿತ ಓರ್ವ ಆರೋಪಿಯನ್ನು ಬುಧವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸೊರಬ ತಾಲೂಕಿನ ಉಳವಿ ಗ್ರಾಮದ ಚಂದ್ರ ಬಳೆಗಾರ್ ಯಾಣೆ ಚಂದ್ರ (28) ಬಂಧಿತ ಆರೋಪಿಯಾಗಿದ್ದಾನೆ. ನಗರ ಹಾಗೂ ಗ್ರಾಮಾಂತರದಲ್ಲಿ ಮನೆ ಕಳ್ಳತನ ಪ್ರಕರಣ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ ರಚಿಸಲಾಗಿದ್ದ ಇಲ್ಲಿನ ಪೊಲೀಸರ ವಿಶೇಷ ತಂಡ ಕಾರ‍್ಯಾಚರಣೆ ನಡೆಸುತ್ತಿದ್ದ ವೇಳೆ ಏ. 11ರಂದು ಕಳ್ಳತನ ಮಾಡುತ್ತಿದ್ದ ಸಂದರ್ಭ ವಶಕ್ಕೆ ಪಡೆದುಕೊಂಡಿದೆ.

ವಿಚಾರಣೆಯ ವೇಳೆ ಬಂಧಿತ ಆರೋಪಿಯು ನಗರದಲ್ಲಿ 2 ಹಾಗೂ ಗ್ರಾಮಾಂತರದ ಗೌತಮಪುರ ಭಾಗದಲ್ಲಿ 1 ಸೇರಿದಂತೆ ಒಟ್ಟು 3 ಕಡೆಗಳಲ್ಲಿನ ಮನೆಕಳ್ಳತನ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಆರೋಪಿಯಿಂದ 2.50 ಲಕ್ಷ ಮೌಲ್ಯದ ಅಂದಾಜು 2 ಕೆಜಿಯಷ್ಟು ಬೆಳ್ಳಿ ಆಭರಣಗಳನ್ನು ಹಾಗೂ 20 ಸಾವಿರ ರೂ ಮೌಲ್ಯದ ಬಂಗಾರದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳ್ಳತನ ಕೃತ್ಯಕ್ಕೆ ಬಳಸಲಾಗಿದ್ದ 90 ಸಾವಿರ ರೂ. ಮೌಲ್ಯದ ದ್ವಿಚಕ್ರವಾಹನವನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ : ಯುಪಿಯಲ್ಲಿ ಶಾಂತಿಯುತ ರಾಮನವಮಿ: ಗಲಭೆಗಳಿಗೆ ಸ್ಥಳವಿಲ್ಲ ಎಂದ ಯೋಗಿ

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಕಾರಿ ಲಕ್ಷ್ಮಿ ಪ್ರಸಾದ್, ಎಎಸ್‌ಪಿ ವಿಕ್ರಮ ಅಮತೆ ಮಾರ್ಗದರ್ಶನದಲ್ಲಿ ಎಎಸ್‌ಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ಕಾರ‍್ಯಾಚರಣೆ ನಡೆಸಿದ್ದ ವಿಶೇಷ ತಂಡದಲ್ಲಿ ನಗರ ಪೊಲೀಸ್ ಠಾಣಾ ಪ್ರಭಾರ ಸಿಪಿಐ ಕೆ.ವಿ.ಕೃಷ್ಣಪ್ಪ, ಕಾರ್ಗಲ್ ಪೊಲೀಸ್ ಇನ್‌ಸ್ಪೆಕ್ಟರ್ ಜಿ.ತಿರುಮಲೇಶ್, ಪಿಎಸ್‌ಐ ಟಿ.ಡಿ. ಸಾಗರಕರ್, ಪೊಲೀಸ್ ಅಪರಾಧ ವಿಭಾಗದ ಸಿಬ್ಬಂದಿ ರತ್ನಾಕರ, ಸಂತೋಷ ನಾಯ್ಕ್, ಅಶೋಕ, ಹಝರತ್ ಅಲಿ, ಶ್ರೀಧರ್ ಇದ್ದರು.

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.