![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 27, 2023, 7:39 AM IST
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳು ಉದ್ಭವಗೊಂಡಿವೆ. ಆದ್ದರಿಂದ ಪ್ರಶ್ನೆಗಳಿಗೆ ಸಮಂಜಸ ಹಾಗೂ ಸೂಕ್ತ ಉತ್ತರ ಪಡೆಯಲು ಮತ್ತು ತರ್ಕಬದ್ಧ ನಿರ್ಣಯವನ್ನು ತೆಗೆದುಕೊಳ್ಳಲು ಸಂಸತ್ಗೆ ಅವಕಾಶ ಮಾಡಿಕೊಡುವಂತೆ ಕೇಂದ್ರಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠಕ್ಕೆ, ಕೇಂದ್ರ ಸರ್ಕಾರ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಮನವಿ ಮಾಡಿದ್ದಾರೆ. ಸುಪ್ರೀಂ ವ್ಯವಹರಿಸುತ್ತಿರುವ ಈ ವಿಚಾರವು ತೀರಾ ಸೂಕ್ಷ್ಮವಾಗಿದೆ. ಮಾತ್ರವಲ್ಲದೇ, ಸಮಾಜದ ಮೇಲೆ ತೀವ್ರತರದ ಪರಿಣಾಮವನ್ನೂ ಬೀರುತ್ತದೆ. ಮುಖ್ಯವಾಗಿ ಮದುವೆ ಎಂದರೇನು? ಯಾರ ನಡುವೆ ನಡೆಯುತ್ತದೆ? ಎಂಬುದೇ ಪ್ರಶ್ನೆಯಾಗಿದೆ. ಈ ಸಂಬಂಧಿಸಿದಂತೆ ಸಮಾಜದಲ್ಲಿ ಮತ್ತು ವಿವಿಧ ರಾಜ್ಯಗಳ ಸದನಗಳಲ್ಲಿ ಚರ್ಚೆಯ ಅಗತ್ಯವಿರುವ ಹಿನ್ನೆಲೆ ಸಂಸತ್ತಿನಲ್ಲಿ ಈ ವಿಚಾರದ ನಿರ್ಣಯಕ್ಕೆ ಅನುವು ಮಾಡಿಕೊಡಬೇಕು ಎಂದು ಕೋರಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.