![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 10, 2022, 4:50 PM IST
ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಖಳ ನಟ, ನಿರ್ಮಾಪಕ ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75ವರ್ಷ) ಅವರು ಮೈಸೂರಿನ ನಿವಾಸದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಬಿಜೆಪಿ ಮುಖಂಡ ಬಗ್ಗಾಗೆ ರಿಲೀಫ್; ಜುಲೈ 5ರವರೆಗೆ ಬಂಧಿಸಬೇಡಿ-ಪಂಜಾಬ್, ಹರ್ಯಾಣ ಹೈಕೋರ್ಟ್
ಇತ್ತೀಚೆಗಷ್ಟೇ ಲಘು ಹೃದಯಾಘಾತಕ್ಕೊಳಗಾಗಿದ್ದ ಮಂಜುಳಾ ಶಂಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆ್ಯಂಜಿಯೋಗ್ರಾಮ್ ಮಾಡಿಸಲಾಗಿತ್ತು. ನಂತರ ಬೈಪಾಸ್ ಶಸ್ತ್ರಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದರು ಎಂದು ವರದಿ ಹೇಳಿದೆ.
ಇಂದು ಮೈಸೂರಿನ ವಿಜಯನಗರ ನಿವಾಸದಲ್ಲಿ ಮಂಜುಳಾ ಶಂಕರ್ ಅವರು ಹೃದಯಾಘಾತದಿಂದ ನಿಧನರಾದರು. ವಿದ್ಯಾರಣ್ಯಪುರಂನ ಸಿ.ಎಸ್. ಫಾರ್ಮ್ ನಲ್ಲಿ ಮಂಜುಳಾ ಶಂಕರ್ ಅವರ ಅಂತ್ಯಕ್ರಿಯೆ ನಡೆಯಿತು ಎಂದು ವರದಿ ತಿಳಿಸಿದೆ.
ಎಂಪಿ ಶಂಕರ್ ಅವರು ಸತ್ಯ ಹರಿಶ್ಚಂದ್ರ, ಶನಿ ಪ್ರಭಾವ, ಬಂಗಾರದ ಮನುಷ್ಯ, ಗಂಧದ ಗುಡಿ, ಭೂತಯ್ಯನ ಮಗ ಅಯ್ಯು ಸೇರಿದಂತೆ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಸತ್ಯ ಹರಿಶ್ಚಂದ್ರ ಸಿನಿಮಾದಲ್ಲಿನ ವೀರಬಾಹು ಪಾತ್ರ ಎಂಪಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಎಂಪಿ ಶಂಕರ್ ಅವರು 2008ರ ಜುಲೈ 17ರಂದು ಮೈಸೂರಿನ ನಿವಾಸದಲ್ಲಿ ವಿಧಿವಶರಾಗಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.