Mumbai: ಮಾನನಷ್ಟ ಮೊಕದ್ದಮೆ ಪ್ರಕರಣ-ಸಂಜಯ್ ರಾವತ್ ಗೆ 15 ದಿನ ಸಾದಾ ಜೈಲುಶಿಕ್ಷೆ
ಬಿಜೆಪಿ ಮುಖಂಡ ಕಿರಿತ್ ಸೋಮೈಯಾ ಪತ್ನಿ ಮೇಧಾ ಸೋಮೈಯಾ ದೂರು
Team Udayavani, Sep 26, 2024, 1:07 PM IST
ಮುಂಬೈ: ಬಿಜೆಪಿ ಮುಖಂಡ ಕಿರಿತ್ ಸೋಮೈಯಾ (Kirit Somaiya) ಪತ್ನಿ ಮೇಧಾ ಸೋಮೈಯಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂಬೈ ಕೋರ್ಟ್ (Mumbai Court) ಶಿವಸೇನಾ (UBT) ಸಂಸದ ಸಂಜಯ್ ರಾವತ್ ಗೆ ಸಾದಾ 15 ದಿನಗಳ ಜೈಲುಶಿಕ್ಷೆ ವಿಧಿಸಿದೆ.
ರಾಜ್ಯಸಭಾ ಸದಸ್ಯ ರಾವತ್ ಗೆ ಭಾರತೀಯ ದಂಡ ಸಂಹಿತೆ (IPC) ಕಲಂ 500 ಅಡಿ (ಮಾನನಷ್ಟ ಶಿಕ್ಷೆ) ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೋಷಿ ಎಂದು ತೀರ್ಪು ನೀಡಿ, 25,000 ಸಾವಿರ ರೂ. ದಂಡ ವಿಧಿಸಿದೆ.
ನನ್ನ ಹಾಗೂ ನನ್ನ ಗಂಡನ ವಿರುದ್ಧ ಸಂಜಯ್ ರಾವತ್ ಆಧಾರರಹಿತ ಆರೋಪ ಮಾಡಿದ್ದು, ಅವರ ಆರೋಪ ಸಂಪೂರ್ಣವಾಗಿ ಮಾನನಷ್ಟ ಪ್ರಕರಣವಾಗಿದೆ ಎಂದು ಮೇಧಾ ಸೋಮೈಯಾ ವಕೀಲರಾದ ವಿವೇಕಾನಂದ ಗುಪ್ತಾ ಮೂಲಕ ದೂರು ದಾಖಲಿಸಿದ್ದರು.
ಮೀರಾ ಭಯಾಂದರ್ ಮುನ್ಸಿಪಲ್ ಕಾರ್ಪೋರೇಶನ್ ವ್ಯಾಪ್ತಿಯಲ್ಲಿನ ಕೆಲವು ಸಾರ್ವಜನಿಕ ಶೌಚಾಲಯದ ನಿರ್ಮಾಣ ಹಾಗೂ ಕಾರ್ಯನಿರ್ವಹಣೆಯಲ್ಲಿ ನೂರು ಕೋಟಿ ರೂಪಾಯಿಗೂ ಅಧಿಕ ಹಗರಣದಲ್ಲಿ ಮೇಧಾ ಶಾಮೀಲಾಗಿರುವುದಾಗಿ ರಾವತ್ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.