ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಆಸ್ಪತ್ರೆಯಲ್ಲಿ ಪತ್ತೆಯಾಗಿತ್ತು.
Team Udayavani, Oct 7, 2024, 3:17 PM IST
ನವದೆಹಲಿ: ಕೋಲ್ಕತಾದ ಆರ್ ಜಿ ಕರ್ ಆಸ್ಪತ್ರೆಯ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾ*ಚಾರ ಎಸಗಿ, ಕೊ*ಲೆಗೈದಿದ್ದು, ಸಾಮೂಹಿಕ ಅತ್ಯಾಚಾರ ಆರೋಪವನ್ನು ಸಿಬಿಐ(CBI) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ತಿಳಿಸಿದೆ.
ಕೋಲ್ಕತಾ ಪೊಲೀಸರು ಸಂಜಯ್ ರಾಯ್ ನನ್ನು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಬಳಸಿಕೊಂಡಿದ್ದು, ಈತನೇ ವೈದ್ಯೆಯ ಮೇಲೆ ಅತ್ಯಾ*ಚಾರ ನಡೆಸಿ ಕೊಂದಿರುವುದಾಗಿ ಸಿಬಿಐ ಸೋಮವಾರ (ಅ.07) ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ಕೇಂದ್ರ ತನಿಖಾ ದಳ ಸಿಬಿಐ ಎರಡು ತಿಂಗಳೊಳಗೆ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ್ದು, ಇಂದು ಅಡಿಷನಲ್ ಚೀಫ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್ ಶೀಟ್ ವರದಿಯನ್ನು ಸಲ್ಲಿಸಿರುವುದಾಗಿ ವರದಿಯಾಗಿದೆ.
ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಆಸ್ಪತ್ರೆಯಲ್ಲಿ ಪತ್ತೆಯಾಗಿತ್ತು. ಈ ಘಟನೆ ಬಗ್ಗೆ ದೇಶವ್ಯಾಪಿ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು. ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ ನೀಡಿತ್ತು.
ಸಾರ್ವಜನಿಕ ಆಕ್ರೋಶ, ಪ್ರತಿಭಟನೆ ಮಣಿದ ಕೋಲ್ಕತಾ ಪೊಲೀಸರು ಸಂಜಯ್ ರಾಯ್ ನನ್ನು ಬಂಧಿಸಿದ್ದು, ನಂತರ ಕೋಲ್ಕತಾ ಪೊಲೀಸರು ಪ್ರಕರಣದ ಕುರಿತ ಸಾಕ್ಷ್ಯ ಹಾಗೂ ಆರೋಪಿ ಸಂಜಯ್ ರಾಯ್ ನನ್ನು ಸಿಬಿಐಗೆ ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್: ದೂರು ದಾಖಲು, ಆರೋಪಿ ಪರಾರಿ!
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ
Jangal Mangal Movie: ಜಂಗಲ್ನಲ್ಲಿ ಮಂಗಲ್ ಲವ್ ಸ್ಟೋರಿ
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.