![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 7, 2020, 5:45 AM IST
ಬೆಂಗಳೂರು: ಶಾಲೆ ಮತ್ತು ಪಿಯು ಕಾಲೇಜು ಆರಂಭಕ್ಕೆ ಸಂಬಂಧಿಸಿ ಸರಕಾರವು ವಿಧಾನಮಂಡಲ ಅಧಿವೇಶನದ ಬಳಿಕ ನಿರ್ಧಾರ ತೆಗೆದುಕೊಳ್ಳಲಿದೆ.
ಶಾಲೆ ಮತ್ತು ಪಿಯುಸಿ ತರಗತಿಗಳನ್ನು ಹಂತ ಹಂತ ವಾಗಿ ಆರಂಭಿಸಬಹುದು ಎಂದು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಈಗಾಗಲೇ ಶಿಫಾರಸು ಮಾಡಿದೆ. ಆದರೆ ಡಿಸೆಂಬರ್ ಮೂರನೇ ವಾರದಲ್ಲಿ ಅದು ಮತ್ತೆ ಸಭೆ ಸೇರಿ ಇನ್ನೊಮ್ಮೆ ಶಿಫಾರಸು ಸಲ್ಲಿಸಲಿದೆ. ಅದರ ಆಧಾರದಲ್ಲಿ ವಿವಿಧ ಇಲಾಖೆಗಳ ಸಭೆ ಕರೆದು, ಶಾಲಾರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶಾಲಾರಂಭ ವಿಚಾರ ಅಧಿವೇಶನದಲ್ಲೂ ಚರ್ಚೆ ಆಗುವ ಸಾಧ್ಯತೆಯಿದೆ. ವಿದ್ಯಾಗಮವನ್ನು ನ್ಯೂನತೆ ಸರಿಪಡಿಸಿ ಅನುಷ್ಠಾನ ಮಾಡಲಿದ್ದೇವೆ ಎಂಬ ಅಂಶವನ್ನು ಸರಕಾರವು ವಿಪಕ್ಷಗಳಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ.
ಅಧಿವೇಶನ ಮುಗಿಯುತ್ತಿದ್ದಂತೆ ಸಿಎಂ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಿದ್ದಾರೆ. ಈ ವೇಳೆ ಕೊರೊನಾ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಡೆಯಲಿದ್ದಾರೆ. ಕೊರೊನಾ ಎರಡನೇ ಅಲೆಯಿಂದ ಶಾಲಾರಂಭಕ್ಕೆ ಸಮಸ್ಯೆಯಾಗದು ಎಂಬ ಬಗ್ಗೆ ಖಚಿತಗೊಂಡ ಬಳಿಕ ನಿರ್ಧಾರ ಘೋಷಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.