Assault on Women: ರೇವಣ್ಣ, ಪ್ರಜ್ವಲ್‌ ಲೈಂಗಿಕ ಕಿರುಕುಳ ನಿಜ: ಚಾರ್ಜ್‌ಶೀಟ್‌

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ಪೂರ್ಣ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ 2144 ಪುಟದ ಚಾರ್ಜ್‌ಶೀಟ್‌

Team Udayavani, Aug 24, 2024, 6:45 AM IST

Revanna

ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್‌ ರೇವಣ್ಣ, ವಿಶೇಷ ತನಿಖಾ ತಂಡವು (ಎಸ್‌ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 2,144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಎಸ್‌ಐಟಿ ತನಿಖಾಧಿಕಾರಿ ಬಿ. ಸುಮರಾಣಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ 150 ಸಾಕ್ಷಿದಾರರನ್ನು ಒಳಗೊಂಡಿರುವ 2,144 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದರು. ರೇವಣ್ಣ ಹಾಗೂ ಪ್ರಜ್ವಲ್‌ ವಿರುದ್ಧದ ಮೊದಲ ಚಾರ್ಜ್‌ಶೀಟ್‌ ಇದಾಗಿದೆ.

ರೇವಣ್ಣ ಮೇಲಿನ ದೋಷಾರೋಪಣೆ
ಹೊಳೆನರಸೀಪುರದ ಹಿಂದುಳಿದ ವರ್ಗಗಳ ಮೆಟ್ರಿಕ್‌ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಪ್ರಕರಣದ ಸಂತ್ರಸ್ತೆ ಹಾಗೂ ಸಾಕ್ಷಿ-1 ನೇಮಿಸಲ್ಪಟ್ಟಿದ್ದರು. ಸಂತ್ರಸ್ತೆ ಹಾಸ್ಟೆಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗಲೂ ಎಚ್‌.ಡಿ.ರೇವಣ್ಣ ತಮ್ಮ ಪತ್ನಿ ಭವಾನಿ ರೇವಣ್ಣ ಶಿಫಾರಸಿನ ಮೇರೆಗೆ 2019ರಿಂದ 2022ರ ವರೆಗೆ ಮನೆ ಕೆಲಸಕ್ಕೆ ಸಂತ್ರಸ್ತೆಯನ್ನು ಬಳಸಿಕೊಂಡಿದ್ದರು.

2020ರಲ್ಲಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿಕೊಂಡು ರೇವಣ್ಣ, ಸಂತ್ರಸ್ತೆಯನ್ನು ತಮ್ಮ ಕೊಠಡಿಗೆ ಬಾರಮ್ಮ ಏಕೆ ಕೆಳಗೆ ಹೋಗುತ್ತೀಯ, ನಾನೇನು ಮಾಡಲ್ಲ ಬಾ ಎಂದು ಆಗಾಗ ಕರೆಯುತ್ತಿದ್ದರು. ಕೆಲಸದವರಿಗೆ ಹಣ್ಣು ಕೊಡುವ ನೆಪದಲ್ಲಿ ಮನೆಯ ಮೊದಲ ಮಹಡಿಯ ಸ್ಟೋರ್‌ ರೂಮ್‌ಗೆ ಕರೆಸಿಕೊಳ್ಳುತ್ತಿದ್ದರು.

ಒಬ್ಬೊಬ್ಬರಿಗೂ ಹಣ್ಣು ಕೊಟ್ಟು ರೂಮಿನಿಂದ ಹೊರಗಡೆ ಕಳುಹಿಸುತ್ತಿದ್ದರು. ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಕೊನೆಯಲ್ಲಿ ಹಣ್ಣು ಕೊಡಲೆಂದು ಇರಿಸಿಕೊಳ್ಳುತ್ತಿದ್ದರು. ಸಂತ್ರಸ್ತೆಯ ಇಚ್ಛೆಯ ವಿರುದ್ಧವಾಗಿ ಕೈಹಿಡಿದು ಎಳೆದು, ಅವರ ಮೈಕೈ ಮುಟ್ಟಿ, ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿ ಕೃತ್ಯ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ಉಲ್ಲೇಖೀಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇಲಿನ ದೋಷಾರೋಪ
ರೇವಣ್ಣ ಹಾಗೂ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿರುವ ಸಮಯದಲ್ಲಿ ಹೊಳೆನರಸೀಪುರದ ಮನೆಯ ಮೊದಲ ಮಹಡಿಯಲ್ಲಿ ಸಂತ್ರಸ್ತೆಯು ಕೆಲಸ ಮಾಡುತ್ತಿದ್ದಾಗ ಪ್ರಜ್ವಲ್‌ ರೇವಣ್ಣ ಸಂತ್ರಸ್ತೆಯ ಸೀರೆಯ ಸೆರಗನ್ನು ಎಳೆದಾಡುತ್ತಿದ್ದರು. ಅಡುಗೆ ಕೊಣೆಯಲ್ಲಿ ಇತರೇ ಕೆಲಸಗಾರರು ಇಲ್ಲದಿದ್ದಾಗ ಸಮಯ ನೋಡಿ ಲೈಂಗಿಕ ದುರುದ್ದೇಶದಿಂದ ಸಂತ್ರಸ್ತೆಯ ಹೊಟ್ಟೆ ಹಿಚುಕುವುದು, ತಬ್ಬಿಕೊಳ್ಳುವುದು, ಕಿವಿಯ ಹತ್ತಿರ ಬಾ ಎಂದು ಕರೆಯುತ್ತಿದ್ದರು. ಹಲವು ಬಾರಿ ಫೋನ್‌ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈಗ ನಡೆದಿರುವಂತಹ ವಿಚಾರ ಯಾರಿಗಾದರೂ ಬಾಯಿ ಬಿಟ್ಟರೆ ನಿನ್ನನ್ನು ಸಾಯಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

ಹಲವು ಮಹಿಳೆಯರ ವೀಡಿಯೋ ಮಾಡಿದ್ದ ಪ್ರಜ್ವಲ್‌
ಪ್ರಜ್ವಲ್‌ ರೇವಣ್ಣ ತಾಯಿ ಹಾಗೂ ಮಗಳ ಅರಿವಿಗೆ ಬಾರದಂತೆ ಅವರ ನಗ್ನ ದೇಹವನ್ನು ಅವರ ಒಪ್ಪಿಗೆ ಇಲ್ಲದೆಯೇ ವೀಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದೇ ಮಾದರಿಯಲ್ಲಿ ತಮ್ಮ ಪ್ರಭಾವ ಬಳಸಿ ಬೇರೆಬೇರೆ ಸಂತ್ರಸ್ತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆ ಸಮಯದಲ್ಲಿ ತಾನು ಬಳಸುತ್ತಿದ್ದ ಮೊಬೈಲ್‌ನಲ್ಲಿ ಅದೆಲ್ಲವನ್ನು ಚಿತ್ರೀಕರಿಸಿಕೊಂಡಿದ್ದಾರೆ.

ಈ ಮಾಹಿತಿ ಕ್ಷೇತ್ರದ ಜನರಲ್ಲಿ ಹರಡುತ್ತಿದ್ದಂತೆ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ವಿದೇಶಕ್ಕೆ ಪಲಾಯನಗೈದು ಮೊಬೈಲ್‌ ಸಾಕ್ಷ್ಯ ನಾಶಪಡಿಸಿದ್ದಾರೆ. ಈ ಹಿಂದೆಯೂ ಪ್ರಜ್ವಲ್‌ ತಾವು ಬಳಸಿದ್ದ ಫೋನ್‌ಗಳಲ್ಲಿ ವಿದ್ಯುನ್ಮಾನ ಸಾಕ್ಷಿಗಳನ್ನು ನಾಶ ಪಡಿಸಿರುವುದು ತನಿಖೆಯಲ್ಲಿ ಕಂಡು ಬಂದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಸಂತ್ರಸ್ತೆ ಮಗಳ ಮೇಲೂ ದೌರ್ಜನ್ಯ
ಪ್ರಜ್ವಲ್‌ ರೇವಣ್ಣ 2020-21ರಲ್ಲಿ ಮನೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯ ಮಗಳಿಗೆ ವಾಟ್ಸ್‌ಆ್ಯಪ್‌ ವೀಡಿಯೋ ಕರೆ ಮಾಡಿ ಎದೆಭಾಗ ತೋರಿಸುವಂತೆ ಒತ್ತಾಯಪಡಿಸಿದ್ದರು. ಸಂತ್ರಸ್ತೆಯ ಮಗಳು ನಿರಾಕರಿಸಿದಾಗ ತಾಯಿ ಮತ್ತು ನಿನ್ನ ಗಂಡನ ಮನೆಯವರಿಗೆ ನೀನು ನನ್ನ ಜತೆ ಸಂಬಂಧ ಇಟ್ಟುಕೊಂಡಿದ್ದೀಯ ಎಂದು ಹೇಳುವೆ ಅಂತ ಹೆದರಿಸಿದ್ದರು. ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಏನಿದೆ?
* ಪತ್ನಿ ಭವಾನಿ ಇಲ್ಲದಾಗ ಸಂತ್ರಸ್ತೆಯನ್ನು ಕೊಠಡಿಗೆ ಕರೆಯುತ್ತಿದ್ದ ಎಚ್‌.ಡಿ.ರೇವಣ್ಣ
* ಹಣ್ಣು ಕೊಡುವ ನೆಪದಲ್ಲಿ ಕೈಹಿಡಿದು ಎಳೆದು, ಮೈಕೈ ಮುಟ್ಟಿ ಲೈಂಗಿಕ ಕಿರುಕುಳ
* ರೇವಣ್ಣ, ಭವಾನಿ ಇಲ್ಲದಾಗ ಸಂತ್ರಸ್ತೆಯ ಸೀರೆ ಸೆರಗು ಎಳೆಯುತ್ತಿದ್ದ ಪ್ರಜ್ವಲ್‌
* ಬೆಂಗಳೂರಿನಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿಕೊಂಡಿರುವ ಪ್ರಜ್ವಲ್‌
* ಸಂತ್ರಸ್ತೆಯ ಮಗಳಿಗೂ ವಾಟ್ಸ್‌ಆ್ಯಪ್‌ ಕರೆ ಮಾಡಿ ಪ್ರಜ್ವಲ್‌ರಿಂದ ಲೈಂಗಿಕ ಕಿರುಕುಳ

ಪತ್ನಿ ಮನೆಯಲ್ಲಿಲ್ಲದಿದ್ದಾಗ ಸಂತ್ರಸ್ತೆಗೆ ರೇವಣ್ಣ ಕಿರುಕುಳ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸಕ್ಕೆ ಸಹಾಯಕರಾಗಿದ್ದ ಪ್ರಕರಣದ ಸಂತ್ರಸ್ತೆ ರೇವಣ್ಣ ಮನೆಯಲ್ಲೂ ಕೆಲಸ ಮಾಡುತ್ತಿದ್ದರು. 2020ರಲ್ಲಿ ಭವಾನಿ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿ ರೇವಣ್ಣ, ಸಂತ್ರಸ್ತೆಯನ್ನು ಉಪಾಯದಿಂದ ತಮ್ಮ ಕೊಠಡಿಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

gNagamangala ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.