Shiroor Hill Colapse: ಗಂಗಾವಳಿ ನದಿಯಲ್ಲಿ13 ದಿನದ ಶೋಧ ಕಾರ್ಯಾಚರಣೆ ಸದ್ಯಕ್ಕೆ ಸ್ಥಗಿತ

ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ: ಡಿಸಿ ಲಕ್ಷ್ಮೀಪ್ರಿಯಾ

Team Udayavani, Jul 28, 2024, 6:44 PM IST

Shiroor-stop

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ 13ನೇ ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಕಣ್ಮರೆಯಾದ ಮೂವರ ಬಗ್ಗೆಯೂ  ಸುಳಿವು ಸಿಕ್ಕಿಲ್ಲ. ಬೆಳಿಗ್ಗೆಯಿಂದ ಮುಳುಗು ತಜ್ಞರು ನಿರಂತರ ಕಾರ್ಯಾಚರಣೆ ಮಾಡಿದರೂ ಫಲ ನೀಡದ್ದರಿಂದ ಸಭೆ ನಡೆಸಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ.

ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ, ಎಸ್​ಪಿ, ನೌಕಾಪಡೆ ಮತ್ತು ಸೇನೆ ಸೇರಿ ಚರ್ಚೆ ನಡೆಸಿದ್ದು ಮುಂದೆ ಕಾರ್ಯಾಚರಣೆ ಮಾಡಬೇಕಾ? ಅಥವಾ ಇಂದಿಗೆ ಕಾರ್ಯಾಚರಣೆ ನಿಲ್ಲಿಸಬೇಕಾ? ಎಂಬ ಬಗ್ಗೆ ಕೇರಳ ಶಾಸಕರು, ಕಾರವಾರ ಶಾಸಕರು ಮತ್ತು ಅಧಿಕಾರಿಗಳು ಸಭೆ ನಡೆಸಿ ತೀರ್ಮಾನಿಸಿದ್ದಾರೆ. 13 ದಿನವೂ ಮೂವರು ಪತ್ತೆಯಾಗದ ಹಿನ್ನೆಲೆ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ.

ಮುಳುಗು ತಜ್ಞ ಈಶ್ವರ ಮಲ್ಪೆ ತಂಡವು ಶನಿವಾರ ಸ್ಥಳಕ್ಕಾಗಮಿಸಿ ಈ ತಂಡ ನೌಕಾಪಡೆ-ಭೂಸೇನಾ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಳಿ ಸಂಪೂರ್ಣ ಮಾಹಿತಿ ಹಾಗೂ ಡ್ರೋನ್‌ ಕಾರ್ಯಾಚರಣೆ ವರದಿ ಪಡೆದುಕೊಂಡು ಸ್ಥಳೀಯ ಮೀನುಗಾರರ ಸಹಾಯ ಪಡೆದು ಕಾರ್ಯಾಚರಣೆ ನಡೆಸಿತು.  ಅಪಾರ ಪ್ರಮಾಣದ ಕಲ್ಲು ಮಣ್ಣು ಬಂಡೆಯ ರಾಶಿ ಹೊರತು ಪಡಿಸಿ ಬೇರೆ ಏನೂ ಕಾಣದ ಹಿನ್ನೆಲೆ ಅನಿವಾರ್ಯವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

ಸಚಿವರ ಜೊತೆ ಚರ್ಚಿಸಿ ತೀರ್ಮಾನ: ಡಿಸಿ

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪ್ರತಿಕ್ರಿಯಿಸಿ ಕಾರ್ಯಾಚರಣೆಯ ಪ್ರಮುಖವಾಗಿ ಗುರುತಿಸಿರುವ 3-4 ಪಾಯಿಂಟ್‌ಗಳಲ್ಲಿ ಮುಳುಗು ತಜ್ಞರು ಶೋಧ ನಡೆಸಿದ್ದು, ಶೋಧದ ವೇಳೆ ಕಲ್ಲು, ಮಣ್ಣು, ಮರಗಳಷ್ಟೇ ದೊರೆತಿದೆ. ನೀರಿನ ರಭಸದಿಂದ ಹೆಚ್ಚು ಹೊತ್ತು ಇರಲಾಗದೇ ವಾಪಸ್‌ ಬಂದಿದ್ದಾರೆ. ಇನ್ನು ಮುಂದಿನ ಕಾರ್ಯಾಚರಣೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಕೆಸರು ನೀರಿನಿಂದ ಕಾರ್ಯಾಚರಣೆಗೆ ಹಿನ್ನಡೆ: 

ಈ ವಿಚಾರವಾಗಿ ಮಾತನಾಡಿದ ಮುಳುಗು ತಜ್ಞ ಈಶ್ವರ ಮಲ್ಪೆ ಈ ವರೆಗೆ ಕಾರ್ಯಾಚರಣೆಯಲ್ಲಿ ಎಲ್ಲೆಡೆಯೂ ಯಶಸ್ವಿಯಾಗಿಯೇ ಬಂದಿದ್ದೆವು.  ಆದರೆ ಗಂಗಾವಳಿ ನದಿಯ ಹರಿವು ರಭಸವಾಗಿ ಇದ್ದು, ನೀರು ಕಲುಷಿತವಾಗಿ ಕೆಸರು ಮಣ್ಣಿನಿಂದ ಕೂಡಿದೆ. ಸ್ಕೂಬಾ ಡೈವಿಂಗ್‌ ವೇಳೆ 40 ಅಡಿ ಆಳದಲ್ಲಿ ಬೆಂಜ್‌ ಲಾರಿ ಎಂದುಕೊಂಡಿದ್ದೆ ಆದರೆ ಆ ಬಳಿಕ ಗೊತ್ತಾಯಿತು ಆಲದ ಮರದ ಮಧ್ಯದ ಭಾಗವೆಂದು ತಿಳಿಯಿತು. ಇನ್ನು ಮುಂದೆ ಕಾರ್ಯಾಚರಣೆಗೆ ಕೆಸರು ನೀರು ತಿಳಿಯಾಗುವುದು ಅನಿವಾರ್ಯವಾಗಿದೆ ಎಂದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.