![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2021, 9:16 PM IST
ವಿಜಯಪುರ : ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ದೇಶಕ್ಕಾಗಿ ಹುತಾತ್ಮರಾದ ಅಮರ ವೀರಯೋಧ ಕಾಶಿರಾಯ ಬಮ್ಮನಹಳ್ಳಿ ಅವರ ತ್ಯಾಗ-ಬಲಿದಾನ ಇಂದಿನ ಯುವಶಕ್ತಿಗೆ ಮಾದರಿ ಆಗಿದೆ. ಅಮರವೀರನ ಈ ತ್ಯಾಗ ಆದರ್ಶ ಹಾಗೂ ಅನುಕರಣೀಯ ಎಂದು ಬಸವನಬಾಗೇವಾಡಿ ಶಾಸಕರಾದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಬಣ್ಣಿಸಿದರು.
ದೇಶಕ್ಕಾಗಿ ಬಲಿದಾನಗೈದ ಉಕ್ಕಲಿ ಗ್ರಾಮದಲ್ಲಿರುವ ಕಾಶಿರಾಯನ ಬಮ್ಮನಹಳ್ಳಿ ಅವರ ಮನೆಗೆ ತೆರಳಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 5 ಲಕ್ಷ ರೂ. ಆರ್ಥಿಕ ನೆರವು ನೀಡಿ ಮಾತನಾಡಿದ ಅವರು, ಉಕ್ಕಲಿ ಗ್ರಾಮದ ಹುತಾತ್ಮ ಕಾಶಿರಾಯ ಬೊಮ್ಮನಹಳ್ಳಿ ಅಮರರಾಗಿದ್ದಾರೆ. ಕಾಶಿರಾಯ ಅವರಂಥ ಅಪ್ರತಿಮ ವೀರಯೋಧನನ್ನು ಕಳೆದುಕೊಂಡ ಉಕ್ಕಲಿ ಗ್ರಾಮ ಮಾತ್ರವಲ್ಲ, ಇಡೀ ಭಾರತ ಮರುಗುತ್ತಿದೆ. ಅವರ ಬಲಿದಾನಕ್ಕೆ ದೇಶವೇ ಕಣ್ಣೀರು ಹಾಕುತ್ತಿದ್ದು, ಅಂಥ ಮಹಾನ್ ತ್ಯಾಗಿಯನ್ನು ಪಡೆದ ನಾವೇ ಧನ್ಯರು ಹಾಗೂ ಪುಣ್ಯವಂತರು ಎಂದು ಗುಣಗಾನ ಮಾಡಿದರು.
ಇದನ್ನೂ ಓದಿ :ಲ್ಯಾಂಡಿಂಗ್ ವೇಳೆ ರಷ್ಯಾ ವಿಮಾನ ಪತನ : ವಿಮಾನದಲ್ಲಿದ್ದ 28 ಮಂದಿ ಸಾವು
ಕುಟುಂಬಕ್ಕೆ ಆಸರೆಯಾಗಿದ್ದ ಕಾಶಿರಾಯ ಅವರನ್ನು ಕಳೇದುಕೊಂಡು ಕಣ್ಣಿರು ಹಾಕುತ್ತಿರುವ ಅವರ ಕುಟುಂಬಕ್ಕೆ ದೇವರು ಅಗಲಿಕೆಯ ದುಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದ ಶಿವಾನಂದ ಪಾಟೀಲ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಅಮರ ಯೋಧರ ಕುಟುಂಬಗಳಿಗೂ ಡಿಸಿಸಿ ಬ್ಯಾಂಕ್ ಸಹಾಯ ನೀಡಿತ್ತು. ಈಗಲೂ ಅದನ್ನು ಮುಂದುವರಿಸಿಕೊಂಡು ಬರಲಾಗಿದೆ ಎಂದು ವಿವರಿಸಿದರು.
ಇದಲ್ಲದೇ ಆರ್ಥಿಕವಾಗಿ ದುರ್ಬಲವಾಗಿರುವ ಹುತಾತ್ಮ ವೀರಯೋಧ ಕಾಶಿರಾಯ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಹೆಚ್ಚಿನ ನೆರವು ನೀಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಅಗತ್ಯ ಸೌಲಭ್ಯ ಕಲ್ಪಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗ್ರಾಮಸ್ಥರ ಬೇಡಿಕೆಯಂತೆ ಕಾಶಿರಾಯ ಅವರ ಹುತಾತ್ಮ ಸ್ಮಾರಕ ನಿರ್ಮಾಣಕ್ಕಾಗಿ ಶಾಸಕರ ಅನುದಾನದಲ್ಲಿ ಅಗತ್ಯ ಹಣ ಮಂಜೂರು ಮಾಡುವ ಕುರಿತು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ್ ಗುಡದಿನ್ನಿ, ನಿರ್ದೇಶಕರಾದ ಗುರುಶಾಂತ ನಿಡೋಣಿ. ಬ್ಯಾಂಕಿನ ಸಿಇಓ ಬಿರಾದಾರ, ಬ್ಯಾಂಕನ ಸಿಬ್ಬಂದಿಗಳು, ಊರಿನ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯರು, ಗ್ರಾಮದ ಜನತೆ, ಯೋಧರಾದ ಕಿಶನ್ ಹಾಗೂ ಇತರರು ಉಪಸ್ಥಿತರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.