![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 9, 2020, 3:00 PM IST
ಬೆಂಗಳೂರು : ಮಹತ್ವದ ಹಲವಾರು ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುವ ಅಗತ್ಯವಿರುವುದರಿಂದ ಇದೇ ತಿಂಗಳ 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಸಭೆ ಕಲಾಪದ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪತ್ರದ ವಿವರ ಹೀಗಿದೆ :
ಅಧಿವೇಶನದ ಅವಧಿಯನ್ನು ಸೆಪ್ಟೆಂಬರ್ 21 ರಿಂದ 30 ರವರೆಗೆ 15ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಈ ಪ್ರಕಟಣೆಯಂತೆ 21, 22, 23, 24, 25, 28, 29 ಮತ್ತು 30 ರವರೆಗೆ ಅಧಿವೇಶನವನ್ನು ನಡೆಸಲು ಉದ್ದೇಶಿಸಲಾಗಿದೆ. ಸದರಿ ಅಧಿವೇಶನದಲ್ಲಿ ಸುಮಾರು 20 ಕ್ಕಿಂತ ಹೆಚ್ಚು ಸುಗ್ರಿವಾಜ್ಞೆಗಳನ್ನು ಒಳಗೊಂಡಂತೆ 35 ಕ್ಕಿಂತ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಕರ್ನಾಟಕ ರಾಜ್ಯದ ಜನರು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪದೇ ಪದೇ ಪ್ರವಾಹಗಳು ಬಂದೆರಗುತ್ತಿದೆ. ಕಳೆದ ಮಾರ್ಚ್ನಿಂದ ಕೋವಿಡ್-19 ಸಾಂಕ್ರಾಮಿಕವು ಮಾರಣಾಂತಿಕವಾಗಿ ವ್ಯಾಪಿಸಿಕೊಂಡು ರಾಜ್ಯದ ಜನರ ಬದುಕನ್ನು ಹೈರಾಣಾಗಿಸಿದೆ ಮತ್ತು ಸುಮಾರು 6,500 ಕ್ಕಿಂತ ಹೆಚ್ಚು ಜನ ಈ ಸೋಂಕಿನಿಂದಾಗಿ ಮೃತಪಡುವಂತೆ ಮಾಡಿದೆ. ಪದೇ ಪದೇ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು ಉಂಟಾಗುತ್ತಿವೆ, ಜೊತೆಯಲ್ಲಿ ಡ್ರಗ್ಸ್ ನಂತಹ ಅಪಾಯಕಾರಿ ಚಟುವಟಿಕೆಗಳು ರಾಜ್ಯವನ್ನು ಆವರಿಸಿಕೊಂಡಿವೆ.
ಇಂತಹ ಸನ್ನಿವೇಶದಲ್ಲಿ ಅಧಿವೇಶನವನ್ನು ನಡೆಸಲಾಗುತ್ತಿದೆ. ಆದರೆ ಅಧಿವೇಶನದ ಸಮಯ ಮಾತ್ರ ಯಾವುದಕ್ಕೂ ಸಾಕಾಗುವುದಿಲ್ಲ. ಜನರ ಮೇಲೆ ಕಾಳಜಿ ಇಲ್ಲದೆ ನೆಪ ಮಾತ್ರಕ್ಕೆ ಅಧಿವೇಶನ ನಡೆಸಲು ಉದ್ದೇಶಿಸುವಂತೆ ಕಾಣಿಸುತ್ತಿದೆ. ಹಲವು ಜನ ವಿರೋಧಿಯಾದ ಸುಗ್ರಿವಾಜ್ಞೆಗಳನ್ನು ಚರ್ಚೆಯನ್ನೇ ನಡೆಸದೆ ಅಂಗೀಕಾರ ಪಡೆಯಲು ಯತ್ನಿಸುತ್ತಿರುವುದು ಅತ್ಯಂತ ಜನ ದ್ರೋಹಿಯಾದ, ಬೇಜವಾಬ್ದಾರಿಯುತವಾದ ಮತ್ತು ದುಷ್ಟತನದ ಪರಮಾವಧಿಯಂತೆ ಕಾಣುತ್ತಿದೆ. ಸರ್ಕಾರ ಈ ವಿಚಾರದಲ್ಲಿ ಅತ್ಯಂತ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿದೆ.
‘ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005’ರ ಸೆಕ್ಷನ್ 3 ರಂತೆ ಕಡ್ಡಾಯವಾಗಿ 60 ದಿನಗಳಿಗೆ ಕಡಿಮೆ ಇಲ್ಲದಂತೆ ಪ್ರತಿ ವರ್ಷ ಅಧಿವೇಶನಗಳನ್ನು ನಡೆಸಬೇಕು ಎಂದಿದೆ. ಸೆಕ್ಷನ್ 4ರ ಪ್ರಕಾರ ವರ್ಷದಲ್ಲಿ ಒಟ್ಟು 4 ಅಧಿವೇಶನವನ್ನು ನಡೆಸಬೇಕು. ಜನವರಿಯಲ್ಲಿ 15, ಮಾರ್ಚ್ ತಿಂಗಳಲ್ಲಿ 20, ಜುಲೈ ತಿಂಗಳಲ್ಲಿ 15 ಮತ್ತು ನವೆಂಬರ್ ತಿಂಗಳಿನಲ್ಲಿ ಕನಿಷ್ಠ 10 ದಿನಗಳಷ್ಟು ಸೇರಿ ಒಟ್ಟು ಕನಿಷ್ಠ 60 ದಿನಗಳಷ್ಟು ಅಧಿವೇಶನವನ್ನು ನಡೆಸಬೇಕಾಗುತ್ತದೆ. ಆದರೆ ಬಿ.ಜೆ.ಪಿ ಆಡಳಿತದ ಸರ್ಕಾರವು ಸಂಸದೀಯ ವ್ಯವಸ್ಥೆಯನ್ನು ನಿರಂತರವಾಗಿ ಹಾಳುಗೆಡವುತ್ತಿದೆ. ಅಧಿವೇಶನಗಳನ್ನು ಕರೆದು ಚರ್ಚೆ ನಡೆಸುವುದನ್ನು ನಾಮಕಾವಸ್ಥೆ ಕೆಲಸವೆಂದು ಭಾವಿಸಿ ವರ್ತಿಸುತ್ತಿದೆ.
ಕೇವಲ 8 ದಿನಗಳಲ್ಲಿ ಇಷ್ಟೊಂದು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಿಲ್ಲ. ಹಾಗಾಗಿ ಈ ಅಧಿವೇಶನವನ್ನು ಕನಿಷ್ಠ 3 ವಾರಗಳ ಕಾಲ ಅಂದರೆ ಅಕ್ಟೋಬರ್ 15 ರವರೆಗೆ ವಿಸ್ತರಿಸಬೇಕೆಂದು ಆಗ್ರಹಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.